<p><strong>ಕೆಜಿಎಫ್: </strong>‘ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಕಾಡಾನೆಗಳ ದಾಳಿಯಿಂದ ರೈತರ ಬೆಳೆ ನಾಶವಾಗುತ್ತಿರುವುದನ್ನು ತಡೆಯಲು ಸದ್ಯದಲ್ಲಿಯೇ ಸೋಲಾರ್ ಬೇಲಿ ನಿರ್ಮಾಣ ಮಾಡಲಾಗುವುದು’ ಎಂದು ಶಾಸಕಿ ಎಂ. ರೂಪಕಲಾ ತಿಳಿಸಿದರು.</p>.<p>ಘಟ್ಟಮಾದಮಂಗಲ ಗ್ರಾಮದ ಹಲವು ಜಮೀನುಗಳಿಗೆ ಆನೆಗಳು ನುಗ್ಗಿ ಅಪಾರ ಬೆಳೆಗಳನ್ನು ತುಳಿದು ಹಾಳು ಮಾಡಿದ ಹಿನ್ನೆಲೆಯಲ್ಲಿ ಬುಧವಾರ ಕೆಲವು ರೈತರ ಜಮೀನಿಗೆ ಭೇಟಿ ನೀಡಿ ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.</p>.<p>ಕಾಡಾನೆ ದಾಳಿಯಿಂದಾಗಿ ರೈತರಿಗೆ ಅಪಾರ ನಷ್ಟ ಉಂಟಾಗಿದೆ. ಪದೇ ಪದೇ ಈ ರೀತಿಯ ಅವಘಡ ಸಂಭವಿಸುತ್ತಿವೆ. ಕಷ್ಟಪಟ್ಟು ಬೆಳೆ ಬೆಳೆದ ರೈತನ ಬಾಳು ಅಸಹನೀಯವಾಗಿದೆ. ಈ ಸಂಬಂಧ ಕಾಡಾನೆಗಳ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿತ್ತು. ಅದರಂತೆ ಸೋಲಾರ್ ಬೇಲಿಯನ್ನು ಕಾಮ ಸಮುದ್ರ ಸಮೀಪದ ಕಾಡಿನಲ್ಲಿ ಅಳವ ಡಿಸುತ್ತಿದ್ದು, ಸದ್ಯದಲ್ಲಿಯೇ ಕೆಜಿಎಫ್ ತಾಲ್ಲೂಕಿನ ಗ್ರಾಮಗಳಲ್ಲಿ ಕೂಡ ಅಳವಡಿಸಲಾಗುವುದು ಎಂದರು.</p>.<p>ಬೆಳೆ ಹಾನಿಯಾದ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ಸೂಚಿಸಿದರು.</p>.<p>ಘಟ್ಟಮಾದಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರಿಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ, ಅರಣ್ಯ ಅಧಿಕಾರಿ ವೇಣು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್: </strong>‘ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಕಾಡಾನೆಗಳ ದಾಳಿಯಿಂದ ರೈತರ ಬೆಳೆ ನಾಶವಾಗುತ್ತಿರುವುದನ್ನು ತಡೆಯಲು ಸದ್ಯದಲ್ಲಿಯೇ ಸೋಲಾರ್ ಬೇಲಿ ನಿರ್ಮಾಣ ಮಾಡಲಾಗುವುದು’ ಎಂದು ಶಾಸಕಿ ಎಂ. ರೂಪಕಲಾ ತಿಳಿಸಿದರು.</p>.<p>ಘಟ್ಟಮಾದಮಂಗಲ ಗ್ರಾಮದ ಹಲವು ಜಮೀನುಗಳಿಗೆ ಆನೆಗಳು ನುಗ್ಗಿ ಅಪಾರ ಬೆಳೆಗಳನ್ನು ತುಳಿದು ಹಾಳು ಮಾಡಿದ ಹಿನ್ನೆಲೆಯಲ್ಲಿ ಬುಧವಾರ ಕೆಲವು ರೈತರ ಜಮೀನಿಗೆ ಭೇಟಿ ನೀಡಿ ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.</p>.<p>ಕಾಡಾನೆ ದಾಳಿಯಿಂದಾಗಿ ರೈತರಿಗೆ ಅಪಾರ ನಷ್ಟ ಉಂಟಾಗಿದೆ. ಪದೇ ಪದೇ ಈ ರೀತಿಯ ಅವಘಡ ಸಂಭವಿಸುತ್ತಿವೆ. ಕಷ್ಟಪಟ್ಟು ಬೆಳೆ ಬೆಳೆದ ರೈತನ ಬಾಳು ಅಸಹನೀಯವಾಗಿದೆ. ಈ ಸಂಬಂಧ ಕಾಡಾನೆಗಳ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿತ್ತು. ಅದರಂತೆ ಸೋಲಾರ್ ಬೇಲಿಯನ್ನು ಕಾಮ ಸಮುದ್ರ ಸಮೀಪದ ಕಾಡಿನಲ್ಲಿ ಅಳವ ಡಿಸುತ್ತಿದ್ದು, ಸದ್ಯದಲ್ಲಿಯೇ ಕೆಜಿಎಫ್ ತಾಲ್ಲೂಕಿನ ಗ್ರಾಮಗಳಲ್ಲಿ ಕೂಡ ಅಳವಡಿಸಲಾಗುವುದು ಎಂದರು.</p>.<p>ಬೆಳೆ ಹಾನಿಯಾದ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ಸೂಚಿಸಿದರು.</p>.<p>ಘಟ್ಟಮಾದಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರಿಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ, ಅರಣ್ಯ ಅಧಿಕಾರಿ ವೇಣು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>