ಮುಳಬಾಗಿಲು: ‘ಮನುಷ್ಯನ ಬೆಳವಣಿಗೆಯಲ್ಲಿ ಕ್ರೀಡೆಯ ಪಾತ್ರ ಹಿರಿದು. ಮಾನಸಿಕ, ದೈಹಿಕ ಮತ್ತು ಬೌದ್ಧಿಕ ಅಭಿವೃದ್ಧಿಯಲ್ಲಿ ಹೆಚ್ಚು ಪ್ರಾಮುಖ್ಯತೆ ಹೊಂದಿರುವುದರಿಂದ ಕ್ರೀಡೆಗೆ ಎಲ್ಲರ ಸಹಕಾರ ಅಗತ್ಯ’ ಎಂದು ರಾಜ್ಯ ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್ ನುಡಿದರು.
ತಾಲ್ಲೂಕಿನ ದೇವರಾಯಸಮುದ್ರ ಗ್ರಾ.ಪಂ ವ್ಯಾಪ್ತಿಯ ಮಲ್ಲಪ್ಪನಹಳ್ಳಿಯಲ್ಲಿ ಸಮೃದ್ಧಿ ಮಂಜುನಾಥ್ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ವಿಕ್ಕಿಬಾಲ್ ಕ್ರಿಕೆಟ್ ಪಂದ್ಯಾ ವಳಿಗೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡಾ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲು ತಾಲ್ಲೂಕಿನ ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಗಳಿಗೆ ವೈಯಕ್ತಿಕವಾಗಿ ತನ್ನಿಂ ದಾಗುವ ಸಹಕಾರ ನೀಡಲಾಗುವುದು ಎಂದರು.
ಮುಖಂಡ ಎಂ.ವಿ. ವೆಂಕಟೇಶನ್ ಮಾತನಾಡಿ, ರಾಜಕೀಯವನ್ನು ಕೇವಲ ಚುನಾವಣಾ ಸಮಯಕ್ಕೆ ಮೀಸಲಿಡಬೇಕು ಎಂದರು.