ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಞಾನ ವೃದ್ಧಿಯಿಂದ ಶೈಕ್ಷಣಿಕ ಪ್ರಗತಿ

Last Updated 12 ಫೆಬ್ರುವರಿ 2020, 14:04 IST
ಅಕ್ಷರ ಗಾತ್ರ

ಕೋಲಾರ: ‘ವಿದ್ಯಾರ್ಥಿಗಳು ಪಠ್ಯದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಸಲಹೆ ನೀಡಿದರು.

ತಾಲ್ಲೂಕಿನ ಹೊಳಲಿಯಲ್ಲಿ ಸುಗುಣ ಬಿಎಡ್ ಕಾಲೇಜು ವತಿಯಿಂದ ಬಿಎಡ್ ಪರೀಕ್ಷಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಮುದಾಯ ಜೀವನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ‘ಸಾಮಾನ್ಯಜ್ಞಾನ ವೃದ್ಧಿಸಿಕೊಂಡರೆ ಶೈಕ್ಷಣಿಕ ಪ್ರಗತಿ ಸಹಕಾರಿಯಾಗುತ್ತದೆ. ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದು’ ಎಂದು ಹೇಳಿದರು.

‘ಜ್ಞಾನ ಹೆಚ್ಚಿಸುವ ಪುಸ್ತಕಗಳನ್ನು ಓದಬೇಕು. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಶಕ್ತಿ ಬರುತ್ತದೆ. ಕಲಿಕೆಯಿಂದ ಪದವಿ ಪಡೆಯಬಹುದು ಆದರೆ ಸಮಾಜದಲ್ಲಿ ಸೌಹಾರ್ದತೆಯಿಂದ ಬದುಕುವ ಕಲೆ ಕರಗತಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪ್ರಕಾಶ್ ಮಾತನಾಡಿ, ‘ಬಿಎಡ್ ಪದವೀಧರರು ಮುಂದೆ ಗುರುವಿನ ಸ್ಥಾನಕ್ಕೆ ಹೋಗುವವರು. ಸಮಾಜಕ್ಕೆ ಮಾರ್ಗದರ್ಶನ ನೀಡುವ ಶಕ್ತಿ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಬಿಎಡ್ ವಿದ್ಯಾರ್ಥಿಗಳು ಭಾವಿ ಶಿಕ್ಷಕರೂ ಆಗಿರುವುದರಿಂದ ಬದುಕಿನಲ್ಲಿ ಮೌಲ್ಯಗಳನ್ನು ರೂಢಿಸಿಕೊಳ್ಳಿ. ಸಮಾಜ ನಮಗೇನು ನೀಡಿದೆ ಎಂಬುದರ ಜತೆಗೆ ಸಮಾಜಕ್ಕೆ ನಮ್ಮಿಂದ ಏನು ಪ್ರಯೋಜನೆ ಎಂಬ ಸತ್ಯ ಅರಿತು ಸಾರ್ಥಕ ಬದುಕು ಕಂಡುಕೊಳ್ಳಬೇಕು’ ಎಂದರು.

ಸುಗುಣ ನರ್ಸಿಂಗ್ ಹೋಂ ವೈದ್ಯ ಡಾ.ರಾಮಯ್ಯ, ಡಾ.ಕೆ.ರಮೇಶ್, ಪ್ರಾಂಶುಪಾಲ ಟಿ.ನಾಗರಾಜ್, ಸಹಾಯಕ ಪ್ರಾಧ್ಯಾಪಕರಾದ ಗಂಟಲಪ್ಪ, ಚೌಡರೆಡ್ಡಿ, ಅರುಣ, ಟಿ.ವಿ.ಪುಷ್ಪ, ಉಮಾಶಾಂತ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT