<p><strong>ಕೋಲಾರ:</strong> ರಾಜ್ಯ ಕಾಂಗ್ರೆಸ್ ಸರ್ಕಾರ ರಚನೆ ವೇಳೆ ಕೊಟ್ಟ ಮಾತು ಹಾಗೂ ಒಪ್ಪಂದದಂತೆ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಡಿಕೆಶಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಘೋಷಣೆ ಕೂಗಿದರು.</p>.<p>ಪ್ರತಿಭಟನೆಗೂ ಮೊದಲು ಕಾರ್ಯಕರ್ತರು ಶಕ್ತಿದೇವತೆ ಕೋಲಾರಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ನಂತರ ಆವರಣದಲ್ಲಿ 101 ಈಡುಗಾಯಿ ಒಡೆದರು. ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರವಿರುವ ಪೋಸ್ಟರ್ ಹಿಡಿದು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮೊಳಗಿಸಿದರು.</p>.<p>ಸಂಘದ ಜಿಲ್ಲಾ ಅಧ್ಯಕ್ಷ ಸುಜಿತ್ ಗೌಡ ಮಾತನಾಡಿ, ‘ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಎರಡೂವರೆ ವರ್ಷ ಪೂರೈಸಿದ್ದಾರೆ. ಉಳಿದ ಎರಡು ವರ್ಷಗಳನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು. ಈ ಸಂಬಂಧ ಪೂಜೆ ಸಲ್ಲಿಸಿ ಅರ್ಚನೆ ಮಾಡಿದ್ದೇವೆ’ ಎಂದರು.</p>.<p>ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷ ಪುನಃ ಅಧಿಕಾರ ಹಿಡಿಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದಿದೆ. 2018ರಲ್ಲಿ 78 ಸ್ಥಾನ ಪಡೆದಿದ್ದ ಪಕ್ಷ 2023ರಲ್ಲಿ 136 ಸ್ಥಾನ ಪಡೆಯಿತು. ಅವರಿಗೆ ಎಲ್ಲಾ ಶಾಸಕರ ಬೆಂಬಲ ಇದೆ ಎಂದು ಹೇಳಿದರು.</p>.<p>ಯಾವುದೇ ರೀತಿಯ ಒಪ್ಪಂದ ಆಗಿಲ್ಲ ಎಂಬುದಾಗಿ ಸಿದ್ದರಾಮಯ್ಯ, ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳುತ್ತಾರೆ ಎಂಬುದಕ್ಕೆ, ‘ಸಿದ್ದರಾಮಯ್ಯ ಕೂಡ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತಾರೆ ಎಂಬ ವಿಶ್ವಾಸವಿದೆ. ಜನವರಿಯಲ್ಲಿ ಆ ಕಾಲ ಕೂಡಿಬರಲಿದೆ. ಹರಕೆ ಹೊತ್ತುಕೊಂಡಿದ್ದ ಮುಖ್ಯಮಂತ್ರಿ ಆದ ಬಳಿಕ ಮತ್ತೆ ಪೂಜೆ ಸಲ್ಲಿಸುತ್ತೇವೆ’ ಎಂದರು.</p>.<p>ಈ ವೇಳೆ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ರಾಜ್ಯ ಕಾಂಗ್ರೆಸ್ ಸರ್ಕಾರ ರಚನೆ ವೇಳೆ ಕೊಟ್ಟ ಮಾತು ಹಾಗೂ ಒಪ್ಪಂದದಂತೆ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಡಿಕೆಶಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಘೋಷಣೆ ಕೂಗಿದರು.</p>.<p>ಪ್ರತಿಭಟನೆಗೂ ಮೊದಲು ಕಾರ್ಯಕರ್ತರು ಶಕ್ತಿದೇವತೆ ಕೋಲಾರಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ನಂತರ ಆವರಣದಲ್ಲಿ 101 ಈಡುಗಾಯಿ ಒಡೆದರು. ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರವಿರುವ ಪೋಸ್ಟರ್ ಹಿಡಿದು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮೊಳಗಿಸಿದರು.</p>.<p>ಸಂಘದ ಜಿಲ್ಲಾ ಅಧ್ಯಕ್ಷ ಸುಜಿತ್ ಗೌಡ ಮಾತನಾಡಿ, ‘ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಎರಡೂವರೆ ವರ್ಷ ಪೂರೈಸಿದ್ದಾರೆ. ಉಳಿದ ಎರಡು ವರ್ಷಗಳನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು. ಈ ಸಂಬಂಧ ಪೂಜೆ ಸಲ್ಲಿಸಿ ಅರ್ಚನೆ ಮಾಡಿದ್ದೇವೆ’ ಎಂದರು.</p>.<p>ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷ ಪುನಃ ಅಧಿಕಾರ ಹಿಡಿಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದಿದೆ. 2018ರಲ್ಲಿ 78 ಸ್ಥಾನ ಪಡೆದಿದ್ದ ಪಕ್ಷ 2023ರಲ್ಲಿ 136 ಸ್ಥಾನ ಪಡೆಯಿತು. ಅವರಿಗೆ ಎಲ್ಲಾ ಶಾಸಕರ ಬೆಂಬಲ ಇದೆ ಎಂದು ಹೇಳಿದರು.</p>.<p>ಯಾವುದೇ ರೀತಿಯ ಒಪ್ಪಂದ ಆಗಿಲ್ಲ ಎಂಬುದಾಗಿ ಸಿದ್ದರಾಮಯ್ಯ, ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳುತ್ತಾರೆ ಎಂಬುದಕ್ಕೆ, ‘ಸಿದ್ದರಾಮಯ್ಯ ಕೂಡ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತಾರೆ ಎಂಬ ವಿಶ್ವಾಸವಿದೆ. ಜನವರಿಯಲ್ಲಿ ಆ ಕಾಲ ಕೂಡಿಬರಲಿದೆ. ಹರಕೆ ಹೊತ್ತುಕೊಂಡಿದ್ದ ಮುಖ್ಯಮಂತ್ರಿ ಆದ ಬಳಿಕ ಮತ್ತೆ ಪೂಜೆ ಸಲ್ಲಿಸುತ್ತೇವೆ’ ಎಂದರು.</p>.<p>ಈ ವೇಳೆ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>