ನವದೆಹಲಿ: ವಿರೋಧ ಪಕ್ಷಗಳೆಲ್ಲಾ ಒಂದಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿವೆ. ಪ್ರಳಯ ಬಂದಾಗ ಹಾವು, ಮುಂಗುಸಿ, ಬೆಕ್ಕು, ನಾಯಿ, ಚಿರತೆ ಮತ್ತು ಸಿಂಹಗಳೆಲ್ಲಾ ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ ಮರ ಹತ್ತಿ ರಕ್ಷಣೆ ಪಡೆಯುತ್ತವೆ ಎಂದು ವಿಪಕ್ಷಗಳನ್ನು ಅಮಿತ್ ಶಾ ಗೇಲಿ ಮಾಡಿದ್ದಾರೆ.
ಬಿಜೆಪಿಯ 38ನೇ ಸಂಸ್ಥಾಪನಾ ದಿನದ ಅಂಗವಾಗಿ ಮುಂಬೈನಲ್ಲಿ ನಡೆದ ರ್ಯಾಲಿಯಲ್ಲಿ ಅಮಿತ್ ಶಾ ವಿರೋಧ ಪಕ್ಷಗಳ ವಿರುದ್ದ ಟೀಕಾ ಪ್ರಹಾರ ಮಾಡಿದ್ದಾರೆ.