<p><strong>ಕೋಲಾರ</strong>: ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೊಬ್ಬರು ತಿದ್ದಲು ಬರುವುದಿಲ್ಲ. ತಮ್ಮ ಭವಿಷ್ಯವನ್ನು ತಾವೇ ನಿರ್ಮಿಸಿಕೊಳ್ಳಬೇಕು. ಅದು ತಾವು ಪಡೆಯುವ ಶಿಕ್ಷಣದ ಮೇಲೆ ನಿಂತಿದೆ ಎಂದು ಕೋಲಾರದವರೇ ಆದ ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ತಿಳಿಸಿದರು.</p>.<p>ಶನಿವಾರ ನಗರದ ಹೊರವಲಯದ ಸಹ್ಯಾದ್ರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಉತ್ತಮ ಆಲೋಚನೆ ಮತ್ತು ಯೋಜನೆ ಮಾಡದೆ ಹೋದರೆ ಮುಂದೆ ಕಷ್ಟದ ದಿನ ಎದುರಾಗುತ್ತವೆ ಎಂದರು.</p>.<p>ಡಿಡಿಪಿಯು ರಾಜಶೇಖರ್ ಪಟ್ಟಣಶೆಟ್ಟಿ ಮಾತನಾಡಿ, ‘ಗುರಿ ಇದ್ದಾಗ ಮಾತ್ರವೇ ಸಾಧನೆ ಮಾಡಲು ಸಾಧ್ಯ. ಬದುಕಿಗೆ ಮಾದರಿಯಾಗುವ ವ್ಯಕ್ತಿಗಳನ್ನು ಆದರ್ಶವಾಗಿ ಇಟ್ಟುಕೊಂಡು ಶಿಕ್ಷಣದ ಕಡೆ ಗಮನ ಕೊಡಿ. ಪೋಷಕರು ಸಾಲ ಮಾಡಿ ತಮ್ಮನ್ನು ಓದಿಸಿದ್ದಾರೆ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಗಾಯಕ ಅಕ್ಬರ್ ಹಾಡು ಹಾಡಿದರು. ದ್ವೀತಿಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಉದಯಕುಮಾರ್ ವಹಿಸಿದ್ದರು. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಕೆ.ನಟರಾಜ್, ಕಾಲೇಜಿನ ಪ್ರಾಂಶುಪಾಲ ಗಂಗಾಪುರ ಜಿ.ವಿ.ವಿನಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೊಬ್ಬರು ತಿದ್ದಲು ಬರುವುದಿಲ್ಲ. ತಮ್ಮ ಭವಿಷ್ಯವನ್ನು ತಾವೇ ನಿರ್ಮಿಸಿಕೊಳ್ಳಬೇಕು. ಅದು ತಾವು ಪಡೆಯುವ ಶಿಕ್ಷಣದ ಮೇಲೆ ನಿಂತಿದೆ ಎಂದು ಕೋಲಾರದವರೇ ಆದ ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ತಿಳಿಸಿದರು.</p>.<p>ಶನಿವಾರ ನಗರದ ಹೊರವಲಯದ ಸಹ್ಯಾದ್ರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಉತ್ತಮ ಆಲೋಚನೆ ಮತ್ತು ಯೋಜನೆ ಮಾಡದೆ ಹೋದರೆ ಮುಂದೆ ಕಷ್ಟದ ದಿನ ಎದುರಾಗುತ್ತವೆ ಎಂದರು.</p>.<p>ಡಿಡಿಪಿಯು ರಾಜಶೇಖರ್ ಪಟ್ಟಣಶೆಟ್ಟಿ ಮಾತನಾಡಿ, ‘ಗುರಿ ಇದ್ದಾಗ ಮಾತ್ರವೇ ಸಾಧನೆ ಮಾಡಲು ಸಾಧ್ಯ. ಬದುಕಿಗೆ ಮಾದರಿಯಾಗುವ ವ್ಯಕ್ತಿಗಳನ್ನು ಆದರ್ಶವಾಗಿ ಇಟ್ಟುಕೊಂಡು ಶಿಕ್ಷಣದ ಕಡೆ ಗಮನ ಕೊಡಿ. ಪೋಷಕರು ಸಾಲ ಮಾಡಿ ತಮ್ಮನ್ನು ಓದಿಸಿದ್ದಾರೆ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಗಾಯಕ ಅಕ್ಬರ್ ಹಾಡು ಹಾಡಿದರು. ದ್ವೀತಿಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಉದಯಕುಮಾರ್ ವಹಿಸಿದ್ದರು. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಕೆ.ನಟರಾಜ್, ಕಾಲೇಜಿನ ಪ್ರಾಂಶುಪಾಲ ಗಂಗಾಪುರ ಜಿ.ವಿ.ವಿನಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>