‘ಸತತ 7 ಬಾರಿ ಸಂಸದರಾಗಿ ಮತ್ತು 2 ಬಾರಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದೀರಿ. ಇದೀಗ ಸಿಡಬ್ಲ್ಯೂಸಿ ಸದಸ್ಯರಾಗಿರುವ ತಾವು ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಪಕ್ಷಕ್ಕೆ ಬಲ ತುಂಬಬೇಕು. ಅಲ್ಲದೇ, ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಗೆ ಸಹಕಾರ ನೀಡಬೇಕು’ ಎಂದು ಶಿವಕುಮಾರ್ ಅವರು ಮುನಿಯಪ್ಪ ಅವರಿಗೆ ಮನವಿ ಮಾಡಿದರು.