ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಬಂಗಾರಪೇಟೆ | ಆನೆ ದಾಳಿಯಿಂದ ರೈತ ಸಾವು: ಜನರ ಆಕ್ರೋಶ

Published : 14 ಏಪ್ರಿಲ್ 2024, 14:34 IST
Last Updated : 14 ಏಪ್ರಿಲ್ 2024, 14:34 IST
ಫಾಲೋ ಮಾಡಿ
Comments
ಬಂಗಾರಪೇಟೆಯಲ್ಲಿ ಭಾನುವಾರ ಕಾಡಾನೆ ಹಾವಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿ ಪೋಲೇನಹಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಸರ್ಕಾರದ ವಿರುದ್ಧ ಪ್ರತಿಭಟಿಸಿದರು
ಬಂಗಾರಪೇಟೆಯಲ್ಲಿ ಭಾನುವಾರ ಕಾಡಾನೆ ಹಾವಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿ ಪೋಲೇನಹಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಸರ್ಕಾರದ ವಿರುದ್ಧ ಪ್ರತಿಭಟಿಸಿದರು
ಆನೆ ದಾಳಿಯಿಂದ ಮೃತಪಟ್ಟ ರೈತರಿಗೆ ಕನಿಷ್ಠ ₹ 50 ಲಕ್ಷ ಪರಿಹಾರ ಧನವನ್ನು ನೀಡಬೇಕು
ಶಂಕರ್ ವಿ. ಬೊಗ್ಗಲಹಳ್ಳಿ ಅಧ್ಯಕ್ಷ ರೈತಸಂಘ ಕಾಮಸಮುದ್ರ ಹೋಬಳಿ
ಪ್ರಾಣಿ-ಮಾನವನ ಸಂಘರ್ಷವನ್ನು ತಪ್ಪಿಸಲು ವೈಜ್ಞಾನಿಕ ತಂತ್ರಜ್ಞಾನ ಬಳಸಬೇಕು. ಪ್ರಾಣ ಹಾನಿಯಾಗದ ರೀತಿಯಲ್ಲಿ ಸರ್ಕಾರ ಕ್ರಮ ವಹಿಸಬೇಕು
ಲಕ್ಷ್ಮಿನಾರಾಯಣ ಮಾಜಿ ಅಧ್ಯಕ್ಷ ಗ್ರಾಮ ಪಂಚಾಯಿತಿ
ರೈತನ ಕುಟುಂಬಕ್ಕೆ ₹ 15 ಲಕ್ಷ ಪರಿಹಾರ
ಕಾಡಾನೆ ದಾಳಿಯಿಂದ ಮೃತಪಟ್ಟ ನಾರಾಯಣಪ್ಪ ಅವರ ಕುಟುಂಬವನ್ನು ಭೇಟಿ ಮಾಡಿದ ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು ಹಾಗೂ ವಲಯ ಅರಣ್ಯಾಧಿಕಾರಿ ಶ್ರೀಲಕ್ಷ್ಮಿ ₹ 15 ಲಕ್ಷ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಮೃತನ ಹೆಂಡತಿಗೆ ₹ 4 ಸಾವಿರ ಪಿಂಚಣಿ ಕುಟುಂಬದ ಸದಸ್ಯರೊಬ್ಬರಿಗೆ ಗುತ್ತಿಗೆ ಆಧಾರದಲ್ಲಿ ನೌಕರಿ ನೀಡುವುದಾಗಿಯೂ ತಿಳಿಸಿದ್ದಾರೆ.  ಗಡಿಭಾಗದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಪರಿಹಾರದ ಮೊತ್ತ  ಹೆಚ್ಚಳ ಕುರಿ ಸರ್ಕಾರಕ್ಕೆ ವರದಿ ಸಲ್ಲಿಸುವಾಗ ಕಾಡಾನೆಗಳ ಹಾವಳಿ ತಡೆಯಲು ಆನೆ ಕಾರಿಡಾರ್ ರೂಪಿಸಲು ಕೋರಲಾಗುವುದು. ಹದಗೆಟ್ಟ ಸೋಲಾರ್ ವ್ಯವಸ್ಥೆಯನ್ನು ಸರಿಪಡಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT