ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌ ಟೂರ್ನಿಗೆ ಚಾಲನೆ

Last Updated 12 ಏಪ್ರಿಲ್ 2021, 5:15 IST
ಅಕ್ಷರ ಗಾತ್ರ

ಮುಳಬಾಗಿಲು: ‘ಮನುಷ್ಯನ ಬೆಳವಣಿಗೆಯಲ್ಲಿ ಕ್ರೀಡೆಯ ಪಾತ್ರ ಹಿರಿದು. ಮಾನಸಿಕ, ದೈಹಿಕ ಮತ್ತು ಬೌದ್ಧಿಕ ಅಭಿವೃದ್ಧಿಯಲ್ಲಿ ಹೆಚ್ಚು ಪ್ರಾಮುಖ್ಯತೆ ಹೊಂದಿರುವುದರಿಂದ ಕ್ರೀಡೆಗೆ ಎಲ್ಲರ ಸಹಕಾರ ಅಗತ್ಯ’ ಎಂದು ರಾಜ್ಯ ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್ ನುಡಿದರು.

ತಾಲ್ಲೂಕಿನ ದೇವರಾಯಸಮುದ್ರ ಗ್ರಾ.ಪಂ ವ್ಯಾಪ್ತಿಯ ಮಲ್ಲಪ್ಪನಹಳ್ಳಿಯಲ್ಲಿ ಸಮೃದ್ಧಿ ಮಂಜುನಾಥ್ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ವಿಕ್ಕಿಬಾಲ್ ಕ್ರಿಕೆಟ್ ಪಂದ್ಯಾ ವಳಿಗೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡಾ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲು ತಾಲ್ಲೂಕಿನ ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಗಳಿಗೆ ವೈಯಕ್ತಿಕವಾಗಿ ತನ್ನಿಂ ದಾಗುವ ಸಹಕಾರ ನೀಡಲಾಗುವುದು ಎಂದರು.

ಮುಖಂಡ ಎಂ.ವಿ. ವೆಂಕಟೇಶನ್ ಮಾತನಾಡಿ, ರಾಜಕೀಯವನ್ನು ಕೇವಲ ಚುನಾವಣಾ ಸಮಯಕ್ಕೆ ಮೀಸಲಿಡಬೇಕು ಎಂದರು.

ಮುಖಂಡರಾದ ನಾರಾಯಣಪ್ಪ, ಕಾಮನೂರು ಶ್ರೀನಾಥ್‌ ಗೌಡ, ಕೆ.ಟಿ. ನಾರಾಯಣಸ್ವಾಮಿ, ಮುಳಬಾಗಿಲು ನವೀನ್, ಕೀಲುಹೊಳಲಿ ಹರೀಶ್, ರವೀಂದ್ರ, ಮಂಜುನಾಥ್, ಜಮ್ಮನಹಳ್ಳಿ ಶ್ರೀನಿವಾಸ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT