ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತವ್ಯ ಲೋಪ: ಬಿಇಒ ಅಮಾನತು

Last Updated 6 ಫೆಬ್ರುವರಿ 2019, 16:12 IST
ಅಕ್ಷರ ಗಾತ್ರ

ಕೋಲಾರ: ನಿಯಮಬಾಹಿರವಾಗಿ ಶಿಕ್ಷಕರ ನಿಯೋಜನೆ ಮಾಡಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ರಘುನಾಥರೆಡ್ಡಿ ಅವರನ್ನು ಅಮಾನತುಗೊಳಿಸಿ ಸಾರ್ವಜನಿಕರ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಡಿ.ನಾಗೇಂದ್ರ ಆದೇಶ ಹೊರಡಿಸಿದ್ದಾರೆ.

ರಘುನಾಥರೆಡ್ಡಿ ಅವರ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ಸಂಬಂಧ ನಾಗೇಂದ್ರ ಅವರು ಇತ್ತೀಚೆಗೆ ವಿಚಾರಣೆ ನಡೆಸಿದ್ದರು. ಆಗ ರಘುನಾಥರೆಡ್ಡಿ ಅವರು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಒಂದು ಶಾಲೆಯಿಂದ ಮತ್ತೊಂದು ಶಾಲೆಗೆ ನಿಯಮಬಾಹಿರವಾಗಿ ನಿಯೋಜಿಸಿರುವುದು, ನಗರ ಹಾಗೂ ಹೊರವಲಯದ ಶಾಲೆಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಶಿಕ್ಷಕರನ್ನು ನಿಯೋಜಿಸಿರುವುದು, ನಿಯೋಜನೆ ಪೂರ್ವದಲ್ಲಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಅನುಪಾತವನ್ನು ಪರಿಗಣಿಸದೆ ಲೋಪ ಎಸಗಿರುವುದು ತನಿಖೆಯಲ್ಲಿ ಗೊತ್ತಾಗಿತ್ತು.

ರಘುನಾಥರೆಡ್ಡಿ ಅವರು ಒಬ್ಬ ಶಿಕ್ಷಕರ ನಿಯೋಜನೆ ಮಾಹಿತಿಯನ್ನು ಮಾತ್ರ ಕಡತದಲ್ಲಿ ದಾಖಲಿಸಿ ಉಳಿದ 24 ಶಿಕ್ಷಕರ ನಿಯೋಜನೆಯನ್ನು ಕಡತದಲ್ಲಿ ಅನುಮೋದಿಸಿಯೂ ನಿಯೋಜಿಸಿಲ್ಲ. ಕಚೇರಿ ಕಡತದಲ್ಲಿ ಮಾಹಿತಿ ನಮೂದಿಸದೆ ನಿಯೋಜನೆ ಮಾಡಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದ ಸಂಗತಿ ತನಿಖೆ ವೇಳೆ ಬಯಲಾಗಿತ್ತು.

ಇಲಾಖಾ ಮಾರ್ಗಸೂಚಿ ಅನ್ವಯ ಶಿಕ್ಷಕರ ನಿಯೋಜನೆ ಮತ್ತು ಪ್ರತಿ ನಿಯೋಜನೆ ಮಾಡಲು ಅವಕಾಶ ಇಲ್ಲದಿದ್ದರೂ ರಘುನಾಥರೆಡ್ಡಿ ಅವರು ನಿಯಮಬಾಹಿರವಾಗಿ ನಿಯೋಜಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಅವರು ಬಿಇಒ ಹುದ್ದೆಯಲ್ಲಿ ಮುಂದುವರಿದರೆ ಅಕ್ರಮಕ್ಕೆ ಸಂಬಂಧಪಟ್ಟ ದಾಖಲೆಪತ್ರ ತಿದ್ದುವ ಅಥವಾ ನಾಶಪಡಿಸುವ ಸಾಧ್ಯತೆ ಇರುವುದರಿಂದ ಅಮಾನತು ಮಾಡಲಾಗಿದೆ. ಜತೆಗೆ ಅವರ ವಿರುದ್ಧ ಇಲಾಖಾ ತನಿಖೆ ನಡೆಸಲಾಗುತ್ತದೆ ಎಂದು ನಾಗೇಂದ್ರ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT