<p><strong>ಕೋಲಾರ:</strong> ನಗರದ ಪ್ರಮುಖ ಉದ್ಯಾನಗಳ ಸ್ಥಿತಿಗತಿ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಎಂ.ಆರ್.ರವಿ ಭಾನುವಾರ ಬೆಳ್ಳಂಬೆಳಿಗ್ಗೆ ಸೈಕಲ್ನಲ್ಲಿ ಪ್ರದಕ್ಷಿಣೆ ನಡೆಸಿದರು.</p>.<p>ಸರ್ವಜ್ಞ ಉದ್ಯಾನ, ಅಂಬೇಡ್ಕರ್ ಉದ್ಯಾನ, ಕುವೆಂಪು ಉದ್ಯಾನ ಸೇರಿದಂತೆ ನಗರದ ವಿವಿಧ ಉದ್ಯಾನಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ‘ಸ್ವಚ್ಛತಾ ಹಿ ಸೇವಾ' ಆಂದೋಲನದ ಭಾಗವಾಗಿ ಈ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅ.2ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ ಪ್ರತಿ ಭಾನುವಾರ ನಗರದ ಉದ್ಯಾನಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಚ್ಛಗೊಳಿಸಲು ನಿರ್ಧರಿಸಲಾಗಿದೆ. ಕೋಲಾರದಲ್ಲಿ ಒಟ್ಟು 19 ಉದ್ಯಾನಗಳಿವೆ.</p>.<p>ಉದ್ಯಾನಗಳಲ್ಲಿ ಬೆಳೆದ ಗಿಡಗಳನ್ನು ಆಗಾಗ್ಗೆ ಕತ್ತರಿಸಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಅಲ್ಲದೆ, ನಡಿಗೆ ಪಥವನ್ನು (ವಾಕಿಂಗ್ ಟ್ರ್ಯಾಕ್) ಸಮತಟ್ಟುಗೊಳಿಸಿ, ವಾಯು ವಿಹಾರಿಗಳಿಗೆ ಅನುಕೂಲ ಮಾಡಿಕೊಡಲು ನಿರ್ದೇಶಿಸಿದರು.</p>.<p>ಸುಮಾರು 85 ವರ್ಷಗಳಷ್ಟು ಹಳೆಯದಾದ ಸರ್ವಜ್ಞ ಉದ್ಯಾನದಲ್ಲಿರುವ ಬ್ಯಾಂಡ್ ಸ್ಟ್ಯಾಂಡ್ ಮತ್ತು ರೇಡಿಯೋ ಕಿಯೋಸ್ಕ್ ದುರಸ್ತಿಪಡಿಸಿ ಬಣ್ಣ ಬಳಿಯುವಂತೆ ತಿಳಿಸಿದರು. ವಾರಾಂತ್ಯಗಳಲ್ಲಿ ಇಂತಹ ಸ್ಥಳಗಳಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸುವಂತೆಯೂ ಸಲಹೆ ನೀಡಿದರು.</p>.<p>ಎಲ್ಲಾ ಉದ್ಯಾನಗಳಲ್ಲಿ ಕುಳಿತುಕೊಳ್ಳಲು ಕಲ್ಲಿನ ಬೆಂಚ್ ಅಳವಡಿಸಿ ಕಾರಂಜಿ ಹಾಗೂ ವಿದ್ಯುತ್ ದೀಪ ಸರಿಪಡಿಸಿ ಉತ್ತಮವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆಗಾಲದಲ್ಲಿ ಉದ್ಯಾನಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಕೊಳಚೆ ನೀರು ಕಾಲುವೆಗಳಲ್ಲಿ ಕಸ ಸೇರದಂತೆ ಎಚ್ಚರ ವಹಿಸಬೇಕು ಎಂದರು.</p>.<p>ಸಾರ್ವಜನಿಕ ಸಹಭಾಗಿತ್ವಕ್ಕೆ ಒತ್ತು: ಅಧಿಕಾರಿಗಳು ಎಷ್ಟೇ ಕೆಲಸ ಮಾಡಿದರೂ ಸಾರ್ವಜನಿಕರ ಸಹಕಾರ ಇಲ್ಲದೆ ಸ್ವಚ್ಛತೆ ಸಾಧ್ಯವಿಲ್ಲ. ಆದ್ದರಿಂದ, ನಗರಸಭೆ ಅಧಿಕಾರಿಗಳೊಂದಿಗೆ ನಾಗರಿಕರು ಕೈಜೋಡಿಸಬೇಕು. ಉದ್ಯಾನ ಸ್ವಚ್ಛವಾಗಿಡುವಂತೆ ಮನವಿ ಮಾಡುವ ಹಾಗೂ ವ್ಯಾಯಾಮ ಪರಿಕರ ಬಳಸುವ ಕ್ರಮ ಕುರಿತ ಫಲಕ ಅಳವಡಿಸುವಂತೆಯೂ ಸೂಚಿಸಿದರು.</p>.<p>‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ನೆನಪಿಗಾಗಿ ಎಲ್ಲಾ ಉದ್ಯಾನಗಳಲ್ಲಿ ಸಸಿ ನೆಡಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಅಂಬಿಕಾ, ನಗರಸಭೆ ಆಯುಕ್ತ ನವೀನ್ ಚಂದ್ರ ಇದ್ದರು.</p>.<div><blockquote>ಅಧಿಕಾರಿಗಳು ಎಷ್ಟೇ ಕೆಲಸ ಮಾಡಿದರೂ ಸಾರ್ವಜನಿಕರ ಸಹಕಾರ ಇಲ್ಲದೆ ಉದ್ಯಾನಗಳ ಸ್ವಚ್ಛತೆ ಸಾಧ್ಯವಿಲ್ಲ. ಆದ್ದರಿಂದ ನಗರಸಭೆ ಅಧಿಕಾರಿ ಸಿಬ್ಬಂದಿ ಜೊತೆ ನಾಗರಿಕರು ಕೈಜೋಡಿಸಬೇಕು. </blockquote><span class="attribution">ಎಂ.ಆರ್.ರವಿ, ಜಿಲ್ಲಾಧಿಕಾರಿ</span></div>.<p>ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಕಸ ಸುರಿಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು. ಇಂತಹ ಸ್ಥಳಗಳಲ್ಲಿ ನಗರಸಭೆ ಅಧಿಕಾರಿಗಳ ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆ ನಿಯೋಜಿಸಿ ಕಣ್ಗಾವಲು ವಹಿಸುವಂತೆ ನಿರ್ದೇಶನ ನೀಡಿದರು. ನಗರದ ಸಮಾನ ಮನಸ್ಕರು ಸೇರಿ ಸಮಿತಿ ರಚಿಸಿಕೊಂಡು ಉದ್ಯಾನಗಳ ನಿರ್ವಹಣೆ ಮತ್ತು ಸ್ವಚ್ಛತಾ ಪಾಲನೆಗೆ ಆಸಕ್ತಿ ವಹಿಸುವಂತೆ ನವಿ ಮಾಡಿದರು. </p><p>ಅಮೃತ್ ಯೋಜನೆಯಡಿ ಕಾಯಕಲ್ಪ 15ನೇ ಹಣಕಾಸು ಯೋಜನೆಯ ಅಮೃತ್ ನಗರೋತ್ಥಾನ ಕಾರ್ಯಕ್ರಮದಡಿಯಲ್ಲಿ ಉದ್ಯಾನಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಎಂ.ಆರ್.ರವಿ ತಿಳಿಸಿದರು. ಉದ್ಯಾನಗಳಲ್ಲಿ ಸಂಗ್ರಹವಾಗುವ ಉದುರಿದ ಎಲೆಗಳು ಮತ್ತು ಹಸಿ ಕಸವನ್ನು ಒಂದು ಮೂಲೆಯಲ್ಲಿ ಗುಂಡಿ ತೋಡಿ ಸಂಗ್ರಹಿಸಿದರೆ ಅದರಿಂದ ಸಾವಯವ ಗೊಬ್ಬರ ತಯಾರಿಸಬಹುದು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ನಗರದ ಪ್ರಮುಖ ಉದ್ಯಾನಗಳ ಸ್ಥಿತಿಗತಿ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಎಂ.ಆರ್.ರವಿ ಭಾನುವಾರ ಬೆಳ್ಳಂಬೆಳಿಗ್ಗೆ ಸೈಕಲ್ನಲ್ಲಿ ಪ್ರದಕ್ಷಿಣೆ ನಡೆಸಿದರು.</p>.<p>ಸರ್ವಜ್ಞ ಉದ್ಯಾನ, ಅಂಬೇಡ್ಕರ್ ಉದ್ಯಾನ, ಕುವೆಂಪು ಉದ್ಯಾನ ಸೇರಿದಂತೆ ನಗರದ ವಿವಿಧ ಉದ್ಯಾನಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ‘ಸ್ವಚ್ಛತಾ ಹಿ ಸೇವಾ' ಆಂದೋಲನದ ಭಾಗವಾಗಿ ಈ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅ.2ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ ಪ್ರತಿ ಭಾನುವಾರ ನಗರದ ಉದ್ಯಾನಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಚ್ಛಗೊಳಿಸಲು ನಿರ್ಧರಿಸಲಾಗಿದೆ. ಕೋಲಾರದಲ್ಲಿ ಒಟ್ಟು 19 ಉದ್ಯಾನಗಳಿವೆ.</p>.<p>ಉದ್ಯಾನಗಳಲ್ಲಿ ಬೆಳೆದ ಗಿಡಗಳನ್ನು ಆಗಾಗ್ಗೆ ಕತ್ತರಿಸಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಅಲ್ಲದೆ, ನಡಿಗೆ ಪಥವನ್ನು (ವಾಕಿಂಗ್ ಟ್ರ್ಯಾಕ್) ಸಮತಟ್ಟುಗೊಳಿಸಿ, ವಾಯು ವಿಹಾರಿಗಳಿಗೆ ಅನುಕೂಲ ಮಾಡಿಕೊಡಲು ನಿರ್ದೇಶಿಸಿದರು.</p>.<p>ಸುಮಾರು 85 ವರ್ಷಗಳಷ್ಟು ಹಳೆಯದಾದ ಸರ್ವಜ್ಞ ಉದ್ಯಾನದಲ್ಲಿರುವ ಬ್ಯಾಂಡ್ ಸ್ಟ್ಯಾಂಡ್ ಮತ್ತು ರೇಡಿಯೋ ಕಿಯೋಸ್ಕ್ ದುರಸ್ತಿಪಡಿಸಿ ಬಣ್ಣ ಬಳಿಯುವಂತೆ ತಿಳಿಸಿದರು. ವಾರಾಂತ್ಯಗಳಲ್ಲಿ ಇಂತಹ ಸ್ಥಳಗಳಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸುವಂತೆಯೂ ಸಲಹೆ ನೀಡಿದರು.</p>.<p>ಎಲ್ಲಾ ಉದ್ಯಾನಗಳಲ್ಲಿ ಕುಳಿತುಕೊಳ್ಳಲು ಕಲ್ಲಿನ ಬೆಂಚ್ ಅಳವಡಿಸಿ ಕಾರಂಜಿ ಹಾಗೂ ವಿದ್ಯುತ್ ದೀಪ ಸರಿಪಡಿಸಿ ಉತ್ತಮವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆಗಾಲದಲ್ಲಿ ಉದ್ಯಾನಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಕೊಳಚೆ ನೀರು ಕಾಲುವೆಗಳಲ್ಲಿ ಕಸ ಸೇರದಂತೆ ಎಚ್ಚರ ವಹಿಸಬೇಕು ಎಂದರು.</p>.<p>ಸಾರ್ವಜನಿಕ ಸಹಭಾಗಿತ್ವಕ್ಕೆ ಒತ್ತು: ಅಧಿಕಾರಿಗಳು ಎಷ್ಟೇ ಕೆಲಸ ಮಾಡಿದರೂ ಸಾರ್ವಜನಿಕರ ಸಹಕಾರ ಇಲ್ಲದೆ ಸ್ವಚ್ಛತೆ ಸಾಧ್ಯವಿಲ್ಲ. ಆದ್ದರಿಂದ, ನಗರಸಭೆ ಅಧಿಕಾರಿಗಳೊಂದಿಗೆ ನಾಗರಿಕರು ಕೈಜೋಡಿಸಬೇಕು. ಉದ್ಯಾನ ಸ್ವಚ್ಛವಾಗಿಡುವಂತೆ ಮನವಿ ಮಾಡುವ ಹಾಗೂ ವ್ಯಾಯಾಮ ಪರಿಕರ ಬಳಸುವ ಕ್ರಮ ಕುರಿತ ಫಲಕ ಅಳವಡಿಸುವಂತೆಯೂ ಸೂಚಿಸಿದರು.</p>.<p>‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ನೆನಪಿಗಾಗಿ ಎಲ್ಲಾ ಉದ್ಯಾನಗಳಲ್ಲಿ ಸಸಿ ನೆಡಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಅಂಬಿಕಾ, ನಗರಸಭೆ ಆಯುಕ್ತ ನವೀನ್ ಚಂದ್ರ ಇದ್ದರು.</p>.<div><blockquote>ಅಧಿಕಾರಿಗಳು ಎಷ್ಟೇ ಕೆಲಸ ಮಾಡಿದರೂ ಸಾರ್ವಜನಿಕರ ಸಹಕಾರ ಇಲ್ಲದೆ ಉದ್ಯಾನಗಳ ಸ್ವಚ್ಛತೆ ಸಾಧ್ಯವಿಲ್ಲ. ಆದ್ದರಿಂದ ನಗರಸಭೆ ಅಧಿಕಾರಿ ಸಿಬ್ಬಂದಿ ಜೊತೆ ನಾಗರಿಕರು ಕೈಜೋಡಿಸಬೇಕು. </blockquote><span class="attribution">ಎಂ.ಆರ್.ರವಿ, ಜಿಲ್ಲಾಧಿಕಾರಿ</span></div>.<p>ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಕಸ ಸುರಿಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು. ಇಂತಹ ಸ್ಥಳಗಳಲ್ಲಿ ನಗರಸಭೆ ಅಧಿಕಾರಿಗಳ ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆ ನಿಯೋಜಿಸಿ ಕಣ್ಗಾವಲು ವಹಿಸುವಂತೆ ನಿರ್ದೇಶನ ನೀಡಿದರು. ನಗರದ ಸಮಾನ ಮನಸ್ಕರು ಸೇರಿ ಸಮಿತಿ ರಚಿಸಿಕೊಂಡು ಉದ್ಯಾನಗಳ ನಿರ್ವಹಣೆ ಮತ್ತು ಸ್ವಚ್ಛತಾ ಪಾಲನೆಗೆ ಆಸಕ್ತಿ ವಹಿಸುವಂತೆ ನವಿ ಮಾಡಿದರು. </p><p>ಅಮೃತ್ ಯೋಜನೆಯಡಿ ಕಾಯಕಲ್ಪ 15ನೇ ಹಣಕಾಸು ಯೋಜನೆಯ ಅಮೃತ್ ನಗರೋತ್ಥಾನ ಕಾರ್ಯಕ್ರಮದಡಿಯಲ್ಲಿ ಉದ್ಯಾನಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಎಂ.ಆರ್.ರವಿ ತಿಳಿಸಿದರು. ಉದ್ಯಾನಗಳಲ್ಲಿ ಸಂಗ್ರಹವಾಗುವ ಉದುರಿದ ಎಲೆಗಳು ಮತ್ತು ಹಸಿ ಕಸವನ್ನು ಒಂದು ಮೂಲೆಯಲ್ಲಿ ಗುಂಡಿ ತೋಡಿ ಸಂಗ್ರಹಿಸಿದರೆ ಅದರಿಂದ ಸಾವಯವ ಗೊಬ್ಬರ ತಯಾರಿಸಬಹುದು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>