<p><strong>ಕೋಲಾರ</strong>: ಸರ್ಕಾರಿ ಶಾಲೆಗಳಲ್ಲಿನ 6ನೇ ತರಗತಿಯಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಬೋಧನೆ ಮಾಡಲು ಆಯ್ಕೆಯಾಗಿರುವ ಶಿಕ್ಷಕ ಅಭ್ಯರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ಇತ್ತೀಚೆಗೆ ನೇಮಕಾತಿ ಆದೇಶಪತ್ರ ವಿತರಿಸಿದರು.</p>.<p>ಜಿಲ್ಲೆಯಲ್ಲಿ ಶಿಕ್ಷಕ ಅಭ್ಯರ್ಥಿಗಳ 198 ಹುದ್ದೆ ಖಾಲಿ ಇವೆ. ಆದರೆ, ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ 29 ಹುದ್ದೆ ಮಾತ್ರ ಭರ್ತಿ ಮಾಡಿ, ಆಯ್ಕೆಯಾದವರಿಗೆ ಆದೇಶಪತ್ರ ವಿತರಿಸಲಾಯಿತು.</p>.<p>‘ಶಿಕ್ಷಕರ ಹುದ್ದೆಗೆ ಆಯ್ಕೆಯಾಗಲು ಅರ್ಹ ವಿದ್ಯಾರ್ಹತೆಯ ನಂತರ ಸಿಇಟಿ ಹಾಗೂ ಟಿಇಟಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗಬೇಕು.ಈ ಸಂಬಂಧ 29 ಮಂದಿ ಮಾತ್ರ ಅರ್ಹತೆ ಪಡೆದುಕೊಂಡು ಇದೀಗ ಶಿಕ್ಷಕರಾಗಿ ಆಯ್ಕೆಯಾಗಿದ್ದಾರೆ’ ಎಂದು ರತ್ನಯ್ಯ ತಿಳಿಸಿದರು.</p>.<p>‘ಸಮಾಜ ವಿಜ್ಞಾನ ಹುದ್ದೆಗಳಿಗೆ 14 ಮಂದಿ, ಇಂಗ್ಲಿಷ್ ವಿಷಯಕ್ಕೆ 13 ಹಾಗೂ ವಿಜ್ಞಾನ- ಗಣಿತ ಶಿಕ್ಷಕರಾಗಿ ಇಬ್ಬರು ಅರ್ಹತೆಯೊಂದಿಗೆ ಆಯ್ಕೆಯಾಗಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಇಲಾಖೆ ಡಿವೈಪಿಸಿ ಮೋಹನ್ಬಾಬು, ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ಎವೈಪಿಸಿ ಸಿದ್ದೇಶ್, ವಿಷಯ ಪರಿವೀಕ್ಷಕರಾದ ಕೃಷ್ಣಪ್ಪ, ಶಶಿವಧನ, ಗಾಯತ್ರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಸರ್ಕಾರಿ ಶಾಲೆಗಳಲ್ಲಿನ 6ನೇ ತರಗತಿಯಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಬೋಧನೆ ಮಾಡಲು ಆಯ್ಕೆಯಾಗಿರುವ ಶಿಕ್ಷಕ ಅಭ್ಯರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ಇತ್ತೀಚೆಗೆ ನೇಮಕಾತಿ ಆದೇಶಪತ್ರ ವಿತರಿಸಿದರು.</p>.<p>ಜಿಲ್ಲೆಯಲ್ಲಿ ಶಿಕ್ಷಕ ಅಭ್ಯರ್ಥಿಗಳ 198 ಹುದ್ದೆ ಖಾಲಿ ಇವೆ. ಆದರೆ, ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ 29 ಹುದ್ದೆ ಮಾತ್ರ ಭರ್ತಿ ಮಾಡಿ, ಆಯ್ಕೆಯಾದವರಿಗೆ ಆದೇಶಪತ್ರ ವಿತರಿಸಲಾಯಿತು.</p>.<p>‘ಶಿಕ್ಷಕರ ಹುದ್ದೆಗೆ ಆಯ್ಕೆಯಾಗಲು ಅರ್ಹ ವಿದ್ಯಾರ್ಹತೆಯ ನಂತರ ಸಿಇಟಿ ಹಾಗೂ ಟಿಇಟಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗಬೇಕು.ಈ ಸಂಬಂಧ 29 ಮಂದಿ ಮಾತ್ರ ಅರ್ಹತೆ ಪಡೆದುಕೊಂಡು ಇದೀಗ ಶಿಕ್ಷಕರಾಗಿ ಆಯ್ಕೆಯಾಗಿದ್ದಾರೆ’ ಎಂದು ರತ್ನಯ್ಯ ತಿಳಿಸಿದರು.</p>.<p>‘ಸಮಾಜ ವಿಜ್ಞಾನ ಹುದ್ದೆಗಳಿಗೆ 14 ಮಂದಿ, ಇಂಗ್ಲಿಷ್ ವಿಷಯಕ್ಕೆ 13 ಹಾಗೂ ವಿಜ್ಞಾನ- ಗಣಿತ ಶಿಕ್ಷಕರಾಗಿ ಇಬ್ಬರು ಅರ್ಹತೆಯೊಂದಿಗೆ ಆಯ್ಕೆಯಾಗಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಇಲಾಖೆ ಡಿವೈಪಿಸಿ ಮೋಹನ್ಬಾಬು, ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ಎವೈಪಿಸಿ ಸಿದ್ದೇಶ್, ವಿಷಯ ಪರಿವೀಕ್ಷಕರಾದ ಕೃಷ್ಣಪ್ಪ, ಶಶಿವಧನ, ಗಾಯತ್ರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>