<p><strong>ಮುಳಬಾಗಿಲು:</strong> ತಾಲ್ಲೂಕಿನ ಆವಣಿ ಗ್ರಾಮದ ಶೃಂಗೇರಿ ಮಠದ ಉತ್ತರಾಧಿಕಾರಿ ಸ್ಥಾನಕ್ಕೆ ಶೃಂಗೇರಿ ಮಠದ ಶ್ರೀಗಳು ಸೂಚಿಸಿದವರನ್ನೇ ನೇಮಿಸಲಾಗುವುದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ತಿಳಿಸಿದರು.</p>.<p>ತಾಲ್ಲೂಕಿನ ಆವಣಿ ಗ್ರಾಮದಲ್ಲಿ ಗುರುವಾರ ನಡೆದ ಅಭಿನವ ವಿದ್ಯಾಶಂಕರಭಾರತೀ ಸ್ವಾಮೀಜಿಯ ಪ್ರಥಮ ಆರಾಧನಾ ಮಹೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಮಠದ ಅಭಿವೃದ್ಧಿಗೆ ಹನ್ನೊಂದು ಮಂದಿ ಟ್ರಸ್ಟಿಗಳನ್ನು ನೇಮಕ ಮಾಡಲಾಗಿದೆ. ಮಠದ ಕೋಟ್ಯಂತರ ರೂಪಾಯಿ ಆಸ್ತಿಯು ಹಲವಾರು ಕಡೆ ಹಂಚಿಹೋಗಿದೆ. ಅವುಗಳನ್ನು ವಶಪಡಿಸಿಕೊಳ್ಳಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.</p>.<p>ಆವಣಿ ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ, ಆಂಧ್ರಪದೇಶದ ಕುಪ್ಪ ನಗರದಲ್ಲಿರುವ 46 ಎಕರೆ ಜಮೀನು ವಶಪಡಿಸಿಕೊಳ್ಳಲು ಕ್ರಮ ತೆಗೆದುಕೊಳ್ಳಲಾಗಿದೆ. ಈ ಮಠದಲ್ಲಿ ಗೋಶಾಲೆ, ವೇದಪಾಠ ಶಾಲೆ ತೆರೆಯಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.</p>.<p>ಮಠದ ಅಧ್ಯಕ್ಷ ಭಾನುಪ್ರಕಾಶ್ ಶರ್ಮ, ಟ್ರಸ್ಟಿಗಳಾದ ಕೃಷ್ಣಮೂರ್ತಿ, ಆವಣಿ ಎಸ್., ವಾಸುದೇವ್, ನಂಜುಂಡಶಾಸ್ತ್ರಿ, ಸೂರ್ಯಪ್ರಸಾದ್, ಅಚ್ಯುತ, ಎ.ಎನ್. ಚಂದ್ರಶೇಖರ್, ಮುಳಬಾಗಿಲು ಬ್ರಾಹ್ಮಣ ಸಂಘದ ಅಧ್ಯಕ್ಷ ಎಂ.ಎನ್. ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ತಾಲ್ಲೂಕಿನ ಆವಣಿ ಗ್ರಾಮದ ಶೃಂಗೇರಿ ಮಠದ ಉತ್ತರಾಧಿಕಾರಿ ಸ್ಥಾನಕ್ಕೆ ಶೃಂಗೇರಿ ಮಠದ ಶ್ರೀಗಳು ಸೂಚಿಸಿದವರನ್ನೇ ನೇಮಿಸಲಾಗುವುದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ತಿಳಿಸಿದರು.</p>.<p>ತಾಲ್ಲೂಕಿನ ಆವಣಿ ಗ್ರಾಮದಲ್ಲಿ ಗುರುವಾರ ನಡೆದ ಅಭಿನವ ವಿದ್ಯಾಶಂಕರಭಾರತೀ ಸ್ವಾಮೀಜಿಯ ಪ್ರಥಮ ಆರಾಧನಾ ಮಹೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಮಠದ ಅಭಿವೃದ್ಧಿಗೆ ಹನ್ನೊಂದು ಮಂದಿ ಟ್ರಸ್ಟಿಗಳನ್ನು ನೇಮಕ ಮಾಡಲಾಗಿದೆ. ಮಠದ ಕೋಟ್ಯಂತರ ರೂಪಾಯಿ ಆಸ್ತಿಯು ಹಲವಾರು ಕಡೆ ಹಂಚಿಹೋಗಿದೆ. ಅವುಗಳನ್ನು ವಶಪಡಿಸಿಕೊಳ್ಳಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.</p>.<p>ಆವಣಿ ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ, ಆಂಧ್ರಪದೇಶದ ಕುಪ್ಪ ನಗರದಲ್ಲಿರುವ 46 ಎಕರೆ ಜಮೀನು ವಶಪಡಿಸಿಕೊಳ್ಳಲು ಕ್ರಮ ತೆಗೆದುಕೊಳ್ಳಲಾಗಿದೆ. ಈ ಮಠದಲ್ಲಿ ಗೋಶಾಲೆ, ವೇದಪಾಠ ಶಾಲೆ ತೆರೆಯಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.</p>.<p>ಮಠದ ಅಧ್ಯಕ್ಷ ಭಾನುಪ್ರಕಾಶ್ ಶರ್ಮ, ಟ್ರಸ್ಟಿಗಳಾದ ಕೃಷ್ಣಮೂರ್ತಿ, ಆವಣಿ ಎಸ್., ವಾಸುದೇವ್, ನಂಜುಂಡಶಾಸ್ತ್ರಿ, ಸೂರ್ಯಪ್ರಸಾದ್, ಅಚ್ಯುತ, ಎ.ಎನ್. ಚಂದ್ರಶೇಖರ್, ಮುಳಬಾಗಿಲು ಬ್ರಾಹ್ಮಣ ಸಂಘದ ಅಧ್ಯಕ್ಷ ಎಂ.ಎನ್. ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>