ಸೇವೆ ಅಗತ್ಯ: ‘ದೇಶದ ಪಂಚವಾರ್ಷಿಕ ಯೋಜನೆ ವ್ಯವಹಾರಗಳು ಬ್ಯಾಂಕ್ ಮೂಲಕವೇ ನಡೆಯುತ್ತದೆ. ಶಿಕ್ಷಣ, ಸಂಶೋಧನೆ, ಕೃಷಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಯಾವುದೇ ಕ್ಷೇತ್ರದ ಅಭಿವೃದ್ಧಿಗೆ ಆರ್ಥಿಕ ಸೇವೆ ಅಗತ್ಯವಾಗಿದ್ದು, ನೆರವು ಕಲ್ಪಿಸುವ ಜವಾಬ್ದಾರಿ ಬ್ಯಾಂಕ್ಗಳ ಮೇಲಿದೆ’ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜ್ ಅಭಿಪ್ರಾಯಪಟ್ಟರು.