<p><strong>ಕೋಲಾರ: ‘</strong>ಜಿಲ್ಲಾ ಕೇಂದ್ರದ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕುಡಿಯುವ ನೀರು ಸೇರಿದಂತೆ ಯಾವುದೇ ಸಮಸ್ಯೆ ಇರಬಾರದು’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಎಸ್ಎನ್ಆರ್ ಆಸ್ಪತ್ರೆಯಲ್ಲಿ ಶನಿವಾರ ನಡೆದ ಸ್ವಚ್ಛತಾ ಆಂದೋಲನದಲ್ಲಿ ಮಾತನಾಡಿ, ‘ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಸಿಗುತ್ತಿದೆ. ಸರ್ಕಾರಿ ಆಸ್ಪತ್ರೆಗಳು ಖಾಸಗಿ ಅಸ್ಪತ್ರೆಗಳಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ’ ಎಂದು ಹೇಳಿದರು.</p>.<p>‘ಆಸ್ಪತ್ರೆಯಲ್ಲಿ ಸ್ವಚ್ಛತೆ ಇರಬೇಕು. ಸ್ವಚ್ಛತೆಯಿಂದಲೇ ಜನರ ಕಾಯಿಲೆಗಳು ಅರ್ಧ ವಾಸಿಯಾಗುತ್ತವೆ. ಕಸ ಕಡ್ಡಿ, ಕಾಫಿ ಲೋಟಗಳನ್ನು ಮನಬಂದಂತೆ ಆಸ್ಪತ್ರೆ ಆವರಣದಲ್ಲಿ ಎಸೆಯಬಾರದು. ತಂಬಾಕು ಪದಾರ್ಥಗಳು ಅಥವಾ ಎಲೆ ಅಡಿಕೆ ಜಿಗಿದು ಉಗಿದಿರುವ ಗುರುತು ಕಾಣಬಾರದು’ ಎಂದು ತಾಕೀತು ಮಾಡಿದರು.</p>.<p>‘ಆಸ್ಪತ್ರೆ ಆವರಣದಲ್ಲಿ ಕೆಲವೆಡೆ ದೀಪಗಳಿಲ್ಲದೆ ತೊಂದರೆ ಆಗಿದೆ ಎಂದು ಸಾರ್ವಜನಿಕರಿಂದ ದೂರು ಬಂದಿವೆ. ಕೆಟ್ಟುರುವ ವಿದ್ಯುತ್ ದೀಪಗಳನ್ನು ಸರಿಪಡಿಸಬೇಕು. ಅಗತ್ಯವಿದ್ದರೆ ಹೊಸ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ಸಿ.ಸಿ ಕ್ಯಾಮೆರಾಗಳು ಸುಸಜ್ಜಿತವಾಗಿರಬೇಕು’ ಎಂದು ಸೂಚಿಸಿದರು.</p>.<p>‘ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಇರಬಾರದು. ಶುದ್ಧ ನೀರಿನ ಘಟಕದಿಂದ ಆಸ್ಪತ್ರೆಗೆ ನಿರಂತರವಾಗಿ ನೀರು ಸರಬರಾಜು ಆಗಬೇಕು. ಆಸ್ಪತ್ರೆಯಲ್ಲಿನ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಯಲ್ಲಿ ಸಂಗ್ರಹವಾಗಿರುವ ನಿರುಪಯುಕ್ತ ಹಳೇ ವಸ್ತುಗಳನ್ನು ವಿಲೇವಾರಿ ಮಾಡಿ’ ಎಂದು ಆದೇಶಿಸಿದರು.</p>.<p>ನಿರ್ಣಾಯಕ ಪಾತ್ರ: ‘ಸ್ವಚ್ಛತೆ ಕಾಪಾಡಲು ಸಾರ್ವಜನಿಕರು ನಗರಸಭೆ ಜತೆ ಕೈಜೋಡಿಸಬೇಕು. ಸ್ವಚ್ಛತೆ ಕಾಪಾಡುವುದು ಪೌರ ಕಾರ್ಮಿಕರ ಜವಾಬ್ದಾರಿ ಎಂಬ ಧೋರಣೆ ಬದಲಾಗಬೇಕು. ಕೊರೊನಾ ಸೋಂಕಿತರನ್ನು ಗುಣಮುಖರಾಗಿಸಲು ಎಸ್ಎನ್ಆರ್ ಆಸ್ಪತ್ರೆ ನಿರ್ಣಾಯಕ ಪಾತ್ರ ವಹಿಸಿದೆ. ಈ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರು ಉತ್ತಮ ಚಿಕಿತ್ಸೆ ಮತ್ತು ಪೌಷ್ಟಿಕ ಆಹಾರದಿಂದ ಬೇಗನೆ ಗುಣಮುಖರಾಗುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ನಗರಸಭೆ ಆಯುಕ್ತ ಶ್ರೀಕಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: ‘</strong>ಜಿಲ್ಲಾ ಕೇಂದ್ರದ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕುಡಿಯುವ ನೀರು ಸೇರಿದಂತೆ ಯಾವುದೇ ಸಮಸ್ಯೆ ಇರಬಾರದು’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಎಸ್ಎನ್ಆರ್ ಆಸ್ಪತ್ರೆಯಲ್ಲಿ ಶನಿವಾರ ನಡೆದ ಸ್ವಚ್ಛತಾ ಆಂದೋಲನದಲ್ಲಿ ಮಾತನಾಡಿ, ‘ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಸಿಗುತ್ತಿದೆ. ಸರ್ಕಾರಿ ಆಸ್ಪತ್ರೆಗಳು ಖಾಸಗಿ ಅಸ್ಪತ್ರೆಗಳಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ’ ಎಂದು ಹೇಳಿದರು.</p>.<p>‘ಆಸ್ಪತ್ರೆಯಲ್ಲಿ ಸ್ವಚ್ಛತೆ ಇರಬೇಕು. ಸ್ವಚ್ಛತೆಯಿಂದಲೇ ಜನರ ಕಾಯಿಲೆಗಳು ಅರ್ಧ ವಾಸಿಯಾಗುತ್ತವೆ. ಕಸ ಕಡ್ಡಿ, ಕಾಫಿ ಲೋಟಗಳನ್ನು ಮನಬಂದಂತೆ ಆಸ್ಪತ್ರೆ ಆವರಣದಲ್ಲಿ ಎಸೆಯಬಾರದು. ತಂಬಾಕು ಪದಾರ್ಥಗಳು ಅಥವಾ ಎಲೆ ಅಡಿಕೆ ಜಿಗಿದು ಉಗಿದಿರುವ ಗುರುತು ಕಾಣಬಾರದು’ ಎಂದು ತಾಕೀತು ಮಾಡಿದರು.</p>.<p>‘ಆಸ್ಪತ್ರೆ ಆವರಣದಲ್ಲಿ ಕೆಲವೆಡೆ ದೀಪಗಳಿಲ್ಲದೆ ತೊಂದರೆ ಆಗಿದೆ ಎಂದು ಸಾರ್ವಜನಿಕರಿಂದ ದೂರು ಬಂದಿವೆ. ಕೆಟ್ಟುರುವ ವಿದ್ಯುತ್ ದೀಪಗಳನ್ನು ಸರಿಪಡಿಸಬೇಕು. ಅಗತ್ಯವಿದ್ದರೆ ಹೊಸ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ಸಿ.ಸಿ ಕ್ಯಾಮೆರಾಗಳು ಸುಸಜ್ಜಿತವಾಗಿರಬೇಕು’ ಎಂದು ಸೂಚಿಸಿದರು.</p>.<p>‘ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಇರಬಾರದು. ಶುದ್ಧ ನೀರಿನ ಘಟಕದಿಂದ ಆಸ್ಪತ್ರೆಗೆ ನಿರಂತರವಾಗಿ ನೀರು ಸರಬರಾಜು ಆಗಬೇಕು. ಆಸ್ಪತ್ರೆಯಲ್ಲಿನ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಯಲ್ಲಿ ಸಂಗ್ರಹವಾಗಿರುವ ನಿರುಪಯುಕ್ತ ಹಳೇ ವಸ್ತುಗಳನ್ನು ವಿಲೇವಾರಿ ಮಾಡಿ’ ಎಂದು ಆದೇಶಿಸಿದರು.</p>.<p>ನಿರ್ಣಾಯಕ ಪಾತ್ರ: ‘ಸ್ವಚ್ಛತೆ ಕಾಪಾಡಲು ಸಾರ್ವಜನಿಕರು ನಗರಸಭೆ ಜತೆ ಕೈಜೋಡಿಸಬೇಕು. ಸ್ವಚ್ಛತೆ ಕಾಪಾಡುವುದು ಪೌರ ಕಾರ್ಮಿಕರ ಜವಾಬ್ದಾರಿ ಎಂಬ ಧೋರಣೆ ಬದಲಾಗಬೇಕು. ಕೊರೊನಾ ಸೋಂಕಿತರನ್ನು ಗುಣಮುಖರಾಗಿಸಲು ಎಸ್ಎನ್ಆರ್ ಆಸ್ಪತ್ರೆ ನಿರ್ಣಾಯಕ ಪಾತ್ರ ವಹಿಸಿದೆ. ಈ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರು ಉತ್ತಮ ಚಿಕಿತ್ಸೆ ಮತ್ತು ಪೌಷ್ಟಿಕ ಆಹಾರದಿಂದ ಬೇಗನೆ ಗುಣಮುಖರಾಗುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ನಗರಸಭೆ ಆಯುಕ್ತ ಶ್ರೀಕಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>