<p>ಪ್ರಜಾವಾಣಿ ವಾರ್ತೆ</p>.<p>ಮುಳಬಾಗಿಲು: ವಿದ್ಯಾರ್ಥಿಗಳು ಬೇಸಿಗೆ ರಜೆಯಲ್ಲಿ ಸುಖಾ ಸಮನೆ ಕಾಲಹರಣ ಮಾಡಬಾರದು. ಮೊಬೈಲ್ ಮೋಹಕ್ಕೆ ಬಲಿಯಾಗದೆ ಗ್ರಾಮೀಣ ಪ್ರದೇಶದಲ್ಲಿರುವ ಕೇಂದ್ರ ಗ್ರಂಥಾಲಯಗಳಲ್ಲಿ ಆಟ–ಪಾಠ ಜತೆಗೆ ಪುಸ್ತಕಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಅರಿವು ಕೇಂದ್ರದ ಗ್ರಂಥಾಲಯ ಮೇಲ್ವಿಚಾರಕ ನರಸಿಂಹಶೆಟ್ಟಿ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಮುದಿಗೆರೆ ಮಜರಾ ಗಡ್ಡೂರು ಗ್ರಾಮ ಪಂಚಾಯಿತಿ ಅರಿವು ಕೇಂದ್ರದ ಗ್ರಂಥಾಲಯದಲ್ಲಿ ಶನಿವಾರದಿಂದ ಮೇ10ರವರೆಗೂ ನಡೆಯುವ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮನರಂಜನೆ, ಸಾಮಾನ್ಯ ಜ್ಞಾನ, ಕಥೆ, ನಾಟಕ ಮತ್ತಿತರ ಪುಸ್ತಕಗಳನ್ನು ಓದುವುದರ ಜೊತೆಗೆ ಗಣಕ ಯಂತ್ರದಲ್ಲಿ ಆಟ ಪಾಠ ಕಲಿತು ರಜೆಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆ.ಸರಿತಾ, ರಾಜು, ಮಲ್ಲೆಕುಪ್ಪಅಂಬರೀಶ್, ಸಂಪತ್, ಚಿನ್ನಪ್ಪಯ್ಯ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಮುಳಬಾಗಿಲು: ವಿದ್ಯಾರ್ಥಿಗಳು ಬೇಸಿಗೆ ರಜೆಯಲ್ಲಿ ಸುಖಾ ಸಮನೆ ಕಾಲಹರಣ ಮಾಡಬಾರದು. ಮೊಬೈಲ್ ಮೋಹಕ್ಕೆ ಬಲಿಯಾಗದೆ ಗ್ರಾಮೀಣ ಪ್ರದೇಶದಲ್ಲಿರುವ ಕೇಂದ್ರ ಗ್ರಂಥಾಲಯಗಳಲ್ಲಿ ಆಟ–ಪಾಠ ಜತೆಗೆ ಪುಸ್ತಕಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಅರಿವು ಕೇಂದ್ರದ ಗ್ರಂಥಾಲಯ ಮೇಲ್ವಿಚಾರಕ ನರಸಿಂಹಶೆಟ್ಟಿ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಮುದಿಗೆರೆ ಮಜರಾ ಗಡ್ಡೂರು ಗ್ರಾಮ ಪಂಚಾಯಿತಿ ಅರಿವು ಕೇಂದ್ರದ ಗ್ರಂಥಾಲಯದಲ್ಲಿ ಶನಿವಾರದಿಂದ ಮೇ10ರವರೆಗೂ ನಡೆಯುವ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮನರಂಜನೆ, ಸಾಮಾನ್ಯ ಜ್ಞಾನ, ಕಥೆ, ನಾಟಕ ಮತ್ತಿತರ ಪುಸ್ತಕಗಳನ್ನು ಓದುವುದರ ಜೊತೆಗೆ ಗಣಕ ಯಂತ್ರದಲ್ಲಿ ಆಟ ಪಾಠ ಕಲಿತು ರಜೆಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆ.ಸರಿತಾ, ರಾಜು, ಮಲ್ಲೆಕುಪ್ಪಅಂಬರೀಶ್, ಸಂಪತ್, ಚಿನ್ನಪ್ಪಯ್ಯ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>