ರಘುನಾಥರೆಡ್ಡಿ ಅವರ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ಸಂಬಂಧ ನಾಗೇಂದ್ರ ಅವರು ಇತ್ತೀಚೆಗೆ ವಿಚಾರಣೆ ನಡೆಸಿದ್ದರು. ಆಗ ರಘುನಾಥರೆಡ್ಡಿ ಅವರು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಒಂದು ಶಾಲೆಯಿಂದ ಮತ್ತೊಂದು ಶಾಲೆಗೆ ನಿಯಮಬಾಹಿರವಾಗಿ ನಿಯೋಜಿಸಿರುವುದು, ನಗರ ಹಾಗೂ ಹೊರವಲಯದ ಶಾಲೆಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಶಿಕ್ಷಕರನ್ನು ನಿಯೋಜಿಸಿರುವುದು, ನಿಯೋಜನೆ ಪೂರ್ವದಲ್ಲಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಅನುಪಾತವನ್ನು ಪರಿಗಣಿಸದೆ ಲೋಪ ಎಸಗಿರುವುದು ತನಿಖೆಯಲ್ಲಿ ಗೊತ್ತಾಗಿತ್ತು.