<p><strong>ಕೋಲಾರ</strong>: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಅರಿವು - ನೆರವು ಕಾರ್ಯಕ್ರಮ ನಡೆಯಿತು.</p>.<p>ಚಾಲನೆ ನೀಡಿದ ಮಾತನಾಡಿದ ಪತ್ರಕರ್ತ ವಿ.ಮುನಿರಾಜು, ‘ಅವಿಭಕ್ತ ಕುಟುಂಬಗಳು ಮರೆಯಾಗುತ್ತಿರುವುದರಿಂದ ಮಕ್ಕಳು, ಯುವಕರಿಗೆ ಸೂಕ್ತ ಮಾರ್ಗದರ್ಶನ ಸಿಗುತ್ತಿಲ್ಲ. ಸಂಸ್ಕಾರ ಮರೆಯಾಗಿ ವೃದ್ಧಾಶ್ರಮಗಳು ಹೆಚ್ಚುತ್ತಿವೆ’ ಎಂದರು.</p>.<p>ಹಿರಿಯರು ನೀಡುತ್ತಿದ್ದ ಮಾರ್ಗದರ್ಶನ ಇಂದು ಇಲ್ಲವಾಗಿದೆ. ಹಿರಿಯರ ಕಡೆಗಣನೆ ನೋವಿನ ಸಂಗತಿಯಾಗಿದ್ದು, ಅವರ ಬದುಕು ಅತಂತ್ರವಾಗಿದೆ. ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ ₹ 1,200 ವೃದ್ಧಾಪ್ಯವೇತನ ಸಾಕಾಗುತ್ತಿಲ್ಲ. ಕನಿಷ್ಠ ₹ 5 ಸಾವಿರಕ್ಕಾದರೂ ಏರಿಸಬೇಕು ಎಂದು ಸಲಹೆ ನೀಡಿದರು.</p>.<p>ಕಾನೂನು ಉಪ ಅಭಿರಕ್ಷಕ ಹಾಗೂ ವಕೀಲ ಸತೀಶ್, ‘ಇಂದಿನ ಯುವಕರಿಗೆ ಗುರು, ಗುರಿ ಎರಡು ಇಲ್ಲವಾಗಿದೆ. ಶಿಕ್ಷಣ ಕೊಟ್ಟರೆ ಮಾತ್ರ ಪ್ರಯೋಜನವಿಲ್ಲ; ಜತೆಗೆ ಸಂಸ್ಕಾರವನ್ನೂ ಕಲಿಸುವ ಅಗತ್ಯವಿದೆ. ಇಂದು ಸುಶೀಕ್ಷಿತರೇ ಹೆಚ್ಚು ಅಪರಾಧ ಮಾಡುತ್ತಿರುವುದನ್ನು ಕಾಣುತ್ತಿದ್ದೇವೆ’ ಎಂದರು.</p>.<p>ಹಿರಿಯ ನಾಗರಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ. ಅವರ ಹಕ್ಕುಗಳ ರಕ್ಷಣೆಗೆ ಕಾನೂನು ಸೇವೆಗಳ ಪ್ರಾಧಿಕಾರ ಕೆಲಸ ಮಾಡುತ್ತಿದೆ. ಮಕ್ಕಳಿಂದ ಶೋಷಣೆಗೆ ಒಳಗಾದ ಹಿರಿಯರ ನೆರವಿಗೆ ಬರುತ್ತದೆ, ಕಾನೂನು ಪ್ರಾಧಿಕಾರದ ಸಹಾಯವಾಣಿ 15100 ನೆರವು ಪಡೆಯಿರಿ ಎಂದು ಸಲಹೆ ನೀಡಿದರು.</p>.<p>ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಗೋವಿಂದಪ್ಪ ಮಾತನಾಡಿ, ಹಿರಿಯ ನಾಗರಿಕರ ದಿನಾಚರಣೆಗೆ ಜನಪ್ರತಿನಿಧಿಗಳು ಹಾಗೂ ರಾಜಕಾರಣಿಗಳ ನಿರ್ಲಕ್ಷ್ಯ ಖಂಡನೀಯ. ಹಿರಿಯ ನಾಗರಿಕರ ದಿನಾಚರಣೆಯನ್ನು ಸರ್ಕಾರವೇ ಆಚರಿಸಬೇಕು. ಸರ್ಕಾರದಿಂದ ನೆರವು ಸಿಗಬೇಕು ಎಂದರು.</p>.<p>ಹಿರಿಯ ನಾಗರಿಕರ ಇಲಾಖೆ ಜಿಲ್ಲಾ ಕಲ್ಯಾಣಾಧಿಕಾರಿ ಆರ್.ಮಂಜುಳಾ, ಇಲಾಖೆಯಲ್ಲಿ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕಿವಿಮಾತು ಹೇಳಿದರು. ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ರವಿಕುಮಾರ್ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಕೊಕ್ಕೊ ತರಬೇತುದಾರ ಶ್ರೀಧರ್ ಪಿಳ್ಳೈ, ಸಮಾಜಸೇವೆ ಹಾಗೂ ಸಾಕ್ಷರತಾ ಸೇವೆಗಾಗಿ ಜನ್ನಘಟ್ಟ ಗ್ರಾಮದ ವಿ.ನಾರಾಯಣಪ್ಪ ಅವರನ್ನು ಸನ್ಮಾನಿಸಲಾಯಿತು.</p>.<p>ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ದಿವ್ಯ ಜ್ಯೋತಿ ವೃದ್ಧಾಶ್ರಮದ ಅಧ್ಯಕ್ಷ ನರಸಿಂಹಪ್ಪ, ಅಂತರಗಂಗೆ ಬುದ್ಧಿಮಾಂದ್ಯ ಮಕ್ಕಳ ಶಾಲೆ ಕಾರ್ಯದರ್ಶಿ ಕೆ.ಎಸ್.ಶಂಕರ್, ಜಯಲಕ್ಷ್ಮಮ್ಮ, ಗೋವಿಂದಪ್ಪ, ರಾಮಕೃಷ್ಣೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಅರಿವು - ನೆರವು ಕಾರ್ಯಕ್ರಮ ನಡೆಯಿತು.</p>.<p>ಚಾಲನೆ ನೀಡಿದ ಮಾತನಾಡಿದ ಪತ್ರಕರ್ತ ವಿ.ಮುನಿರಾಜು, ‘ಅವಿಭಕ್ತ ಕುಟುಂಬಗಳು ಮರೆಯಾಗುತ್ತಿರುವುದರಿಂದ ಮಕ್ಕಳು, ಯುವಕರಿಗೆ ಸೂಕ್ತ ಮಾರ್ಗದರ್ಶನ ಸಿಗುತ್ತಿಲ್ಲ. ಸಂಸ್ಕಾರ ಮರೆಯಾಗಿ ವೃದ್ಧಾಶ್ರಮಗಳು ಹೆಚ್ಚುತ್ತಿವೆ’ ಎಂದರು.</p>.<p>ಹಿರಿಯರು ನೀಡುತ್ತಿದ್ದ ಮಾರ್ಗದರ್ಶನ ಇಂದು ಇಲ್ಲವಾಗಿದೆ. ಹಿರಿಯರ ಕಡೆಗಣನೆ ನೋವಿನ ಸಂಗತಿಯಾಗಿದ್ದು, ಅವರ ಬದುಕು ಅತಂತ್ರವಾಗಿದೆ. ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ ₹ 1,200 ವೃದ್ಧಾಪ್ಯವೇತನ ಸಾಕಾಗುತ್ತಿಲ್ಲ. ಕನಿಷ್ಠ ₹ 5 ಸಾವಿರಕ್ಕಾದರೂ ಏರಿಸಬೇಕು ಎಂದು ಸಲಹೆ ನೀಡಿದರು.</p>.<p>ಕಾನೂನು ಉಪ ಅಭಿರಕ್ಷಕ ಹಾಗೂ ವಕೀಲ ಸತೀಶ್, ‘ಇಂದಿನ ಯುವಕರಿಗೆ ಗುರು, ಗುರಿ ಎರಡು ಇಲ್ಲವಾಗಿದೆ. ಶಿಕ್ಷಣ ಕೊಟ್ಟರೆ ಮಾತ್ರ ಪ್ರಯೋಜನವಿಲ್ಲ; ಜತೆಗೆ ಸಂಸ್ಕಾರವನ್ನೂ ಕಲಿಸುವ ಅಗತ್ಯವಿದೆ. ಇಂದು ಸುಶೀಕ್ಷಿತರೇ ಹೆಚ್ಚು ಅಪರಾಧ ಮಾಡುತ್ತಿರುವುದನ್ನು ಕಾಣುತ್ತಿದ್ದೇವೆ’ ಎಂದರು.</p>.<p>ಹಿರಿಯ ನಾಗರಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ. ಅವರ ಹಕ್ಕುಗಳ ರಕ್ಷಣೆಗೆ ಕಾನೂನು ಸೇವೆಗಳ ಪ್ರಾಧಿಕಾರ ಕೆಲಸ ಮಾಡುತ್ತಿದೆ. ಮಕ್ಕಳಿಂದ ಶೋಷಣೆಗೆ ಒಳಗಾದ ಹಿರಿಯರ ನೆರವಿಗೆ ಬರುತ್ತದೆ, ಕಾನೂನು ಪ್ರಾಧಿಕಾರದ ಸಹಾಯವಾಣಿ 15100 ನೆರವು ಪಡೆಯಿರಿ ಎಂದು ಸಲಹೆ ನೀಡಿದರು.</p>.<p>ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಗೋವಿಂದಪ್ಪ ಮಾತನಾಡಿ, ಹಿರಿಯ ನಾಗರಿಕರ ದಿನಾಚರಣೆಗೆ ಜನಪ್ರತಿನಿಧಿಗಳು ಹಾಗೂ ರಾಜಕಾರಣಿಗಳ ನಿರ್ಲಕ್ಷ್ಯ ಖಂಡನೀಯ. ಹಿರಿಯ ನಾಗರಿಕರ ದಿನಾಚರಣೆಯನ್ನು ಸರ್ಕಾರವೇ ಆಚರಿಸಬೇಕು. ಸರ್ಕಾರದಿಂದ ನೆರವು ಸಿಗಬೇಕು ಎಂದರು.</p>.<p>ಹಿರಿಯ ನಾಗರಿಕರ ಇಲಾಖೆ ಜಿಲ್ಲಾ ಕಲ್ಯಾಣಾಧಿಕಾರಿ ಆರ್.ಮಂಜುಳಾ, ಇಲಾಖೆಯಲ್ಲಿ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕಿವಿಮಾತು ಹೇಳಿದರು. ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ರವಿಕುಮಾರ್ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಕೊಕ್ಕೊ ತರಬೇತುದಾರ ಶ್ರೀಧರ್ ಪಿಳ್ಳೈ, ಸಮಾಜಸೇವೆ ಹಾಗೂ ಸಾಕ್ಷರತಾ ಸೇವೆಗಾಗಿ ಜನ್ನಘಟ್ಟ ಗ್ರಾಮದ ವಿ.ನಾರಾಯಣಪ್ಪ ಅವರನ್ನು ಸನ್ಮಾನಿಸಲಾಯಿತು.</p>.<p>ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ದಿವ್ಯ ಜ್ಯೋತಿ ವೃದ್ಧಾಶ್ರಮದ ಅಧ್ಯಕ್ಷ ನರಸಿಂಹಪ್ಪ, ಅಂತರಗಂಗೆ ಬುದ್ಧಿಮಾಂದ್ಯ ಮಕ್ಕಳ ಶಾಲೆ ಕಾರ್ಯದರ್ಶಿ ಕೆ.ಎಸ್.ಶಂಕರ್, ಜಯಲಕ್ಷ್ಮಮ್ಮ, ಗೋವಿಂದಪ್ಪ, ರಾಮಕೃಷ್ಣೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>