ದೊಡ್ಡಪೇಟೆಯ ವೆಂಕಟರಮಣಸ್ವಾಮಿ, ಕೋಟೆ ಬಡಾವಣೆಯ ಕೋಲಾರಮ್ಮ ದೇವಾಲಯ, ಡೂಂಲೈಟ್ ವೃತ್ತದ ಕೆಇಬಿ ಗಣಪತಿ ದೇವಸ್ಥಾನದಲ್ಲಿ ಭಕ್ತರ ದೊಡ್ಡ ದಂಡೇ ಕಂಡುಬಂತು. ದೇವಸ್ಥಾನಗಳ ಬಳಿ ಭಕ್ತರು ದೇವರ ದರ್ಶನಕ್ಕೆ ನಸುಕಿನಿಂದಲೇ ಸಾಲುಗಟ್ಟಿ ನಿಂತಿದ್ದರು. ಬೆಳಿಗ್ಗೆ ಅಭಿಷೇಕ, ಘಂಟಾನಾದ, ಸುಪ್ರಭಾತ, ಗೋಪೂಜೆ ನಡೆಯಿತು. ಮಹಾ ಮಂಗಳಾರತಿ ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು.