<p><strong>ಮುಳಬಾಗಿಲು:</strong> ಇತ್ತೀಚೆಗೆ ಪಾಕಿಸ್ತಾನದ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷಗಳಿಂದ ಮುನ್ನೆಚ್ಚರಿಕೆ ಕ್ರಮಗಳಿಗಾಗಿ ಕೋಲಾರ ಜಿಲ್ಲಾ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಮುಳಬಾಗಿಲು ನಗರದಲ್ಲಿ ತಪಾಸಣೆ ನಡೆಸಿ, ಜನನಿಬಿಡ ಪ್ರದೇಶಗಳನ್ನು ಪರಿಶೀಲಿಸಲಾಯಿತು.</p>.<p>ನಗರದ ಬಸ್ ನಿಲ್ದಾಣ, ಕೆಇಬಿ ವೃತ್ತ, ಆಸ್ಪತ್ರೆ ಮತ್ತಿತರ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು. ಶ್ವಾನದಳದಿಂದ ಪ್ರಯಾಣಿಕರ ಲಗೇಜುಗಳು, ಚೇರು, ಬೆಂಚು, ಮೆಟ್ಟಿಲುಗಳ ಸಂಧಿಗಳನ್ನೆಲ್ಲಾ ತಪಾಸಣೆ ನಡೆಸಲಾಯಿತು.</p>.<p>ಕೋಲಾರದಿಂದ ಬಂದಿದ್ದ ಪರಿಶೀಲನಾ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಳಬಾಗಿಲು ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಜನ ಹೆಚ್ಚಾಗಿ ಸೇರುವ ಸ್ಥಳಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಜಾಗೃತಿ ಮೂಡಿಸಿದರು.</p>.<p>ಇತ್ತೀಚಿಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅನುಚಿತವಾಗಿ ವರ್ತನೆ ತೋರುತ್ತಿದ್ದಾರೆ. ದೇಶದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಪ್ರಕಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾಜದ ಶಾಂತಿ ಕದಡಬಹುದಾದ ಚಟುವಟಿಕೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಪರಿಶೀಲನಾ ಕಾರ್ಯ ಕೂಗೊಳ್ಳಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ಇತ್ತೀಚೆಗೆ ಪಾಕಿಸ್ತಾನದ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷಗಳಿಂದ ಮುನ್ನೆಚ್ಚರಿಕೆ ಕ್ರಮಗಳಿಗಾಗಿ ಕೋಲಾರ ಜಿಲ್ಲಾ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಮುಳಬಾಗಿಲು ನಗರದಲ್ಲಿ ತಪಾಸಣೆ ನಡೆಸಿ, ಜನನಿಬಿಡ ಪ್ರದೇಶಗಳನ್ನು ಪರಿಶೀಲಿಸಲಾಯಿತು.</p>.<p>ನಗರದ ಬಸ್ ನಿಲ್ದಾಣ, ಕೆಇಬಿ ವೃತ್ತ, ಆಸ್ಪತ್ರೆ ಮತ್ತಿತರ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು. ಶ್ವಾನದಳದಿಂದ ಪ್ರಯಾಣಿಕರ ಲಗೇಜುಗಳು, ಚೇರು, ಬೆಂಚು, ಮೆಟ್ಟಿಲುಗಳ ಸಂಧಿಗಳನ್ನೆಲ್ಲಾ ತಪಾಸಣೆ ನಡೆಸಲಾಯಿತು.</p>.<p>ಕೋಲಾರದಿಂದ ಬಂದಿದ್ದ ಪರಿಶೀಲನಾ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಳಬಾಗಿಲು ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಜನ ಹೆಚ್ಚಾಗಿ ಸೇರುವ ಸ್ಥಳಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಜಾಗೃತಿ ಮೂಡಿಸಿದರು.</p>.<p>ಇತ್ತೀಚಿಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅನುಚಿತವಾಗಿ ವರ್ತನೆ ತೋರುತ್ತಿದ್ದಾರೆ. ದೇಶದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಪ್ರಕಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾಜದ ಶಾಂತಿ ಕದಡಬಹುದಾದ ಚಟುವಟಿಕೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಪರಿಶೀಲನಾ ಕಾರ್ಯ ಕೂಗೊಳ್ಳಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>