ಸೌಕರ್ಯ ಕಲ್ಪಿಸಿಲ್ಲ: ‘2018ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರೈತರು, ನೇಕಾರರ ಸಾಲ ಮನ್ನಾ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ, ಅವರಿಗೆ ಬಹುಮತ ಸಿಗಲಿಲ್ಲ. ನಂತರ ಮುಖ್ಯಮಂತ್ರಿಯಾದ ಎಚ್.ಡಿ.ಕುಮಾರಸ್ವಾಮಿ ಅವರು ಜವಳಿ ಖಾತೆಯನ್ನು ತಮ್ಮ ಬಳಿಯಲ್ಲೇ ಇಟ್ಟುಕೊಂಡಿದ್ದು, 9 ತಿಂಗಳಿಂದ ಸಮುದಾಯಕ್ಕೆ ಯಾವುದೇ ಸೌಕರ್ಯ ಕಲ್ಪಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.