<p><strong>ಕೋಲಾರ:</strong> ‘ಮುಳಬಾಗಿಲು ತಾಲ್ಲೂಕಿನ ಅಗರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ಕುಮಾರ್ ಹಾಗೂ ಅಲ್ಲಿನ ಗ್ರಾಮಸ್ಥರು ನೀರು ಸರಬರಾಜು ವಿಚಾರದಲ್ಲಿ ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಜಲಗಾರ ಬಿ.ವಿ.ಗಂಗಾಧರ್ ಆರೋಪಿಸಿದರು.</p>.<p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಾನು ದುಗ್ಗಸಂದ್ರ ಹೋಬಳಿ ವ್ಯಾಪ್ತಿಯ ಅಗರ ಗ್ರಾ.ಪಂ ಜಲಗಾರನಾಗಿ ಕೆಲಸ ಮಾಡುತ್ತಿದ್ದೇನೆ. ವೈಯಕ್ತಿಕ ವಿಚಾರಕ್ಕೆ ಅಲ್ಲಿನ ಪಿಡಿಒ ಹಾಗೂ ಜನರು ಒಟ್ಟಾಗಿ ನನಗೆ ತೊಂದರೆ ಕೊಡುತ್ತಿದ್ದಾರೆ’ ಎಂದು ದೂರಿದರು.</p>.<p>‘ನೀರು ಹರಿಸುವ ಘಟಕದಿಂದ ವಿದ್ಯುತ್ ಕಳ್ಳತನ ಮಾಡಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ವಿದ್ಯುತ್ ಕಳವು ತಡೆಗೆ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳು ನನಗೆ ಸಹಾಯ ಮಾಡಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಮುಳಬಾಗಿಲು ತಾಲ್ಲೂಕಿನ ಅಗರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ಕುಮಾರ್ ಹಾಗೂ ಅಲ್ಲಿನ ಗ್ರಾಮಸ್ಥರು ನೀರು ಸರಬರಾಜು ವಿಚಾರದಲ್ಲಿ ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಜಲಗಾರ ಬಿ.ವಿ.ಗಂಗಾಧರ್ ಆರೋಪಿಸಿದರು.</p>.<p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಾನು ದುಗ್ಗಸಂದ್ರ ಹೋಬಳಿ ವ್ಯಾಪ್ತಿಯ ಅಗರ ಗ್ರಾ.ಪಂ ಜಲಗಾರನಾಗಿ ಕೆಲಸ ಮಾಡುತ್ತಿದ್ದೇನೆ. ವೈಯಕ್ತಿಕ ವಿಚಾರಕ್ಕೆ ಅಲ್ಲಿನ ಪಿಡಿಒ ಹಾಗೂ ಜನರು ಒಟ್ಟಾಗಿ ನನಗೆ ತೊಂದರೆ ಕೊಡುತ್ತಿದ್ದಾರೆ’ ಎಂದು ದೂರಿದರು.</p>.<p>‘ನೀರು ಹರಿಸುವ ಘಟಕದಿಂದ ವಿದ್ಯುತ್ ಕಳ್ಳತನ ಮಾಡಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ವಿದ್ಯುತ್ ಕಳವು ತಡೆಗೆ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳು ನನಗೆ ಸಹಾಯ ಮಾಡಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>