ಚುನಾವಣೆ ದಿನಾಂಕ ಘೋಷಣೆ ಆಗುವುದಕ್ಕೆ ಮೊದಲೇ ಆಡಳಿತ ಪಕ್ಷದ ಶಾಸಕರು ಮತ್ತು ಸಚಿವರು ತಮಗೆ ಬೇಕಾದ ಅಧಿಕಾರಿಗಳನ್ನು ತಾವಯ ಪ್ರತಿನಿಧಿಸುವ ತಾಲ್ಲೂಕು ಮತ್ತು ಜಿಲ್ಲೆಗಳಲ್ಲಿ ನೇಮಕ ಮಾಡಿಕೊಂಡಿದ್ದಾರೆ. ಭಾರಿ ಸಂಖ್ಯೆಯಲ್ಲಿ ನಡೆದ ಈ ವರ್ಗಾವಣೆಯಿಂದ ಚುನಾವಣೆಯಲ್ಲಿ ಅಕ್ರಮ ನಡೆಯಬಹುದು ಎಂಬುದಾಗಿ ವಿರೋಧ ಪಕ್ಷಗಳು ವ್ಯಕ್ತಪಡಿಸಿದ್ದವು. ಆದರೆ, ಇಲ್ಲಿಯವರೆಗೆ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಮೂಲಗಳು ಹೇಳಿವೆ.