<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಕೊಟ್ಲವಾರಿಪಲ್ಲಿ ಅರಣ್ಯ ಪ್ರದೇಶದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಿದೆ.</p>.<p>ಸರ್ವೆ ಸಂಖ್ಯೆ 20 ರಲ್ಲಿ ಸುಮಾರು 540 ಎಕರೆಯಷ್ಟು ಅರಣ್ಯ ಭೂಮಿ ಒತ್ತುವರಿ ಆಗಿದ್ದು, ಡಿಸಿಎಫ್ ಸರೀನಾ ಸಿಕ್ಕಲಿಗಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.</p>.<p>20 ಜೆಸಿಬಿ, ಎರಡು ಮೀಸಲು ಪೊಲೀಸ್ ವಾಹನಗಳೊಂದಿಗೆ ಪೊಲೀಸ್ ಸಿಬ್ಬಂದಿ ಹಾಗೂ ಅರಣ್ಯ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈವರೆಗೆ ಸುಮಾರು 200 ಎಕರೆ ತೆರವುಗೊಳಿಸಲಾಗಿದೆ. ಇನ್ನೂ ಎರಡು ದಿನ ಕಾರ್ಯಾಚರಣೆ ಮುಂದುವರಿಯಲಿದೆ.</p>.<p>ಮಾವಿನ ಮರಗಳು, ತೋಟದ ಬೆಳೆಗಳಾದ ಟೊಮೆಟೊ, ಹೂವಿನ ಗಿಡಗಳು, ಇತರೆ ಬೆಳೆಗಳನ್ನ ಹಾಕಿದ್ದರು. ಅವುಗಳನ್ನು, ಕೊಳವೆಬಾವಿಯನ್ನ ಜಿಸಿಬಿ ಮೂಲಕ ನಾಶಪಡಿಸಲಾಗಿದೆ. ಒತ್ತುವರಿ ಜಾಗವನ್ನ ತೆರವುಗೊಳಿಸಿದ ಜಾಗದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಪುನಃ ಗಿಡ ನೆಡುತ್ತಿದ್ದಾರೆ.</p>.<p>ರೈತರನ್ನು ಒತ್ತುವರಿ ಸ್ಥಳಕ್ಕೆ ಬಿಡದೆ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದಾರೆ. ಒತ್ತುವರಿ ಮಾಡಿಕೊಂಡಿರುವ 30 ರೈತರಿಗೆ ಈಗಾಗಲೇ 4 ನೋಟಿಸ್ ನೀಡಲಾಗಿತ್ತು. ನೋಟಿಸ್ ನೀಡಿದ್ದರೂ ಪುನಃ ಬೆಳೆ ಬೆಳೆಯುತ್ತಿರುವುದಕ್ಕೆ ಅರಣ್ಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಕೆಲ ರೈತರಿಂದ ಪ್ರತಿರೋಧ ಎದುರಾಯಿತು. ಅರಣ್ಯ ಜಾಗ ಇದಾಗಿದ್ದು ಈ ಹಿಂದೆಯೇ ನೋಟಿಸ್ ನೀಡಿದ್ದರೂ ಮತ್ತೆ ಬೆಳೆ ಬೆಳೆದಿದ್ದಾರೆ. ಟೊಮೆಟೊ ಕಟಾವಿಗೆ ಅವಕಾಶ ಕೂಡ ನೀಡಿದ್ದೇವೆ’ ಎಂದು ಡಿಸಿಎಫ್ ಸರೀನಾ ಸಿಕ್ಕಲಿಗಾರ್ ತಿಳಿಸಿದರು.</p>.<p>ಎಸಿಎಫ್ ಕೆ.ಮಹೇಶ್, ಆರ್ಎಫ್ಒ ರವಿಕೀರ್ತಿ, ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್, ಸಬ್ ಇನ್ಸ್ಪೆಕ್ಟರ್ ರಾಮು, ಜಯರಾಮ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><blockquote>ಕೋಲಾರ ಜಿಲ್ಲೆಯಲ್ಲಿ 8 ಸಾವಿರ ಎಕರೆಗೂ ಅಧಿಕ ಅರಣ್ಯ ಪ್ರದೇಶ ಒತ್ತುವರಿ ಆಗಿದೆ. ಹಿಂದಿನ ಡಿಸಿಎಫ್ ಏಡುಕೊಂಡಲು 2500 ಎಕರೆ ಬಿಡಿಸಿದ್ದರು. ನಾನು ಬಂದ ಮೇಲೆ 700 ಎಕರೆ ತೆರವಾಗಿದೆ </blockquote><span class="attribution">ಸರೀನಾ ಸಿಕ್ಕಲಿಗಾರ್ ಡಿಸಿಎಫ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಕೊಟ್ಲವಾರಿಪಲ್ಲಿ ಅರಣ್ಯ ಪ್ರದೇಶದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಿದೆ.</p>.<p>ಸರ್ವೆ ಸಂಖ್ಯೆ 20 ರಲ್ಲಿ ಸುಮಾರು 540 ಎಕರೆಯಷ್ಟು ಅರಣ್ಯ ಭೂಮಿ ಒತ್ತುವರಿ ಆಗಿದ್ದು, ಡಿಸಿಎಫ್ ಸರೀನಾ ಸಿಕ್ಕಲಿಗಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.</p>.<p>20 ಜೆಸಿಬಿ, ಎರಡು ಮೀಸಲು ಪೊಲೀಸ್ ವಾಹನಗಳೊಂದಿಗೆ ಪೊಲೀಸ್ ಸಿಬ್ಬಂದಿ ಹಾಗೂ ಅರಣ್ಯ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈವರೆಗೆ ಸುಮಾರು 200 ಎಕರೆ ತೆರವುಗೊಳಿಸಲಾಗಿದೆ. ಇನ್ನೂ ಎರಡು ದಿನ ಕಾರ್ಯಾಚರಣೆ ಮುಂದುವರಿಯಲಿದೆ.</p>.<p>ಮಾವಿನ ಮರಗಳು, ತೋಟದ ಬೆಳೆಗಳಾದ ಟೊಮೆಟೊ, ಹೂವಿನ ಗಿಡಗಳು, ಇತರೆ ಬೆಳೆಗಳನ್ನ ಹಾಕಿದ್ದರು. ಅವುಗಳನ್ನು, ಕೊಳವೆಬಾವಿಯನ್ನ ಜಿಸಿಬಿ ಮೂಲಕ ನಾಶಪಡಿಸಲಾಗಿದೆ. ಒತ್ತುವರಿ ಜಾಗವನ್ನ ತೆರವುಗೊಳಿಸಿದ ಜಾಗದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಪುನಃ ಗಿಡ ನೆಡುತ್ತಿದ್ದಾರೆ.</p>.<p>ರೈತರನ್ನು ಒತ್ತುವರಿ ಸ್ಥಳಕ್ಕೆ ಬಿಡದೆ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದಾರೆ. ಒತ್ತುವರಿ ಮಾಡಿಕೊಂಡಿರುವ 30 ರೈತರಿಗೆ ಈಗಾಗಲೇ 4 ನೋಟಿಸ್ ನೀಡಲಾಗಿತ್ತು. ನೋಟಿಸ್ ನೀಡಿದ್ದರೂ ಪುನಃ ಬೆಳೆ ಬೆಳೆಯುತ್ತಿರುವುದಕ್ಕೆ ಅರಣ್ಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಕೆಲ ರೈತರಿಂದ ಪ್ರತಿರೋಧ ಎದುರಾಯಿತು. ಅರಣ್ಯ ಜಾಗ ಇದಾಗಿದ್ದು ಈ ಹಿಂದೆಯೇ ನೋಟಿಸ್ ನೀಡಿದ್ದರೂ ಮತ್ತೆ ಬೆಳೆ ಬೆಳೆದಿದ್ದಾರೆ. ಟೊಮೆಟೊ ಕಟಾವಿಗೆ ಅವಕಾಶ ಕೂಡ ನೀಡಿದ್ದೇವೆ’ ಎಂದು ಡಿಸಿಎಫ್ ಸರೀನಾ ಸಿಕ್ಕಲಿಗಾರ್ ತಿಳಿಸಿದರು.</p>.<p>ಎಸಿಎಫ್ ಕೆ.ಮಹೇಶ್, ಆರ್ಎಫ್ಒ ರವಿಕೀರ್ತಿ, ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್, ಸಬ್ ಇನ್ಸ್ಪೆಕ್ಟರ್ ರಾಮು, ಜಯರಾಮ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><blockquote>ಕೋಲಾರ ಜಿಲ್ಲೆಯಲ್ಲಿ 8 ಸಾವಿರ ಎಕರೆಗೂ ಅಧಿಕ ಅರಣ್ಯ ಪ್ರದೇಶ ಒತ್ತುವರಿ ಆಗಿದೆ. ಹಿಂದಿನ ಡಿಸಿಎಫ್ ಏಡುಕೊಂಡಲು 2500 ಎಕರೆ ಬಿಡಿಸಿದ್ದರು. ನಾನು ಬಂದ ಮೇಲೆ 700 ಎಕರೆ ತೆರವಾಗಿದೆ </blockquote><span class="attribution">ಸರೀನಾ ಸಿಕ್ಕಲಿಗಾರ್ ಡಿಸಿಎಫ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>