<p><strong>ನಂಗಲಿ</strong> <strong>(ಕೋಲಾರ ಜಿಲ್ಲೆ):</strong> ಮುಳಬಾಗಿಲು ತಾಲ್ಲೂಕಿನ ಮುಷ್ಟೂರು ಗ್ರಾಮದಲ್ಲಿ ಏಳು ತಿಂಗಳ ಹಿಂದೆ ನಡೆದಿದ್ದ ‘ಮರ್ಯಾದೆಗೇಡು ಹತ್ಯೆ’ ಈಗ ಬಹಿರಂಗವಾಗಿದೆ. ಪತಿ ಜತೆ ಸಂಸಾರ ನಡೆಸಲು ನಿರಾಕರಿಸಿದ್ದ ಮಗಳನ್ನು ಮರ್ಯಾದೆಗೆ ಅಂಜಿ ತೋಟದಲ್ಲಿ ಕೊಂದು, ಸುಟ್ಟು ಹಾಕಿದ್ದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪ್ರಥಮ ಪಿಯುಸಿ ಓದುತ್ತಿದ್ದ ಮರವೇಮನೆ ಗ್ರಾಮದ ಅರ್ಚಿತಾ (17) ಕೊಲೆಯಾದ ಯುವತಿ. ಮೇ 21ರಂದು ಗಂಡನ ಮನೆಯಿಂದ ಕರೆ ತರುವಾಗ ಆಕೆಯ ತಂದೆ ರವಿ, ತೋಟದ ಮನೆಗೆ ಕರೆದೊಯ್ದು ಬಡಿಗೆಯಿಂದ ಹೊಡೆದು ಕೊಂದಿದ್ದು, ಅಲ್ಲಿಯೇ ಸುಟ್ಟುಹಾಕಿದ್ದ. </p>.<p>ತಿಗಳ ಸಮುದಾಯದ ಅರ್ಚಿತಾ ತನ್ನ ಸಹೋದರ ಸಂಬಂಧಿ ಯುವಕನನ್ನೇ (ಚಿಕ್ಕಪ್ಪನ ಮಗ) ಪ್ರೀತಿಸುತ್ತಿದ್ದಳು. ಈ ವಿಚಾರ ಗೊತ್ತಾಗುತ್ತಲೇ ಪೋಷಕರು ಕೋಲಾರ ತಾಲ್ಲೂಕಿನ ವೇಮಗಲ್ ಬಳಿಯ ಜೋಡಿ ಕೃಷ್ಣಪುರ ಗ್ರಾಮದ ತಮ್ಮದೇ ಸಮುದಾಯದ ಯುವಕನೊಂದಿಗೆ ಮದುವೆ ಮಾಡಿಕೊಟ್ಟಿದ್ದರು.</p>.<p>‘ಪತಿ ಜತೆ ಸಂಸಾರ ನಡೆಸಲು ನಿರಾಕರಿಸಿದ ಮಗಳನ್ನು ತಂದೆಯೇ ಹೋಗಿ ಮೇ 21ರಂದು ವಾಪಸ್ ಕರೆ ತಂದಿದ್ದ. ಗ್ರಾಮಕ್ಕೆ ಬರುವಾಗ ತೋಟದ ಮನೆಗೆ ಕರೆದೊಯ್ದು ಮಗಳನ್ನು ಕೊಂದು ಹಾಕಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೂಗರ್ಜಿಯಿಂದ ಬಯಲು: ಅರ್ಚಿತಾ ಕಾಣಿಸುತ್ತಿಲ್ಲ ಎಂದು ನಂಗಲಿ ಪೊಲೀಸ್ ಠಾಣೆಗೆ ಮೂಗರ್ಜಿಯೊಂದು ಬಂದಿತ್ತು. ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆಯೇ, ‘ಮಗಳು ಕಾಣೆಯಾಗಿದ್ದಾಳೆ’ ಎಂದು ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಯುವತಿಯ ತಂದೆಯನ್ನು ನಾಲ್ಕು ದಿನದ ಹಿಂದೆ ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಕೊಲೆ ವಿಷಯ ಬಹಿರಂಗವಾಗಿದೆ. ಮರ್ಯಾದೆಗೆ ಅಂಜಿ ಮಗಳನ್ನು ತಾನೇ ಕೊಂದಿದ್ದಾಗಿ ಯುವತಿಯ ತಂದೆ ಒಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅರ್ಚಿತಾಳನ್ನು ಕೊಂದು ಸುಟ್ಟು ಹಾಕಿದ ಸ್ಥಳಕ್ಕೆ ಎಫ್ಎಸ್ಎಲ್ ತಂಡದೊಂದಿಗೆ ತೆರಳಿದ ಪೊಲೀಸರಿಗೆ ಸುಟ್ಟ ಮೂಳೆಗಳು ಲಭಿಸಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಗಲಿ</strong> <strong>(ಕೋಲಾರ ಜಿಲ್ಲೆ):</strong> ಮುಳಬಾಗಿಲು ತಾಲ್ಲೂಕಿನ ಮುಷ್ಟೂರು ಗ್ರಾಮದಲ್ಲಿ ಏಳು ತಿಂಗಳ ಹಿಂದೆ ನಡೆದಿದ್ದ ‘ಮರ್ಯಾದೆಗೇಡು ಹತ್ಯೆ’ ಈಗ ಬಹಿರಂಗವಾಗಿದೆ. ಪತಿ ಜತೆ ಸಂಸಾರ ನಡೆಸಲು ನಿರಾಕರಿಸಿದ್ದ ಮಗಳನ್ನು ಮರ್ಯಾದೆಗೆ ಅಂಜಿ ತೋಟದಲ್ಲಿ ಕೊಂದು, ಸುಟ್ಟು ಹಾಕಿದ್ದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪ್ರಥಮ ಪಿಯುಸಿ ಓದುತ್ತಿದ್ದ ಮರವೇಮನೆ ಗ್ರಾಮದ ಅರ್ಚಿತಾ (17) ಕೊಲೆಯಾದ ಯುವತಿ. ಮೇ 21ರಂದು ಗಂಡನ ಮನೆಯಿಂದ ಕರೆ ತರುವಾಗ ಆಕೆಯ ತಂದೆ ರವಿ, ತೋಟದ ಮನೆಗೆ ಕರೆದೊಯ್ದು ಬಡಿಗೆಯಿಂದ ಹೊಡೆದು ಕೊಂದಿದ್ದು, ಅಲ್ಲಿಯೇ ಸುಟ್ಟುಹಾಕಿದ್ದ. </p>.<p>ತಿಗಳ ಸಮುದಾಯದ ಅರ್ಚಿತಾ ತನ್ನ ಸಹೋದರ ಸಂಬಂಧಿ ಯುವಕನನ್ನೇ (ಚಿಕ್ಕಪ್ಪನ ಮಗ) ಪ್ರೀತಿಸುತ್ತಿದ್ದಳು. ಈ ವಿಚಾರ ಗೊತ್ತಾಗುತ್ತಲೇ ಪೋಷಕರು ಕೋಲಾರ ತಾಲ್ಲೂಕಿನ ವೇಮಗಲ್ ಬಳಿಯ ಜೋಡಿ ಕೃಷ್ಣಪುರ ಗ್ರಾಮದ ತಮ್ಮದೇ ಸಮುದಾಯದ ಯುವಕನೊಂದಿಗೆ ಮದುವೆ ಮಾಡಿಕೊಟ್ಟಿದ್ದರು.</p>.<p>‘ಪತಿ ಜತೆ ಸಂಸಾರ ನಡೆಸಲು ನಿರಾಕರಿಸಿದ ಮಗಳನ್ನು ತಂದೆಯೇ ಹೋಗಿ ಮೇ 21ರಂದು ವಾಪಸ್ ಕರೆ ತಂದಿದ್ದ. ಗ್ರಾಮಕ್ಕೆ ಬರುವಾಗ ತೋಟದ ಮನೆಗೆ ಕರೆದೊಯ್ದು ಮಗಳನ್ನು ಕೊಂದು ಹಾಕಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೂಗರ್ಜಿಯಿಂದ ಬಯಲು: ಅರ್ಚಿತಾ ಕಾಣಿಸುತ್ತಿಲ್ಲ ಎಂದು ನಂಗಲಿ ಪೊಲೀಸ್ ಠಾಣೆಗೆ ಮೂಗರ್ಜಿಯೊಂದು ಬಂದಿತ್ತು. ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆಯೇ, ‘ಮಗಳು ಕಾಣೆಯಾಗಿದ್ದಾಳೆ’ ಎಂದು ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಯುವತಿಯ ತಂದೆಯನ್ನು ನಾಲ್ಕು ದಿನದ ಹಿಂದೆ ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಕೊಲೆ ವಿಷಯ ಬಹಿರಂಗವಾಗಿದೆ. ಮರ್ಯಾದೆಗೆ ಅಂಜಿ ಮಗಳನ್ನು ತಾನೇ ಕೊಂದಿದ್ದಾಗಿ ಯುವತಿಯ ತಂದೆ ಒಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅರ್ಚಿತಾಳನ್ನು ಕೊಂದು ಸುಟ್ಟು ಹಾಕಿದ ಸ್ಥಳಕ್ಕೆ ಎಫ್ಎಸ್ಎಲ್ ತಂಡದೊಂದಿಗೆ ತೆರಳಿದ ಪೊಲೀಸರಿಗೆ ಸುಟ್ಟ ಮೂಳೆಗಳು ಲಭಿಸಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>