<p><strong>ಕೋಲಾರ: </strong>‘ಸಹಕಾರ ಸಂಘಗಳು ರಾಜಕೀಯ ರಹಿತವಾಗಿ ಮಹಿಳೆಯರು ಮತ್ತು ರೈತರ ಸಬಲೀಕರಣಕ್ಕೆ ಒತ್ತು ನೀಡಿದರೆ ಲಾಭ ಗಳಿಸಲು ಸಹಕಾರಿಯಾಗುತ್ತದೆ’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಹುತ್ತೂರು ರೇಷ್ಮೆ ಬೆಳೆಗಾರರ ಮತ್ತು ರೈತರ ಸೇವಾ ಸಹಕಾರ ಸಂಘವು (ಎಸ್ಎಫ್ಸಿಎಸ್) ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ‘ಹುತ್ತೂರು ಹೋಬಳಿ ಸೊಸೈಟಿ ವ್ಯವಸ್ಥೆ ಸರಿಪಡಿಸಲು ಸಂಪೂರ್ಣ ಸಹಕಾರ ಕೊಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಸೊಸೈಟಿಯಲ್ಲಿ ಹಿಂದೆ ಆಗಿರುವ ಲೋಪ ಸರಿಪಡಿಸಿಕೊಳ್ಳಬೇಕು. ತಾರತಮ್ಯಕ್ಕೆ ಅವಕಾಶವಿಲ್ಲದೆ ಸ್ತ್ರೀಶಕ್ತಿ ಸಂಘಗಳಿಗೆ ಮತ್ತು ರೈತರಿಗೆ ಸಾಲ ಒದಗಿಸಲು ಡಿಸಿಸಿ ಬ್ಯಾಂಕ್ ಅಗತ್ಯ ಕ್ರಮ ಕೈಗೊಂಡಿದೆ. ಸಿಬ್ಬಂದಿ ನಿರ್ಲಕ್ಷ್ಯದಿಂದ ಸಂಘಕ್ಕೆ ಹಿನ್ನಡೆಯಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸೊಸೈಟಿ ಆಡಳಿತ ಮಂಡಳಿ ಸಭೆ ನಡೆಸಿ ಲೋಪ ಸರಿಪಡಿಸುತ್ತೇವೆ. ಮುಂದೆ ಇಂತಹ ಪರಿಸ್ಥಿತಿ ಎದುರಾಗದಂತೆ ಎಚ್ಚರ ವಹಿಸುತ್ತೇವೆ’ ಎಂದು ಹುತ್ತೂರು ಸೊಸೈಟಿ ಅಧ್ಯಕ್ಷ ವಿ.ರಾಮು ಹೇಳಿದರು.</p>.<p>ಹುತ್ತೂರು ಎಸ್ಎಫ್ಸಿಎಸ್ ಉಪಾಧ್ಯಕ್ಷ ಅಂಬರೀಶ್, ನಿರ್ದೇಶಕರಾದ ರಮೇಶ್, ಬೈರೇಗೌಡ, ಚಂದ್ರಪ್ಪ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಸಹಕಾರ ಸಂಘಗಳು ರಾಜಕೀಯ ರಹಿತವಾಗಿ ಮಹಿಳೆಯರು ಮತ್ತು ರೈತರ ಸಬಲೀಕರಣಕ್ಕೆ ಒತ್ತು ನೀಡಿದರೆ ಲಾಭ ಗಳಿಸಲು ಸಹಕಾರಿಯಾಗುತ್ತದೆ’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಹುತ್ತೂರು ರೇಷ್ಮೆ ಬೆಳೆಗಾರರ ಮತ್ತು ರೈತರ ಸೇವಾ ಸಹಕಾರ ಸಂಘವು (ಎಸ್ಎಫ್ಸಿಎಸ್) ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ‘ಹುತ್ತೂರು ಹೋಬಳಿ ಸೊಸೈಟಿ ವ್ಯವಸ್ಥೆ ಸರಿಪಡಿಸಲು ಸಂಪೂರ್ಣ ಸಹಕಾರ ಕೊಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಸೊಸೈಟಿಯಲ್ಲಿ ಹಿಂದೆ ಆಗಿರುವ ಲೋಪ ಸರಿಪಡಿಸಿಕೊಳ್ಳಬೇಕು. ತಾರತಮ್ಯಕ್ಕೆ ಅವಕಾಶವಿಲ್ಲದೆ ಸ್ತ್ರೀಶಕ್ತಿ ಸಂಘಗಳಿಗೆ ಮತ್ತು ರೈತರಿಗೆ ಸಾಲ ಒದಗಿಸಲು ಡಿಸಿಸಿ ಬ್ಯಾಂಕ್ ಅಗತ್ಯ ಕ್ರಮ ಕೈಗೊಂಡಿದೆ. ಸಿಬ್ಬಂದಿ ನಿರ್ಲಕ್ಷ್ಯದಿಂದ ಸಂಘಕ್ಕೆ ಹಿನ್ನಡೆಯಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸೊಸೈಟಿ ಆಡಳಿತ ಮಂಡಳಿ ಸಭೆ ನಡೆಸಿ ಲೋಪ ಸರಿಪಡಿಸುತ್ತೇವೆ. ಮುಂದೆ ಇಂತಹ ಪರಿಸ್ಥಿತಿ ಎದುರಾಗದಂತೆ ಎಚ್ಚರ ವಹಿಸುತ್ತೇವೆ’ ಎಂದು ಹುತ್ತೂರು ಸೊಸೈಟಿ ಅಧ್ಯಕ್ಷ ವಿ.ರಾಮು ಹೇಳಿದರು.</p>.<p>ಹುತ್ತೂರು ಎಸ್ಎಫ್ಸಿಎಸ್ ಉಪಾಧ್ಯಕ್ಷ ಅಂಬರೀಶ್, ನಿರ್ದೇಶಕರಾದ ರಮೇಶ್, ಬೈರೇಗೌಡ, ಚಂದ್ರಪ್ಪ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>