<p><strong>ಕೋಲಾರ:</strong> 2018–19ನೇ ಸಾಲಿನಲ್ಲಿ ಅಪೌಷ್ಟಿಕತೆ ನಿವಾರಣೆಯ ಜಿಲ್ಲೆಗಳ ಪಟ್ಟಿಯಲ್ಲಿ ಕೋಲಾರ ಮೊದಲ ಸ್ಥಾನ ಪಡೆದಿದೆ. ವಿಜಯಪುರ, ಯಾದಗಿರಿ ಮತ್ತು ರಾಯಚೂರು ನಂತರದ ಸ್ಥಾನದಲ್ಲಿವೆ.</p>.<p>16 ಲಕ್ಷ ಜನಸಂಖ್ಯೆಯ ಜಿಲ್ಲೆಯಲ್ಲಿ ಬಹುತೇಕರು ಕೃಷಿ, ಪಶುಸಂಗೋಪನೆಯನ್ನು ಅವಲಂಬಿಸಿದ್ದಾರೆ. ಪ್ರತಿ ವರ್ಷ ಸಾವಿರಾರು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದರು. ಈ ಗಂಭೀರ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2017–18ರಲ್ಲಿ ‘ಪೌಷ್ಟಿಕ ಕೋಲಾರ ಅಭಿಯಾನ’ ಆರಂಭಿಸಿತು.</p>.<p>2017–18ರಲ್ಲಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳ 90,420 ಮಕ್ಕಳನ್ನು ತೂಕ ಮಾಡಲಾಗಿತ್ತು. ಇವರಲ್ಲಿ 11,544 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಆಗ ‘ಪೌಷ್ಟಿಕ ಕೋಲಾರ ಅಭಿಯಾನ’ದ ಹೆಜ್ಜೆ ಇಡಲಾಯಿತು.</p>.<p>2018–19ನೇ ಸಾಲಿನಲ್ಲಿ ಅಂಗನವಾಡಿ ಕೇಂದ್ರಗಳ 83,366 ಮಕ್ಕಳನ್ನು ತೂಕ ಮಾಡಲಾಗಿದ್ದು ಇವರಲ್ಲಿ 4,556 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಹೀಗೆ ಒಂದೇ ವರ್ಷದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ.</p>.<p>‘ಪೌಷ್ಟಿಕ ಆಹಾರ ಶಿಬಿರ, ತಾಯಂದಿರ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರ ಫಲ ಇದು’ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೋಸ್ಲಿನ್ ಪಿ. ಸತ್ಯ ತಿಳಿಸಿದರು.</p>.<p>‘ಮಕ್ಕಳು ಅಪೌಷ್ಟಿಕ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನುವುದು ಗಮನಕ್ಕೆ ಬಂದ ತಕ್ಷಣ ಅಪೌಷ್ಟಿಕತೆ ನಿವಾರಣಾ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೌಷ್ಟಿಕ ಆಹಾರ ಸೇವಿಸಲು ಒಂದು ವರ್ಷಕ್ಕೆ ಒಂದು ಮಗುವಿಗೆ ₹ 200 ನೀಡುತ್ತೇವೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಎಂ.ಮುನಿರಾಜು ಮಾಹಿತಿ ನೀಡಿದರು.</p>.<p><strong>ಹೆಚ್ಚುವರಿ ಆಹಾರ ಪೂರೈಕೆ</strong></p>.<p>‘ಪೌಷ್ಟಿಕ ಕೋಲಾರ ಅಭಿಯಾನ’ದ ಅಡಿ ಅಂಗನವಾಡಿ ಕೇಂದ್ರಗಳಿಗೂ ಹೆಚ್ಚುವರಿ ಆಹಾರ ಒದಗಿಸಲಾಗುತ್ತಿದೆ. ಸಾಮಾನ್ಯ ಮಗುವಿಗೆ 150 ಮಿ.ಲೀ. ಹಾಲು ನೀಡಿದರೆ ಅಪೌಷ್ಟಿಕ ಮಗುವಿಗೆ 200 ಮಿ.ಲೀ. ಹಾಲು ಕೊಡುತ್ತಿದ್ದೇವೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಎಂ.ಮುನಿರಾಜು ವಿವರಿಸಿದರು.</p>.<p>‘ಸಾಮಾನ್ಯ ಮಗುವಿಗೆ ಅಂಗನವಾಡಿಯಲ್ಲಿ ವಾರದಲ್ಲಿ ಎರಡು ದಿನ ಮೊಟ್ಟೆ ನೀಡಿದರೆ, ಅಪೌಷ್ಟಿಕ ಮಕ್ಕಳಿಗೆ ಮೂರು ದಿನ ಕೊಡಲಾಗುತ್ತಿದೆ. ಶೀಘ್ರದಲ್ಲಿಯೇ ಜಿಲ್ಲೆಯನ್ನು ಅಪೌಷ್ಟಿಕ ಮುಕ್ತಗೊಳಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> 2018–19ನೇ ಸಾಲಿನಲ್ಲಿ ಅಪೌಷ್ಟಿಕತೆ ನಿವಾರಣೆಯ ಜಿಲ್ಲೆಗಳ ಪಟ್ಟಿಯಲ್ಲಿ ಕೋಲಾರ ಮೊದಲ ಸ್ಥಾನ ಪಡೆದಿದೆ. ವಿಜಯಪುರ, ಯಾದಗಿರಿ ಮತ್ತು ರಾಯಚೂರು ನಂತರದ ಸ್ಥಾನದಲ್ಲಿವೆ.</p>.<p>16 ಲಕ್ಷ ಜನಸಂಖ್ಯೆಯ ಜಿಲ್ಲೆಯಲ್ಲಿ ಬಹುತೇಕರು ಕೃಷಿ, ಪಶುಸಂಗೋಪನೆಯನ್ನು ಅವಲಂಬಿಸಿದ್ದಾರೆ. ಪ್ರತಿ ವರ್ಷ ಸಾವಿರಾರು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದರು. ಈ ಗಂಭೀರ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2017–18ರಲ್ಲಿ ‘ಪೌಷ್ಟಿಕ ಕೋಲಾರ ಅಭಿಯಾನ’ ಆರಂಭಿಸಿತು.</p>.<p>2017–18ರಲ್ಲಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳ 90,420 ಮಕ್ಕಳನ್ನು ತೂಕ ಮಾಡಲಾಗಿತ್ತು. ಇವರಲ್ಲಿ 11,544 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಆಗ ‘ಪೌಷ್ಟಿಕ ಕೋಲಾರ ಅಭಿಯಾನ’ದ ಹೆಜ್ಜೆ ಇಡಲಾಯಿತು.</p>.<p>2018–19ನೇ ಸಾಲಿನಲ್ಲಿ ಅಂಗನವಾಡಿ ಕೇಂದ್ರಗಳ 83,366 ಮಕ್ಕಳನ್ನು ತೂಕ ಮಾಡಲಾಗಿದ್ದು ಇವರಲ್ಲಿ 4,556 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಹೀಗೆ ಒಂದೇ ವರ್ಷದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ.</p>.<p>‘ಪೌಷ್ಟಿಕ ಆಹಾರ ಶಿಬಿರ, ತಾಯಂದಿರ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರ ಫಲ ಇದು’ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೋಸ್ಲಿನ್ ಪಿ. ಸತ್ಯ ತಿಳಿಸಿದರು.</p>.<p>‘ಮಕ್ಕಳು ಅಪೌಷ್ಟಿಕ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನುವುದು ಗಮನಕ್ಕೆ ಬಂದ ತಕ್ಷಣ ಅಪೌಷ್ಟಿಕತೆ ನಿವಾರಣಾ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೌಷ್ಟಿಕ ಆಹಾರ ಸೇವಿಸಲು ಒಂದು ವರ್ಷಕ್ಕೆ ಒಂದು ಮಗುವಿಗೆ ₹ 200 ನೀಡುತ್ತೇವೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಎಂ.ಮುನಿರಾಜು ಮಾಹಿತಿ ನೀಡಿದರು.</p>.<p><strong>ಹೆಚ್ಚುವರಿ ಆಹಾರ ಪೂರೈಕೆ</strong></p>.<p>‘ಪೌಷ್ಟಿಕ ಕೋಲಾರ ಅಭಿಯಾನ’ದ ಅಡಿ ಅಂಗನವಾಡಿ ಕೇಂದ್ರಗಳಿಗೂ ಹೆಚ್ಚುವರಿ ಆಹಾರ ಒದಗಿಸಲಾಗುತ್ತಿದೆ. ಸಾಮಾನ್ಯ ಮಗುವಿಗೆ 150 ಮಿ.ಲೀ. ಹಾಲು ನೀಡಿದರೆ ಅಪೌಷ್ಟಿಕ ಮಗುವಿಗೆ 200 ಮಿ.ಲೀ. ಹಾಲು ಕೊಡುತ್ತಿದ್ದೇವೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಎಂ.ಮುನಿರಾಜು ವಿವರಿಸಿದರು.</p>.<p>‘ಸಾಮಾನ್ಯ ಮಗುವಿಗೆ ಅಂಗನವಾಡಿಯಲ್ಲಿ ವಾರದಲ್ಲಿ ಎರಡು ದಿನ ಮೊಟ್ಟೆ ನೀಡಿದರೆ, ಅಪೌಷ್ಟಿಕ ಮಕ್ಕಳಿಗೆ ಮೂರು ದಿನ ಕೊಡಲಾಗುತ್ತಿದೆ. ಶೀಘ್ರದಲ್ಲಿಯೇ ಜಿಲ್ಲೆಯನ್ನು ಅಪೌಷ್ಟಿಕ ಮುಕ್ತಗೊಳಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>