ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಅಂಬೇಡ್ಕರ್, ಗಾಂಧೀಜಿ, ಕುವೆಂಪು, ಸರ್ವಜ್ಞರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಟಿ.ಚನ್ನಯ್ಯ ರಂಗಮಂದಿರದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದರು. ಉಪನ್ಯಾಸಕ ಶಂಕರಪ್ಪ, ಖಾಸಗಿ ಅನುದಾನರಹಿತ ಶಾಲೆಗಳ ರಾಜ್ಯ ಸಂಘಟನೆ (ಕ್ಯಾಮ್ಸ್) ಜಿಲ್ಲಾ ಅಧ್ಯಕ್ಷ ಎ.ಸದಾನಂದ, ಬೆಂಬಲಿಗರು ಹಾಜರಿದ್ದರು.