<p><strong>ಕೋಲಾರ:</strong> ‘ಪ್ರಜಾವಾಣಿ’ಯಲ್ಲಿ ಸೋಮವಾರ ಪ್ರಕಟವಾಗಿದ್ದ ‘ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಘಾಟು’ ಎಂಬ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿ ಎಂ.ಆರ್.ರವಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ‘ನಾರ್ಕೊ ಸಮನ್ವಯ ಸಮಿತಿ’ ಸಭೆ ನಡೆದಿದ್ದು, ಮಾದಕ ವಸ್ತುಗಳ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. </p>.ಕೋಲಾರ | ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಘಾಟು!.<p>ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಎಲ್ಲಾ ಕೈಗಾರಿಕೆ ಹಾಗೂ ಕಂಪನಿಗಳ ಮುಖ್ಯಸ್ಥರ ಸಭೆ ನಡೆಸಿ ಅವರವರ ಕಾರ್ಖಾನೆ ಹಾಗೂ ಕಂಪನಿಗಳಲ್ಲಿ ಮಾದಕ ವಸ್ತುಗಳ ನಿಯಂತ್ರಣ ಸಮಿತಿ ರಚನೆ ಮಾಡಲು ಸೂಚಿಸಲಾಗುವುದು ಎಂದು ಎಂ.ಆರ್.ರವಿ ಹೇಳಿದರು.</p><p>‘ಈಚೆಗೆ ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಹೆಚ್ಚು ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ಇಡಬೇಕಾದ ಅವಶ್ಯವಿದೆ’ ಎಂದರು.</p><p>‘ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಣೆ, ಮಾರಾಟ ಹಾಗೂ ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>‘ತಂಬಾಕು ಉತ್ಪನ್ನ ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ಒಳಗಾಗುತ್ತಿದ್ದಾರೆ. ಇವರಿಗೆ ಅರಿವು ಮೂಡಿಸುವುದು ಸೇರಿದಂತೆ ಮನಪರಿವರ್ತನೆಯ ಕಾರ್ಯಕ್ರಮಗಳನ್ನು ಕಾರ್ಮಿಕ ಇಲಾಖೆ ನಡೆಸಬೇಕು. ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿಯೇ ಇಂಥ ಕಾರ್ಯಕ್ರಮ ನಡೆಸಿ ವ್ಯಸನ ಬಿಡಿಸಬೇಕು’ ಎಂದು ನಿರ್ದೇಶಿಸಿದರು.</p><p>ಸಭೆಯಲ್ಲಿ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಕೆಜಿಎಪ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಅಬಕಾರಿ ಉಪ ಆಯುಕ್ತೆ ಸೈಯದ್ ಅಜ್ಮತ್ ಆಫ್ರಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಪ್ರಜಾವಾಣಿ’ಯಲ್ಲಿ ಸೋಮವಾರ ಪ್ರಕಟವಾಗಿದ್ದ ‘ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಘಾಟು’ ಎಂಬ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿ ಎಂ.ಆರ್.ರವಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ‘ನಾರ್ಕೊ ಸಮನ್ವಯ ಸಮಿತಿ’ ಸಭೆ ನಡೆದಿದ್ದು, ಮಾದಕ ವಸ್ತುಗಳ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. </p>.ಕೋಲಾರ | ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಘಾಟು!.<p>ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಎಲ್ಲಾ ಕೈಗಾರಿಕೆ ಹಾಗೂ ಕಂಪನಿಗಳ ಮುಖ್ಯಸ್ಥರ ಸಭೆ ನಡೆಸಿ ಅವರವರ ಕಾರ್ಖಾನೆ ಹಾಗೂ ಕಂಪನಿಗಳಲ್ಲಿ ಮಾದಕ ವಸ್ತುಗಳ ನಿಯಂತ್ರಣ ಸಮಿತಿ ರಚನೆ ಮಾಡಲು ಸೂಚಿಸಲಾಗುವುದು ಎಂದು ಎಂ.ಆರ್.ರವಿ ಹೇಳಿದರು.</p><p>‘ಈಚೆಗೆ ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಹೆಚ್ಚು ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ಇಡಬೇಕಾದ ಅವಶ್ಯವಿದೆ’ ಎಂದರು.</p><p>‘ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಣೆ, ಮಾರಾಟ ಹಾಗೂ ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>‘ತಂಬಾಕು ಉತ್ಪನ್ನ ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ಒಳಗಾಗುತ್ತಿದ್ದಾರೆ. ಇವರಿಗೆ ಅರಿವು ಮೂಡಿಸುವುದು ಸೇರಿದಂತೆ ಮನಪರಿವರ್ತನೆಯ ಕಾರ್ಯಕ್ರಮಗಳನ್ನು ಕಾರ್ಮಿಕ ಇಲಾಖೆ ನಡೆಸಬೇಕು. ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿಯೇ ಇಂಥ ಕಾರ್ಯಕ್ರಮ ನಡೆಸಿ ವ್ಯಸನ ಬಿಡಿಸಬೇಕು’ ಎಂದು ನಿರ್ದೇಶಿಸಿದರು.</p><p>ಸಭೆಯಲ್ಲಿ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಕೆಜಿಎಪ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಅಬಕಾರಿ ಉಪ ಆಯುಕ್ತೆ ಸೈಯದ್ ಅಜ್ಮತ್ ಆಫ್ರಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>