<p><strong>ಕೋಲಾರ: </strong>‘ಯಾವುದೇ ರೀತಿಯ ಅಕ್ರಮಕ್ಕೆ ಎಡೆ ಮಾಡದಂತೆ ಶಾಂತಿಯುತವಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕು’ ಎಂದು ಪರೀಕ್ಷಾ ಕೇಂದ್ರ ಮುಖ್ಯಸ್ಥ ಹಾಗೂ ಪ್ರಾಂಶುಪಾಲ ಎನ್.ಮುನಿಕೃಷ್ಣಪ್ಪ ತಿಳಿಸಿದರು.</p>.<p>ನಗರದ ಪ್ರಕೃತಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಸೋಮವಾರ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿ, ‘ಮಾ.4ರಿಂದ 24ರತನಕ ನಡೆಯಲಿದ್ದು, ಪ್ರಕೃತಿ ಕಾಲೇಜಿನ ಕೇಂದ್ರದಲ್ಲಿ 592 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ’ ಎಂದರು.</p>.<p>‘ಪ್ರಕೃತಿ ಕಾಲೇಜು ಕೇಂದ್ರಕ್ಕೆ ಮೊರಾರ್ಜಿ ದೇಸಾಯಿ ಕಾಲೇಜು, ಮಿಲ್ಲತ್ ಪದವಿ ಪೂರ್ವ ಕಾಲೇಜು, ಮದನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗೆ ಬರುತ್ತಾರೆ. ಅವರಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>‘ಎಲ್ಲಾ ಕೊಠಡಿಗಳಲ್ಲಿ ಪೀಠೋಪಕರಣ, ಆಸನಗಳು ಸಮರ್ಪಕವಾಗಿರಬೇಕು. ಕೇಂದ್ರದ ಸುತ್ತಲೂ 200 ಮೀಟರ್ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೊಬೈಲ್ ಸೇರಿ ಯಾವುದೇ ವಿದ್ಯುನ್ಮಾನ ಉಪಕರಣಗಳನ್ನು ತರುವಂತಿಲ್ಲ. ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಉಪಯೋಗಿಸಬೇಕು’ ಎಂದು ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲ ಮಹೇಶ್, ಉಪನ್ಯಾಸಕರಾದ ಸುಬ್ರಹ್ಮಣ್ಯ ಹೆಗಡೆ, ನಾಗೇಶ್, ಟಿ.ಕೆ.ನಟರಾಜ್, ಜೆ.ಜಿ.ನಾಗರಾಜ, ಅಪ್ಪಯ್ಯಾಚಾರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಯಾವುದೇ ರೀತಿಯ ಅಕ್ರಮಕ್ಕೆ ಎಡೆ ಮಾಡದಂತೆ ಶಾಂತಿಯುತವಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕು’ ಎಂದು ಪರೀಕ್ಷಾ ಕೇಂದ್ರ ಮುಖ್ಯಸ್ಥ ಹಾಗೂ ಪ್ರಾಂಶುಪಾಲ ಎನ್.ಮುನಿಕೃಷ್ಣಪ್ಪ ತಿಳಿಸಿದರು.</p>.<p>ನಗರದ ಪ್ರಕೃತಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಸೋಮವಾರ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿ, ‘ಮಾ.4ರಿಂದ 24ರತನಕ ನಡೆಯಲಿದ್ದು, ಪ್ರಕೃತಿ ಕಾಲೇಜಿನ ಕೇಂದ್ರದಲ್ಲಿ 592 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ’ ಎಂದರು.</p>.<p>‘ಪ್ರಕೃತಿ ಕಾಲೇಜು ಕೇಂದ್ರಕ್ಕೆ ಮೊರಾರ್ಜಿ ದೇಸಾಯಿ ಕಾಲೇಜು, ಮಿಲ್ಲತ್ ಪದವಿ ಪೂರ್ವ ಕಾಲೇಜು, ಮದನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗೆ ಬರುತ್ತಾರೆ. ಅವರಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>‘ಎಲ್ಲಾ ಕೊಠಡಿಗಳಲ್ಲಿ ಪೀಠೋಪಕರಣ, ಆಸನಗಳು ಸಮರ್ಪಕವಾಗಿರಬೇಕು. ಕೇಂದ್ರದ ಸುತ್ತಲೂ 200 ಮೀಟರ್ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೊಬೈಲ್ ಸೇರಿ ಯಾವುದೇ ವಿದ್ಯುನ್ಮಾನ ಉಪಕರಣಗಳನ್ನು ತರುವಂತಿಲ್ಲ. ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಉಪಯೋಗಿಸಬೇಕು’ ಎಂದು ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲ ಮಹೇಶ್, ಉಪನ್ಯಾಸಕರಾದ ಸುಬ್ರಹ್ಮಣ್ಯ ಹೆಗಡೆ, ನಾಗೇಶ್, ಟಿ.ಕೆ.ನಟರಾಜ್, ಜೆ.ಜಿ.ನಾಗರಾಜ, ಅಪ್ಪಯ್ಯಾಚಾರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>