<p><strong>ಬಂಗಾರಪೇಟೆ:</strong> ತಾಲ್ಲೂಕಿನ ಕೇತಗಾನಹಳ್ಳಿ ಪಂಚಾಯಿತಿ ವ್ಯಾಪ್ತಿಯ ತೋಟಗಳಿಗೆ ದಾಳಿ ನಡೆಸಿರುವ ಕಾಡಾನೆಗಳು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶಪಡಿಸಿವೆ.</p>.<p>ಕಟಾವಿಗೆ ಬಂದಿದ್ದ ರಾಗಿ, ಟೊಮೆಟೊ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ನಾಶಪಡಿಸಿವೆ. ಈ ಬಾರಿ ಉತ್ತಮ ಮಳೆಯಾದ ಕಾರಣ ವಿವಿಧ ಬೆಳೆಗಳು ಸಮೃದ್ಧಿಯಾಗಿ ಬೆಳೆದಿದ್ದವು. ಆದರೆ, ರೈತರ ಕೈ ಸೇರುವ ಮೊದಲೇ ಆನೆ ದಾಳಿಗೆ ನಾಶವಾಗಿವೆ.</p>.<p>‘ಎರಡು ಮರಿಗಳಿಗೆ ಜನ್ಮ ನೀಡಿದ್ದು, ಇನ್ನೂ ಕೆಲದಿನಗಳ ಕಾಲ ಇಲ್ಲಿಯೇ ಠಿಕಾಣಿ ಹೂಡುವ ಸಂಭವವಿದೆ. ಅವುಗಳನ್ನು ಹಿಮ್ಮಟ್ಟಿಸಲು ಸಮಯಾವಕಾಶ ಬೇಕಿದೆ. ಕೆಲವೇ ದಿನಗಳಲ್ಲಿ ಆನೆಗಳನ್ನು ಕಾಡಿನೊಳಕ್ಕೆ ಓಡಿಸಲು ಕ್ರಮವಹಿಸಲಾಗುವುದು’ ಎಂದುವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದರು.</p>.<p>ಆನೆಗಳ ಹಿಂಡು ಕಾಡಿನೊಳಕ್ಕೆ ಹೋಗುವ ತನಕ ಅವುಗಳಿಗೆ ಯಾರೂ ತೊಂದರೆ ನೀಡಬಾರದು. ಬೆಂಕಿ ಹಾಕುವುದು, ಪಟಾಕಿ ಸಿಡಿಸುವುದು ಮತ್ತು ಶಬ್ದ ಮಾಡಿದರೆ ಮರಿಗಳ ಆರೈಕೆಯಲ್ಲಿರುವ ಆನೆಗಳು ಕೆರಳಿ ರೈತರಿಗೆ ಇನ್ನಷ್ಟು ತೊಂದರೆ ನೀಡುವ ಸಂಭವವಿದೆ ಎಂದು ಎಚ್ಚರಿಸಿದರು.</p>.<p>ರೈತರು ಕೆಲವು ದಿನಗಳ ಮಟ್ಟಿಗೆ ಸಂಜೆ 6 ಗಂಟೆ ನಂತರ ಜಮೀನಿನ ಕಡೆ ಮತ್ತು ಕಾಲುದಾರಿಗಳಲ್ಲಿ ಓಡಾಡುವುದನ್ನು ಕಡಿಮೆ ಮಾಡಬೇಕು ಎಂದು ಕೋರಿದರು.</p>.<p>ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬೆಳೆ ನಾಶದ ಜತೆಗೆ ಕೊಳವೆಬಾವಿ ಮತ್ತು ಫೆನ್ಸಿಂಗ್ ನಾಶ ಮಾಡಿದ್ದು, ಪರಿಹಾರ ನೀಡುವುದಾಗಿ ಭರವಸೆ ನೀಡಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಶಶಿಧರ ರೆಡ್ಡಿ, ಗೋಪಾಲರೆಡ್ಡಿ, ಬಾಲರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ತಾಲ್ಲೂಕಿನ ಕೇತಗಾನಹಳ್ಳಿ ಪಂಚಾಯಿತಿ ವ್ಯಾಪ್ತಿಯ ತೋಟಗಳಿಗೆ ದಾಳಿ ನಡೆಸಿರುವ ಕಾಡಾನೆಗಳು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶಪಡಿಸಿವೆ.</p>.<p>ಕಟಾವಿಗೆ ಬಂದಿದ್ದ ರಾಗಿ, ಟೊಮೆಟೊ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ನಾಶಪಡಿಸಿವೆ. ಈ ಬಾರಿ ಉತ್ತಮ ಮಳೆಯಾದ ಕಾರಣ ವಿವಿಧ ಬೆಳೆಗಳು ಸಮೃದ್ಧಿಯಾಗಿ ಬೆಳೆದಿದ್ದವು. ಆದರೆ, ರೈತರ ಕೈ ಸೇರುವ ಮೊದಲೇ ಆನೆ ದಾಳಿಗೆ ನಾಶವಾಗಿವೆ.</p>.<p>‘ಎರಡು ಮರಿಗಳಿಗೆ ಜನ್ಮ ನೀಡಿದ್ದು, ಇನ್ನೂ ಕೆಲದಿನಗಳ ಕಾಲ ಇಲ್ಲಿಯೇ ಠಿಕಾಣಿ ಹೂಡುವ ಸಂಭವವಿದೆ. ಅವುಗಳನ್ನು ಹಿಮ್ಮಟ್ಟಿಸಲು ಸಮಯಾವಕಾಶ ಬೇಕಿದೆ. ಕೆಲವೇ ದಿನಗಳಲ್ಲಿ ಆನೆಗಳನ್ನು ಕಾಡಿನೊಳಕ್ಕೆ ಓಡಿಸಲು ಕ್ರಮವಹಿಸಲಾಗುವುದು’ ಎಂದುವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದರು.</p>.<p>ಆನೆಗಳ ಹಿಂಡು ಕಾಡಿನೊಳಕ್ಕೆ ಹೋಗುವ ತನಕ ಅವುಗಳಿಗೆ ಯಾರೂ ತೊಂದರೆ ನೀಡಬಾರದು. ಬೆಂಕಿ ಹಾಕುವುದು, ಪಟಾಕಿ ಸಿಡಿಸುವುದು ಮತ್ತು ಶಬ್ದ ಮಾಡಿದರೆ ಮರಿಗಳ ಆರೈಕೆಯಲ್ಲಿರುವ ಆನೆಗಳು ಕೆರಳಿ ರೈತರಿಗೆ ಇನ್ನಷ್ಟು ತೊಂದರೆ ನೀಡುವ ಸಂಭವವಿದೆ ಎಂದು ಎಚ್ಚರಿಸಿದರು.</p>.<p>ರೈತರು ಕೆಲವು ದಿನಗಳ ಮಟ್ಟಿಗೆ ಸಂಜೆ 6 ಗಂಟೆ ನಂತರ ಜಮೀನಿನ ಕಡೆ ಮತ್ತು ಕಾಲುದಾರಿಗಳಲ್ಲಿ ಓಡಾಡುವುದನ್ನು ಕಡಿಮೆ ಮಾಡಬೇಕು ಎಂದು ಕೋರಿದರು.</p>.<p>ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬೆಳೆ ನಾಶದ ಜತೆಗೆ ಕೊಳವೆಬಾವಿ ಮತ್ತು ಫೆನ್ಸಿಂಗ್ ನಾಶ ಮಾಡಿದ್ದು, ಪರಿಹಾರ ನೀಡುವುದಾಗಿ ಭರವಸೆ ನೀಡಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಶಶಿಧರ ರೆಡ್ಡಿ, ಗೋಪಾಲರೆಡ್ಡಿ, ಬಾಲರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>