ಚಿಕಿತ್ಸೆಗೆ ಸ್ಪಂದಿಸಲಿಲ್ಲ: ಕೋಟೇಶ್ವರ್ರ ಆರೋಪ ನಿರಾಕರಿಸಿದ ಪಶು ವೈದ್ಯ ಅನಂತಕುಮಾರ್, ‘ನಾಯಿಯ ರಕ್ತ ಪರೀಕ್ಷೆ ಮಾಡಿ ಔಷಧ ನೀಡಲಾಗಿದೆ. ನಾಯಿಯನ್ನು ಬದುಕಿಸಲು ಕೈಲಾದ ಪ್ರಯತ್ನ ಮಾಡಿದೆವು. ಆದರೆ, ನಾಯಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆ ನಾವೇನು ಮಾಡಲು ಸಾಧ್ಯ? ಆಸ್ಪತ್ರೆಯಲ್ಲಿ ಔಷಧ ದಾಸ್ತಾನು ಮುಗಿದಿದ್ದರಿಂದ ಹೊರಗೆ ಖರೀದಿಸುವಂತೆ ಚೀಟಿ ಬರೆದುಕೊಟ್ಟಿದ್ದೆವು’ ಎಂದು ಸಮಜಾಯಿಷಿ ನೀಡಿದರು.