<p><strong>ಕೋಲಾರ:</strong> ‘ಪೌಷ್ಟಿಕಾಂಶಭರಿತ ಆಹಾರ ಸೇವನೆಯಿಂದ ಉತ್ತಮ ಆರೋಗ್ಯದ ಜತೆಗೆ ರೋಗ ನಿರೋಧಕ ಶಕ್ತಿಯೂ ದೇಹದಲ್ಲಿ ಹೆಚ್ಚಲಿದೆ. ಇದಕ್ಕಾಗಿ ಹಣ್ಣು, ತರಕಾರಿ, ಸೊಪ್ಪು ಸೇವಿಸಬೇಕು’ ಎಂದು ದೇವರಾಜ ಅರಸು ವೈದ್ಯಕೀಯ ಕಾಲೇಜಿನ ನ್ಯೂಟ್ರಿಷನ್ ವಿಭಾಗದ ಮುಖ್ಯಸ್ಥೆ ಡಾ.ಮಾಧವಿ ರೆಡ್ಡಿ ತಿಳಿಸಿದರು.</p>.<p>ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ಕೋಲಾರ ನ್ಯೂಟ್ರಿಷಿಯನ್ ಎಜುಕೇಷನ್ ಇಂಟ್ರವೆನ್ಷನ್ ಕಾರ್ಯಕ್ರಮದಡಿ ಪೌಷ್ಟಿಕಾಂಶಭರಿತ ಆಹಾರ ನಿರ್ವಹಣೆ ಕುರಿತ ಜಾಗೃತಿ ಭಿತ್ತಿಪತ್ರ ಪ್ರದರ್ಶಿಸಿ ಅವರು ಮಾತನಾಡಿದರು.</p>.<p>‘ಪೌಷ್ಟಿಕಾಂಶದ ಕೊರತೆ ತಪ್ಪಿಸಿ ಆಹಾರವೂ ನಿಮ್ಮ ಔಷಧವಾಗಲಿ’ ಎಂಬ ಧ್ಯೇಯವಾಕ್ಯದೊಂದಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ. ಉತ್ತಮ ಆಹಾರ ಸೇವನೆ ಕುರಿತು ಮಕ್ಕಳು, ಯುವ ಸಮುದಾಯದಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಬಾಲಕರು ಮತ್ತು ಬಾಲಕಿಯರಿಗೆ ವಯಸ್ಸಿಗೆ ಅನುಗುಣವಾಗಿ ಪ್ರತಿನಿತ್ಯ ಸೇವಿಸಬೇಕಾದ ಆಹಾರದ ಚಾರ್ಟ್ ನೀಡಿದ ಅವರು, ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ನಿಮ್ಮದಾಗಿಸಿಕೊಳ್ಳಿ<br />ಎಂದರು.</p>.<p>ಹಣ್ಣು, ಮೊಳಕೆ ಕಾಳು, ಹಸಿ ಕ್ಯಾರೆಟ್, ಮೊಟ್ಟೆ, ಹಾಲು ಸೇವನೆಯಿಂದ ಅಪೌಷ್ಟಿಕತೆ ನಿವಾರಣೆಯಾಗಲಿದೆ. ಜೊತೆಗೆ, ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ<br />ನೀಡಿದರು.</p>.<p>ಮುಖ್ಯಶಿಕ್ಷಕ ಸಿ.ಎನ್. ಪ್ರದೀಪ್ಕುಮಾರ್, ಮಕ್ಕಳಲ್ಲಿನ ಅಪೌಷ್ಟಿಕತೆ ಇಂದು ಇಡೀ ವಿಶ್ವವನ್ನೇ ಕಾಡುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ಸರ್ಕಾರ ಇದರ ನಿವಾರಣೆಗೆ ಅನೇಕ ಪ್ರಯತ್ನಗಳನ್ನು ನಡೆಸುತ್ತಿದೆ. ಗರ್ಭಿಣಿಯರು, ಬಾಣಂತಿಯರಲ್ಲಿ ಉತ್ತಮ ಆರೋಗ್ಯ, ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಯೋಜನೆ ರೂಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ವೈದ್ಯಕೀಯ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಲಕ್ಷ್ಮಣ್, ವೈದ್ಯಕೀಯ ಕಾಲೇಜಿನ ಸಾಹಿತಿ, ರಕ್ಷಿತಾ, ಕಾವ್ಯಾ, ಸೀಮಾ, ಎಸ್ಡಿಎಂಸಿ ಅಧ್ಯಕ್ಷ ಎ. ಮಹೇಂದ್ರ, ಶಿಕ್ಷಕರಾದ ಸಚ್ಚಿದಾನಂದಮೂರ್ತಿ, ಸಿದ್ದೇಶ್ವರಿ, ಗೋಪಾಲಕೃಷ್ಣ, ಭವಾನಿ, ಲೀಲಾ, ಶ್ವೇತಾ, ಸುಗುಣಾ, ವೆಂಕಟರೆಡ್ಡಿ, ಫರೀದಾ, ಶ್ರೀನಿವಾಸಲು, ಡಿ. ಚಂದ್ರಶೇಖರ್<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಪೌಷ್ಟಿಕಾಂಶಭರಿತ ಆಹಾರ ಸೇವನೆಯಿಂದ ಉತ್ತಮ ಆರೋಗ್ಯದ ಜತೆಗೆ ರೋಗ ನಿರೋಧಕ ಶಕ್ತಿಯೂ ದೇಹದಲ್ಲಿ ಹೆಚ್ಚಲಿದೆ. ಇದಕ್ಕಾಗಿ ಹಣ್ಣು, ತರಕಾರಿ, ಸೊಪ್ಪು ಸೇವಿಸಬೇಕು’ ಎಂದು ದೇವರಾಜ ಅರಸು ವೈದ್ಯಕೀಯ ಕಾಲೇಜಿನ ನ್ಯೂಟ್ರಿಷನ್ ವಿಭಾಗದ ಮುಖ್ಯಸ್ಥೆ ಡಾ.ಮಾಧವಿ ರೆಡ್ಡಿ ತಿಳಿಸಿದರು.</p>.<p>ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ಕೋಲಾರ ನ್ಯೂಟ್ರಿಷಿಯನ್ ಎಜುಕೇಷನ್ ಇಂಟ್ರವೆನ್ಷನ್ ಕಾರ್ಯಕ್ರಮದಡಿ ಪೌಷ್ಟಿಕಾಂಶಭರಿತ ಆಹಾರ ನಿರ್ವಹಣೆ ಕುರಿತ ಜಾಗೃತಿ ಭಿತ್ತಿಪತ್ರ ಪ್ರದರ್ಶಿಸಿ ಅವರು ಮಾತನಾಡಿದರು.</p>.<p>‘ಪೌಷ್ಟಿಕಾಂಶದ ಕೊರತೆ ತಪ್ಪಿಸಿ ಆಹಾರವೂ ನಿಮ್ಮ ಔಷಧವಾಗಲಿ’ ಎಂಬ ಧ್ಯೇಯವಾಕ್ಯದೊಂದಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ. ಉತ್ತಮ ಆಹಾರ ಸೇವನೆ ಕುರಿತು ಮಕ್ಕಳು, ಯುವ ಸಮುದಾಯದಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಬಾಲಕರು ಮತ್ತು ಬಾಲಕಿಯರಿಗೆ ವಯಸ್ಸಿಗೆ ಅನುಗುಣವಾಗಿ ಪ್ರತಿನಿತ್ಯ ಸೇವಿಸಬೇಕಾದ ಆಹಾರದ ಚಾರ್ಟ್ ನೀಡಿದ ಅವರು, ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ನಿಮ್ಮದಾಗಿಸಿಕೊಳ್ಳಿ<br />ಎಂದರು.</p>.<p>ಹಣ್ಣು, ಮೊಳಕೆ ಕಾಳು, ಹಸಿ ಕ್ಯಾರೆಟ್, ಮೊಟ್ಟೆ, ಹಾಲು ಸೇವನೆಯಿಂದ ಅಪೌಷ್ಟಿಕತೆ ನಿವಾರಣೆಯಾಗಲಿದೆ. ಜೊತೆಗೆ, ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ<br />ನೀಡಿದರು.</p>.<p>ಮುಖ್ಯಶಿಕ್ಷಕ ಸಿ.ಎನ್. ಪ್ರದೀಪ್ಕುಮಾರ್, ಮಕ್ಕಳಲ್ಲಿನ ಅಪೌಷ್ಟಿಕತೆ ಇಂದು ಇಡೀ ವಿಶ್ವವನ್ನೇ ಕಾಡುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ಸರ್ಕಾರ ಇದರ ನಿವಾರಣೆಗೆ ಅನೇಕ ಪ್ರಯತ್ನಗಳನ್ನು ನಡೆಸುತ್ತಿದೆ. ಗರ್ಭಿಣಿಯರು, ಬಾಣಂತಿಯರಲ್ಲಿ ಉತ್ತಮ ಆರೋಗ್ಯ, ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಯೋಜನೆ ರೂಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ವೈದ್ಯಕೀಯ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಲಕ್ಷ್ಮಣ್, ವೈದ್ಯಕೀಯ ಕಾಲೇಜಿನ ಸಾಹಿತಿ, ರಕ್ಷಿತಾ, ಕಾವ್ಯಾ, ಸೀಮಾ, ಎಸ್ಡಿಎಂಸಿ ಅಧ್ಯಕ್ಷ ಎ. ಮಹೇಂದ್ರ, ಶಿಕ್ಷಕರಾದ ಸಚ್ಚಿದಾನಂದಮೂರ್ತಿ, ಸಿದ್ದೇಶ್ವರಿ, ಗೋಪಾಲಕೃಷ್ಣ, ಭವಾನಿ, ಲೀಲಾ, ಶ್ವೇತಾ, ಸುಗುಣಾ, ವೆಂಕಟರೆಡ್ಡಿ, ಫರೀದಾ, ಶ್ರೀನಿವಾಸಲು, ಡಿ. ಚಂದ್ರಶೇಖರ್<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>