<p><strong>ಬಂಗಾರಪೇಟೆ</strong>: ತಾಲ್ಲೂಕಿನ ಕನಮನಹಳ್ಳಿ ಗ್ರಾಮದ ಕಾಡಿನಲ್ಲಿ ಗುರುವಾರ ಮಧ್ಯಾಹ್ನ ಕಾಡಾನೆ ಗುಂಪು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p>.<p>ತಾಲ್ಲೂಕಿನ ಕನಮನಹಳ್ಳಿ ಗ್ರಾಮದ ರೈತರು ಜಾನುವಾರು ಮೇಯಿಸಲು ಕಾಡಿನತ್ತ ಹೋದ ಸಂದರ್ಭದಲ್ಲಿ ಆನೆಗಳ ಗುಂಪು ಪ್ರತ್ಯಕ್ಷವಾಗಿದೆ. ಆನೆಗಳನ್ನು ಕಂಡ ರೈತರು ತಕ್ಷಣವೇ ಜಾನುವಾರುಗಳೊಂದಿಗೆ ಗ್ರಾಮದತ್ತ ಓಡಿ ಬಂದಿದ್ದಾರೆ.</p>.<p>ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಪರಿಸ್ಥಿತಿಯನ್ನು ಅವಲೋಕಿಸಿ, ಆನೆಗಳನ್ನು ಕಾಡಿನೊಳಗೆ ಓಡಿಸಲು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರು ಒಂಟಿಯಾಗಿ ಕಾಡಿನಂಚಿನ ಪ್ರದೇಶಗಳಿಗೆ ಹೋಗಬೇಡಿ. ಜಾನುವಾರುಗಳನ್ನು ಮೇಯಿಸಲು ಕಾಡಿಗೆ ಹೋಗಬೇಡಿ. ರಾತ್ರಿ ಸಂಚಾರ ಬೇಡ. ಸಂಜೆ 6 ಗಂಟೆಯ ನಂತರ ಅರಣ್ಯದ ಹಾದಿಗಳಲ್ಲಿ ಸಂಚರಿಸಬೇಡಿ. ಆನೆಗಳು ಕಂಡುಬಂದಲ್ಲಿ ಅವುಗಳನ್ನು ಕೆಣಕದೆ ಅಥವಾ ತಾವೇ ಓಡಿಸಲು ಪ್ರಯತ್ನಿಸದೆ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕೆಂದು ಉಪ ವಲಯ ಅರಣ್ಯಾಧಿಕಾರಿ ನಾಗೇಶ್ ತಿಳಿಸಿದರು.</p>.<p>Quote - ಯಾರೂ ಕೂಡ ಆನೆಗಳ ಹತ್ತಿರ ಹೋಗವುದು ಫೋಟೋ ಅಥವಾ ವಿಡಿಯೊ ತೆಗೆಯುವ ಪ್ರಯತ್ನ ಮಾಡಬೇಡಿ. ಇದು ಅಪಾಯಕ್ಕೆ ದಾರಿ ಮಾಡಿಕೊಡಬಹುದು. ಆನೆಗಳು ಕಾಣಿಸಿಕೊಂಡರೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿ. ನಾಗೇಶ್ ಉಪ ವಲಯ ಅರಣ್ಯಾಧಿಕಾರಿ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ತಾಲ್ಲೂಕಿನ ಕನಮನಹಳ್ಳಿ ಗ್ರಾಮದ ಕಾಡಿನಲ್ಲಿ ಗುರುವಾರ ಮಧ್ಯಾಹ್ನ ಕಾಡಾನೆ ಗುಂಪು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p>.<p>ತಾಲ್ಲೂಕಿನ ಕನಮನಹಳ್ಳಿ ಗ್ರಾಮದ ರೈತರು ಜಾನುವಾರು ಮೇಯಿಸಲು ಕಾಡಿನತ್ತ ಹೋದ ಸಂದರ್ಭದಲ್ಲಿ ಆನೆಗಳ ಗುಂಪು ಪ್ರತ್ಯಕ್ಷವಾಗಿದೆ. ಆನೆಗಳನ್ನು ಕಂಡ ರೈತರು ತಕ್ಷಣವೇ ಜಾನುವಾರುಗಳೊಂದಿಗೆ ಗ್ರಾಮದತ್ತ ಓಡಿ ಬಂದಿದ್ದಾರೆ.</p>.<p>ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಪರಿಸ್ಥಿತಿಯನ್ನು ಅವಲೋಕಿಸಿ, ಆನೆಗಳನ್ನು ಕಾಡಿನೊಳಗೆ ಓಡಿಸಲು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರು ಒಂಟಿಯಾಗಿ ಕಾಡಿನಂಚಿನ ಪ್ರದೇಶಗಳಿಗೆ ಹೋಗಬೇಡಿ. ಜಾನುವಾರುಗಳನ್ನು ಮೇಯಿಸಲು ಕಾಡಿಗೆ ಹೋಗಬೇಡಿ. ರಾತ್ರಿ ಸಂಚಾರ ಬೇಡ. ಸಂಜೆ 6 ಗಂಟೆಯ ನಂತರ ಅರಣ್ಯದ ಹಾದಿಗಳಲ್ಲಿ ಸಂಚರಿಸಬೇಡಿ. ಆನೆಗಳು ಕಂಡುಬಂದಲ್ಲಿ ಅವುಗಳನ್ನು ಕೆಣಕದೆ ಅಥವಾ ತಾವೇ ಓಡಿಸಲು ಪ್ರಯತ್ನಿಸದೆ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕೆಂದು ಉಪ ವಲಯ ಅರಣ್ಯಾಧಿಕಾರಿ ನಾಗೇಶ್ ತಿಳಿಸಿದರು.</p>.<p>Quote - ಯಾರೂ ಕೂಡ ಆನೆಗಳ ಹತ್ತಿರ ಹೋಗವುದು ಫೋಟೋ ಅಥವಾ ವಿಡಿಯೊ ತೆಗೆಯುವ ಪ್ರಯತ್ನ ಮಾಡಬೇಡಿ. ಇದು ಅಪಾಯಕ್ಕೆ ದಾರಿ ಮಾಡಿಕೊಡಬಹುದು. ಆನೆಗಳು ಕಾಣಿಸಿಕೊಂಡರೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿ. ನಾಗೇಶ್ ಉಪ ವಲಯ ಅರಣ್ಯಾಧಿಕಾರಿ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>