<p><strong>ಶ್ರೀನಿವಾಸಪುರ: </strong>ಪಟ್ಟಣದ ಕಟ್ಟೆಕೆಳಗಿನಪಾಳ್ಯ, ಅಂಬೇಡ್ಕರ್ ಪಾಳ್ಯ, ಇಂದಿರಾನಗರ, ಶಿವಪುರ, ಕೆ.ಕಾಲೊನಿ, ಬಂಬೂ ಬಜಾರ್ ಸೇರಿದಂತೆ ವಿವಿಧೆಡೆ ಮಾದಕವಸ್ತು ಸೇವನೆ ದುಷ್ಪರಿಣಾಮಗಳ ಬಗ್ಗೆ ಸೋಮವಾರ ಅರಿವು, ಜನಜಾಗೃತಿ ಸಭೆ ನಡೆಸಲಾಯಿತು.</p>.<p>ಮಾದಕ ವಸ್ತುವಿನ ಮಾರಾಟ ಜಾಲದ ಮೂಲಕ ವಿದ್ಯಾರ್ಥಿಗಳಿಗೆ, ಯುವಕರಿಗೆ ಪ್ರಾಥಮಿಕ ಹಂತದಲ್ಲಿ ಉಚಿತವಾಗಿ ಅವುಗಳನ್ನು ಒದಗಿಸಿ, ಬಳಿಕ ವ್ಯಸನಕ್ಕೆ ಅಧೀನರಾಗುವಂತೆ ಮಾಡಲಾಗುತ್ತದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತೆ ಸೈಯದ್ ಹಜಮತ್ ಆಫ್ರಿನ್ ಎಚ್ಚರಿಕೆ ನೀಡಿದರು.</p>.<p>ಗುಟ್ಕಾ, ಧೂಮಪಾನ, ಮದ್ಯಪಾನ, ಗಾಂಜಾ ಮತ್ತು ಮೆಡಿಕಲ್ಗಳಲ್ಲಿ ಅನಧಿಕೃತವಾಗಿ ಸಿಗುವಂತಹ ಮಾದಕ ದ್ರವ್ಯಗಳ ಕುರಿತು ತಿಳಿಸಿದರು.</p>.<p>ಪ್ರಸ್ತುತ ದಿನಗಳಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಡ್ರಗ್ಸ್ ಮಾಫಿಯಾ ಮಾರಾಟಗಾರರು ಅಂತರ್ಜಾಲದ ಮೂಲಕ ಮಾರಾಟ ಮಾಡುತ್ತಿದ್ದಾರೆ. ಪಾರ್ಸಲ್ಗಳ ಮೂಲಕ ಕಳಿಸುವ ಹಂತಕ್ಕೆ ಬೆಳೆದಿದ್ದಾರೆ ಎಂದರು.</p>.<p>ಜಿಲ್ಲಾ ಅಬಕಾರಿ ಉಪಧೀಕ್ಷಕ ಶ್ರೀನಿವಾಸಮೂರ್ತಿ, ಅಬಕಾರಿ ನಿರೀಕ್ಷರಾದ ಪುಷ್ಪಾ, ರಮಾಮಣಿ, ಶಶಿಕಲಾ, ಮುನಿರತ್ನಮ್ಮ, ರವೀಂದ್ರ ಆರ್., ಉಪನಿರೀಕ್ಷಕರು ವೇಣುಗೋಪಾಲ್, ಬಾಲಕೃಷ್ಣ, ಗಿರೀಶ್ ಬಾಬು, ನಾಗರಾಜ್, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ: </strong>ಪಟ್ಟಣದ ಕಟ್ಟೆಕೆಳಗಿನಪಾಳ್ಯ, ಅಂಬೇಡ್ಕರ್ ಪಾಳ್ಯ, ಇಂದಿರಾನಗರ, ಶಿವಪುರ, ಕೆ.ಕಾಲೊನಿ, ಬಂಬೂ ಬಜಾರ್ ಸೇರಿದಂತೆ ವಿವಿಧೆಡೆ ಮಾದಕವಸ್ತು ಸೇವನೆ ದುಷ್ಪರಿಣಾಮಗಳ ಬಗ್ಗೆ ಸೋಮವಾರ ಅರಿವು, ಜನಜಾಗೃತಿ ಸಭೆ ನಡೆಸಲಾಯಿತು.</p>.<p>ಮಾದಕ ವಸ್ತುವಿನ ಮಾರಾಟ ಜಾಲದ ಮೂಲಕ ವಿದ್ಯಾರ್ಥಿಗಳಿಗೆ, ಯುವಕರಿಗೆ ಪ್ರಾಥಮಿಕ ಹಂತದಲ್ಲಿ ಉಚಿತವಾಗಿ ಅವುಗಳನ್ನು ಒದಗಿಸಿ, ಬಳಿಕ ವ್ಯಸನಕ್ಕೆ ಅಧೀನರಾಗುವಂತೆ ಮಾಡಲಾಗುತ್ತದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತೆ ಸೈಯದ್ ಹಜಮತ್ ಆಫ್ರಿನ್ ಎಚ್ಚರಿಕೆ ನೀಡಿದರು.</p>.<p>ಗುಟ್ಕಾ, ಧೂಮಪಾನ, ಮದ್ಯಪಾನ, ಗಾಂಜಾ ಮತ್ತು ಮೆಡಿಕಲ್ಗಳಲ್ಲಿ ಅನಧಿಕೃತವಾಗಿ ಸಿಗುವಂತಹ ಮಾದಕ ದ್ರವ್ಯಗಳ ಕುರಿತು ತಿಳಿಸಿದರು.</p>.<p>ಪ್ರಸ್ತುತ ದಿನಗಳಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಡ್ರಗ್ಸ್ ಮಾಫಿಯಾ ಮಾರಾಟಗಾರರು ಅಂತರ್ಜಾಲದ ಮೂಲಕ ಮಾರಾಟ ಮಾಡುತ್ತಿದ್ದಾರೆ. ಪಾರ್ಸಲ್ಗಳ ಮೂಲಕ ಕಳಿಸುವ ಹಂತಕ್ಕೆ ಬೆಳೆದಿದ್ದಾರೆ ಎಂದರು.</p>.<p>ಜಿಲ್ಲಾ ಅಬಕಾರಿ ಉಪಧೀಕ್ಷಕ ಶ್ರೀನಿವಾಸಮೂರ್ತಿ, ಅಬಕಾರಿ ನಿರೀಕ್ಷರಾದ ಪುಷ್ಪಾ, ರಮಾಮಣಿ, ಶಶಿಕಲಾ, ಮುನಿರತ್ನಮ್ಮ, ರವೀಂದ್ರ ಆರ್., ಉಪನಿರೀಕ್ಷಕರು ವೇಣುಗೋಪಾಲ್, ಬಾಲಕೃಷ್ಣ, ಗಿರೀಶ್ ಬಾಬು, ನಾಗರಾಜ್, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>