<p><strong>ಕೋಲಾರ:</strong> ‘ವಿದ್ಯಾರ್ಥಿಗಳು ಪಠ್ಯದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಸಲಹೆ ನೀಡಿದರು.</p>.<p>ತಾಲ್ಲೂಕಿನ ಹೊಳಲಿಯಲ್ಲಿ ಸುಗುಣ ಬಿಎಡ್ ಕಾಲೇಜು ವತಿಯಿಂದ ಬಿಎಡ್ ಪರೀಕ್ಷಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಮುದಾಯ ಜೀವನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ‘ಸಾಮಾನ್ಯಜ್ಞಾನ ವೃದ್ಧಿಸಿಕೊಂಡರೆ ಶೈಕ್ಷಣಿಕ ಪ್ರಗತಿ ಸಹಕಾರಿಯಾಗುತ್ತದೆ. ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದು’ ಎಂದು ಹೇಳಿದರು.</p>.<p>‘ಜ್ಞಾನ ಹೆಚ್ಚಿಸುವ ಪುಸ್ತಕಗಳನ್ನು ಓದಬೇಕು. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಶಕ್ತಿ ಬರುತ್ತದೆ. ಕಲಿಕೆಯಿಂದ ಪದವಿ ಪಡೆಯಬಹುದು ಆದರೆ ಸಮಾಜದಲ್ಲಿ ಸೌಹಾರ್ದತೆಯಿಂದ ಬದುಕುವ ಕಲೆ ಕರಗತಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪ್ರಕಾಶ್ ಮಾತನಾಡಿ, ‘ಬಿಎಡ್ ಪದವೀಧರರು ಮುಂದೆ ಗುರುವಿನ ಸ್ಥಾನಕ್ಕೆ ಹೋಗುವವರು. ಸಮಾಜಕ್ಕೆ ಮಾರ್ಗದರ್ಶನ ನೀಡುವ ಶಕ್ತಿ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಬಿಎಡ್ ವಿದ್ಯಾರ್ಥಿಗಳು ಭಾವಿ ಶಿಕ್ಷಕರೂ ಆಗಿರುವುದರಿಂದ ಬದುಕಿನಲ್ಲಿ ಮೌಲ್ಯಗಳನ್ನು ರೂಢಿಸಿಕೊಳ್ಳಿ. ಸಮಾಜ ನಮಗೇನು ನೀಡಿದೆ ಎಂಬುದರ ಜತೆಗೆ ಸಮಾಜಕ್ಕೆ ನಮ್ಮಿಂದ ಏನು ಪ್ರಯೋಜನೆ ಎಂಬ ಸತ್ಯ ಅರಿತು ಸಾರ್ಥಕ ಬದುಕು ಕಂಡುಕೊಳ್ಳಬೇಕು’ ಎಂದರು.</p>.<p>ಸುಗುಣ ನರ್ಸಿಂಗ್ ಹೋಂ ವೈದ್ಯ ಡಾ.ರಾಮಯ್ಯ, ಡಾ.ಕೆ.ರಮೇಶ್, ಪ್ರಾಂಶುಪಾಲ ಟಿ.ನಾಗರಾಜ್, ಸಹಾಯಕ ಪ್ರಾಧ್ಯಾಪಕರಾದ ಗಂಟಲಪ್ಪ, ಚೌಡರೆಡ್ಡಿ, ಅರುಣ, ಟಿ.ವಿ.ಪುಷ್ಪ, ಉಮಾಶಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ವಿದ್ಯಾರ್ಥಿಗಳು ಪಠ್ಯದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಸಲಹೆ ನೀಡಿದರು.</p>.<p>ತಾಲ್ಲೂಕಿನ ಹೊಳಲಿಯಲ್ಲಿ ಸುಗುಣ ಬಿಎಡ್ ಕಾಲೇಜು ವತಿಯಿಂದ ಬಿಎಡ್ ಪರೀಕ್ಷಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಮುದಾಯ ಜೀವನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ‘ಸಾಮಾನ್ಯಜ್ಞಾನ ವೃದ್ಧಿಸಿಕೊಂಡರೆ ಶೈಕ್ಷಣಿಕ ಪ್ರಗತಿ ಸಹಕಾರಿಯಾಗುತ್ತದೆ. ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದು’ ಎಂದು ಹೇಳಿದರು.</p>.<p>‘ಜ್ಞಾನ ಹೆಚ್ಚಿಸುವ ಪುಸ್ತಕಗಳನ್ನು ಓದಬೇಕು. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಶಕ್ತಿ ಬರುತ್ತದೆ. ಕಲಿಕೆಯಿಂದ ಪದವಿ ಪಡೆಯಬಹುದು ಆದರೆ ಸಮಾಜದಲ್ಲಿ ಸೌಹಾರ್ದತೆಯಿಂದ ಬದುಕುವ ಕಲೆ ಕರಗತಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪ್ರಕಾಶ್ ಮಾತನಾಡಿ, ‘ಬಿಎಡ್ ಪದವೀಧರರು ಮುಂದೆ ಗುರುವಿನ ಸ್ಥಾನಕ್ಕೆ ಹೋಗುವವರು. ಸಮಾಜಕ್ಕೆ ಮಾರ್ಗದರ್ಶನ ನೀಡುವ ಶಕ್ತಿ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಬಿಎಡ್ ವಿದ್ಯಾರ್ಥಿಗಳು ಭಾವಿ ಶಿಕ್ಷಕರೂ ಆಗಿರುವುದರಿಂದ ಬದುಕಿನಲ್ಲಿ ಮೌಲ್ಯಗಳನ್ನು ರೂಢಿಸಿಕೊಳ್ಳಿ. ಸಮಾಜ ನಮಗೇನು ನೀಡಿದೆ ಎಂಬುದರ ಜತೆಗೆ ಸಮಾಜಕ್ಕೆ ನಮ್ಮಿಂದ ಏನು ಪ್ರಯೋಜನೆ ಎಂಬ ಸತ್ಯ ಅರಿತು ಸಾರ್ಥಕ ಬದುಕು ಕಂಡುಕೊಳ್ಳಬೇಕು’ ಎಂದರು.</p>.<p>ಸುಗುಣ ನರ್ಸಿಂಗ್ ಹೋಂ ವೈದ್ಯ ಡಾ.ರಾಮಯ್ಯ, ಡಾ.ಕೆ.ರಮೇಶ್, ಪ್ರಾಂಶುಪಾಲ ಟಿ.ನಾಗರಾಜ್, ಸಹಾಯಕ ಪ್ರಾಧ್ಯಾಪಕರಾದ ಗಂಟಲಪ್ಪ, ಚೌಡರೆಡ್ಡಿ, ಅರುಣ, ಟಿ.ವಿ.ಪುಷ್ಪ, ಉಮಾಶಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>