<p><strong>ಕೆಜಿಎಫ್: </strong>ಪ್ರತಿಯೊಬ್ಬ ಮಹಿಳೆಯು ಆರ್ಥಿಕವಾಗಿ ಸಬಲರಾಗಲು ಪ್ರತಿ ಹಳ್ಳಿಗಳಲ್ಲಿಯೂ ಹಾಲು ಉತ್ಪಾದಕರ ಸಹಕಾರ ಸಂಘ ರಚಿಸಬೇಕು. ಇದರಿಂದಾಗಿ ಸಹಕಾರ ರಂಗ ಬೆಳೆಯಲು ಸಾಧ್ಯವಾಗುತ್ತದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.</p>.<p>ರಾಬರ್ಟಸನ್ಪೇಟೆಯಲ್ಲಿ ಬುಧವಾರ ನಡೆದ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಕೋಲಾರ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಹೆಚ್ಚು ಹಾಲು ಉತ್ಪಾದಕರ ಸಹಕಾರ ಸಂಘಗಳು ಇವೆ. ಕೆಜಿಎಫ್ ತಾಲ್ಲೂಕಿನಲ್ಲಿ ಅವುಗಳ ಸಂಖ್ಯೆ ತೀರಾ ಕಡಿಮೆ ಇದೆ. ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲಲ್ಲಿ ಸಂಘ ಸ್ಥಾಪನೆಯಾಗಬೇಕು ಎಂದರು.</p>.<p>ಶಾಸಕಿ ಎಂ. ರೂಪಕಲಾ ಮಾತನಾಡಿ, ಸಹಕಾರ ರಂಗದಿಂದ ಬಡವರ ಜೀವನ ಸುಧಾರಿಸಬಹುದು. ರಾಷ್ಟ್ರೀಕೃತ ಬ್ಯಾಂಕ್ಗಳು ಭದ್ರತೆ ಇಲ್ಲದೆ ಸಾಲ ನೀಡಲು ನಿರಾಕರಿಸಿದಾಗ ಸಹಕಾರ ಕ್ಷೇತ್ರ ಬಡವರ ಪಾಲಿಗೆ ಸಂಜೀವಿನಿಯಾಯಿತು ಎಂದರು.</p>.<p>‘ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಕಟ್ಟಲು ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಹಲವಾರು ಸಂಘಗಳು ಈಗ ಸ್ಥಾಪನೆಯ ಹಂತದಲ್ಲಿದೆ’ ಎಂದು ಹಾಲು ಒಕ್ಕೂಟದ ಡಾ.ವೆಂಕಟರಮಣ ತಿಳಿಸಿದರು.</p>.<p>ಸಹಕಾರ ಯೂನಿಯನ್ ನಿರ್ದೇಶಕಿ ಅರುಣಾ, ನಗರಸಭೆ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ, ಉಪಾಧ್ಯಕ್ಷೆ ದೇವಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುನಂದಮ್ಮ, ಪಾಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್: </strong>ಪ್ರತಿಯೊಬ್ಬ ಮಹಿಳೆಯು ಆರ್ಥಿಕವಾಗಿ ಸಬಲರಾಗಲು ಪ್ರತಿ ಹಳ್ಳಿಗಳಲ್ಲಿಯೂ ಹಾಲು ಉತ್ಪಾದಕರ ಸಹಕಾರ ಸಂಘ ರಚಿಸಬೇಕು. ಇದರಿಂದಾಗಿ ಸಹಕಾರ ರಂಗ ಬೆಳೆಯಲು ಸಾಧ್ಯವಾಗುತ್ತದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.</p>.<p>ರಾಬರ್ಟಸನ್ಪೇಟೆಯಲ್ಲಿ ಬುಧವಾರ ನಡೆದ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಕೋಲಾರ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಹೆಚ್ಚು ಹಾಲು ಉತ್ಪಾದಕರ ಸಹಕಾರ ಸಂಘಗಳು ಇವೆ. ಕೆಜಿಎಫ್ ತಾಲ್ಲೂಕಿನಲ್ಲಿ ಅವುಗಳ ಸಂಖ್ಯೆ ತೀರಾ ಕಡಿಮೆ ಇದೆ. ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲಲ್ಲಿ ಸಂಘ ಸ್ಥಾಪನೆಯಾಗಬೇಕು ಎಂದರು.</p>.<p>ಶಾಸಕಿ ಎಂ. ರೂಪಕಲಾ ಮಾತನಾಡಿ, ಸಹಕಾರ ರಂಗದಿಂದ ಬಡವರ ಜೀವನ ಸುಧಾರಿಸಬಹುದು. ರಾಷ್ಟ್ರೀಕೃತ ಬ್ಯಾಂಕ್ಗಳು ಭದ್ರತೆ ಇಲ್ಲದೆ ಸಾಲ ನೀಡಲು ನಿರಾಕರಿಸಿದಾಗ ಸಹಕಾರ ಕ್ಷೇತ್ರ ಬಡವರ ಪಾಲಿಗೆ ಸಂಜೀವಿನಿಯಾಯಿತು ಎಂದರು.</p>.<p>‘ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಕಟ್ಟಲು ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಹಲವಾರು ಸಂಘಗಳು ಈಗ ಸ್ಥಾಪನೆಯ ಹಂತದಲ್ಲಿದೆ’ ಎಂದು ಹಾಲು ಒಕ್ಕೂಟದ ಡಾ.ವೆಂಕಟರಮಣ ತಿಳಿಸಿದರು.</p>.<p>ಸಹಕಾರ ಯೂನಿಯನ್ ನಿರ್ದೇಶಕಿ ಅರುಣಾ, ನಗರಸಭೆ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ, ಉಪಾಧ್ಯಕ್ಷೆ ದೇವಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುನಂದಮ್ಮ, ಪಾಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>