<p><strong>ಕೋಲಾರ: </strong>ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಸದಸ್ಯರ ಮರಣ ಹಾಗೂ ರಾಜೀನಾಮೆಯಿಂದ ತೆರವಾಗಿರುವ ಸದಸ್ಯ ಸ್ಥಾನಗಳ ಉಪ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ.</p>.<p>ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ಗ್ರಾ.ಪಂನ ತೊರ್ನಹಳ್ಳಿ ಮತ್ತು ಪ್ರಾದೇಶಿಕ ಕ್ಷೇತ್ರದ ಸದಸ್ಯ ಸ್ಥಾನಕ್ಕೆ (ಸಾಮಾನ್ಯ) ಉಪ ಚುನಾವಣೆ ನಡೆಯಲಿದೆ. ಅದೇ ರೀತಿ ಬಂಗಾರಪೇಟೆ ತಾಲ್ಲೂಕಿನ ದೊಡ್ಡೂರು ಕರಪ್ಪನಹಳ್ಳಿ ಗ್ರಾ.ಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಮತ್ತು ಪ್ರಾದೇಶಿಕ ಕ್ಷೇತ್ರ (ಸಾಮಾನ್ಯ), ಘಟ್ಟಮಾದಮಂಗಲ ಗ್ರಾ.ಪಂನ ಕೆಂಪಾಪಪುರ ಚುನಾವಣಾ ಕ್ಷೇತ್ರ (ಸಾಮಾನ್ಯ) ಚುನಾವಣೆ ನಡೆಯಲಿದೆ.</p>.<p>ಮುಳಬಾಗಿಲು ತಾಲ್ಲೂಕಿನ ಮಲ್ಲನಾಯಕನಹಳ್ಳಿ ಗ್ರಾ.ಪಂ ವ್ಯಾಪ್ತಿಯ ತಿಮ್ಮನಾಯಕನಹಳ್ಳಿ ಪ್ರಾದೇಶಿಕ ಕ್ಷೇತ್ರ (ಸಾಮಾನ್ಯ), ಮೋತಕಪಲ್ಲಿ ಗ್ರಾ.ಪಂನ ಆಚಂಪಲ್ಲಿ ಪ್ರಾದೇಶಿಕ ಕ್ಷೇತ್ರ (ಸಾಮಾನ್ಯ), ಶ್ರೀನಿವಾಸಪುರ ತಾಲ್ಲೂಕಿನ ಹೊದಲಿ ಗ್ರಾ.ಪಂ ವ್ಯಾಪ್ತಿಯ ಗೋಪಾಲಪುರ ಪ್ರಾದೇಶಿಕ ಕ್ಷೇತ್ರಕ್ಕೆ (ಪರಿಶಿಷ್ಟ ಪಂಗಡ ಚುನಾವಣೆ ನಡೆಯಲಿದೆ.</p>.<p>ಉಮೇದುವಾರಿಕೆ ಸಲ್ಲಿಸಲು ಮೇ 16 ಕಡೆಯ ದಿನ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಮೇ 20 ಕೊನೆಯ ದಿನ. ಮೇ 29ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯುತ್ತದೆ. ಮೇ 31ರಂದು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಸದಸ್ಯರ ಮರಣ ಹಾಗೂ ರಾಜೀನಾಮೆಯಿಂದ ತೆರವಾಗಿರುವ ಸದಸ್ಯ ಸ್ಥಾನಗಳ ಉಪ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ.</p>.<p>ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ಗ್ರಾ.ಪಂನ ತೊರ್ನಹಳ್ಳಿ ಮತ್ತು ಪ್ರಾದೇಶಿಕ ಕ್ಷೇತ್ರದ ಸದಸ್ಯ ಸ್ಥಾನಕ್ಕೆ (ಸಾಮಾನ್ಯ) ಉಪ ಚುನಾವಣೆ ನಡೆಯಲಿದೆ. ಅದೇ ರೀತಿ ಬಂಗಾರಪೇಟೆ ತಾಲ್ಲೂಕಿನ ದೊಡ್ಡೂರು ಕರಪ್ಪನಹಳ್ಳಿ ಗ್ರಾ.ಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಮತ್ತು ಪ್ರಾದೇಶಿಕ ಕ್ಷೇತ್ರ (ಸಾಮಾನ್ಯ), ಘಟ್ಟಮಾದಮಂಗಲ ಗ್ರಾ.ಪಂನ ಕೆಂಪಾಪಪುರ ಚುನಾವಣಾ ಕ್ಷೇತ್ರ (ಸಾಮಾನ್ಯ) ಚುನಾವಣೆ ನಡೆಯಲಿದೆ.</p>.<p>ಮುಳಬಾಗಿಲು ತಾಲ್ಲೂಕಿನ ಮಲ್ಲನಾಯಕನಹಳ್ಳಿ ಗ್ರಾ.ಪಂ ವ್ಯಾಪ್ತಿಯ ತಿಮ್ಮನಾಯಕನಹಳ್ಳಿ ಪ್ರಾದೇಶಿಕ ಕ್ಷೇತ್ರ (ಸಾಮಾನ್ಯ), ಮೋತಕಪಲ್ಲಿ ಗ್ರಾ.ಪಂನ ಆಚಂಪಲ್ಲಿ ಪ್ರಾದೇಶಿಕ ಕ್ಷೇತ್ರ (ಸಾಮಾನ್ಯ), ಶ್ರೀನಿವಾಸಪುರ ತಾಲ್ಲೂಕಿನ ಹೊದಲಿ ಗ್ರಾ.ಪಂ ವ್ಯಾಪ್ತಿಯ ಗೋಪಾಲಪುರ ಪ್ರಾದೇಶಿಕ ಕ್ಷೇತ್ರಕ್ಕೆ (ಪರಿಶಿಷ್ಟ ಪಂಗಡ ಚುನಾವಣೆ ನಡೆಯಲಿದೆ.</p>.<p>ಉಮೇದುವಾರಿಕೆ ಸಲ್ಲಿಸಲು ಮೇ 16 ಕಡೆಯ ದಿನ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಮೇ 20 ಕೊನೆಯ ದಿನ. ಮೇ 29ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯುತ್ತದೆ. ಮೇ 31ರಂದು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>