<p><strong>ಕೋಲಾರ:</strong> ಮುಳಬಾಗಿಲು ತಾಲ್ಲೂಕು ಇಒ ಸರ್ವೇಶ್ ಅವರ ಮೇಲೆ ಕಿರುಕುಳ ಆರೋಪ ಮಾಡಿರುವ ಪಿಡಿಒಗಳು ಸಾಮೂಹಿಕ ರಾಜೀನಾಮೆ ನೀಡಲು ಮುಂದಾದ ಪ್ರಹಸನ ನಡೆದಿದೆ.</p>.<p>ಪಿಡಿಒಗಳಿಗೆ ಸರ್ವೇಶ್ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ ಅವರನ್ನು ಭೇಟಿ ಮಾಡಿ ತಮಗೆ ಆಗುತ್ತಿರುವ ತೊಂದರೆ ಬಗ್ಗೆ ತಿಳಿಸಿದರು.</p>.<p>ಸರ್ವೇಶ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದರು.</p>.<p>‘ಸರ್ವೇಶ್ ಅವರ ಭ್ರಷ್ಟಾಚಾರ ಖಂಡಿಸಿ ತಾಲ್ಲೂಕು ಕಚೇರಿ ಮುಂದೆ ವಿವಿಧ ಸಂಘಟನೆಗಳು ಸತ್ಯಾಗ್ರಹ ಮಾಡುತ್ತಿವೆ. ಇಷ್ಟೆಲ್ಲಾ ಆರೋಪಗಳು, ಹೋರಾಟ ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ತಾಲ್ಲೂಕಿನಲ್ಲಿ ಏಳು ವರ್ಷಗಳಿಂದ ಇಒ ಆಗಿ ಕಾರ್ಯ ನಿರ್ವಹಿಸುತ್ತಿರುವ ಸರ್ವೇಶ್ ಪಿಡಿಓ ಹಾಗೂ ಸಿಬ್ಬಂದಿಯಿಂದ ವಸೂಲಿಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಈವರೆಗೆ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.</p>.<p>25ಕ್ಕೂ ಹೆಚ್ಚು ಪಿಡಿಓಗಳು ಸಿಇಒಗೆ ಮನವಿ ಸಲ್ಲಿಸಿದರು. ಮುಳಬಾಗಿಲು ಕ್ಷೇತ್ರದ ಶಾಸಕ ಸಮೃದ್ಧಿ ಮಂಜುನಾಥ್ ಬಳಿಯೂ ಪಿಡಿಒಗಳು ಅಳಲು ಹೇಳಿಕೊಂಡಿದ್ದಾರೆ. ಸಂಜೆಯೊಳಗೆ ಇಒ ಸರ್ವೇಶ್ ವರ್ಗಾವಣೆ ಆಗದಿದ್ದರೆ ಪಿಡಿಒಗಳೊಂದಿಗೆ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಮುಳಬಾಗಿಲು ತಾಲ್ಲೂಕು ಇಒ ಸರ್ವೇಶ್ ಅವರ ಮೇಲೆ ಕಿರುಕುಳ ಆರೋಪ ಮಾಡಿರುವ ಪಿಡಿಒಗಳು ಸಾಮೂಹಿಕ ರಾಜೀನಾಮೆ ನೀಡಲು ಮುಂದಾದ ಪ್ರಹಸನ ನಡೆದಿದೆ.</p>.<p>ಪಿಡಿಒಗಳಿಗೆ ಸರ್ವೇಶ್ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ ಅವರನ್ನು ಭೇಟಿ ಮಾಡಿ ತಮಗೆ ಆಗುತ್ತಿರುವ ತೊಂದರೆ ಬಗ್ಗೆ ತಿಳಿಸಿದರು.</p>.<p>ಸರ್ವೇಶ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದರು.</p>.<p>‘ಸರ್ವೇಶ್ ಅವರ ಭ್ರಷ್ಟಾಚಾರ ಖಂಡಿಸಿ ತಾಲ್ಲೂಕು ಕಚೇರಿ ಮುಂದೆ ವಿವಿಧ ಸಂಘಟನೆಗಳು ಸತ್ಯಾಗ್ರಹ ಮಾಡುತ್ತಿವೆ. ಇಷ್ಟೆಲ್ಲಾ ಆರೋಪಗಳು, ಹೋರಾಟ ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ತಾಲ್ಲೂಕಿನಲ್ಲಿ ಏಳು ವರ್ಷಗಳಿಂದ ಇಒ ಆಗಿ ಕಾರ್ಯ ನಿರ್ವಹಿಸುತ್ತಿರುವ ಸರ್ವೇಶ್ ಪಿಡಿಓ ಹಾಗೂ ಸಿಬ್ಬಂದಿಯಿಂದ ವಸೂಲಿಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಈವರೆಗೆ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.</p>.<p>25ಕ್ಕೂ ಹೆಚ್ಚು ಪಿಡಿಓಗಳು ಸಿಇಒಗೆ ಮನವಿ ಸಲ್ಲಿಸಿದರು. ಮುಳಬಾಗಿಲು ಕ್ಷೇತ್ರದ ಶಾಸಕ ಸಮೃದ್ಧಿ ಮಂಜುನಾಥ್ ಬಳಿಯೂ ಪಿಡಿಒಗಳು ಅಳಲು ಹೇಳಿಕೊಂಡಿದ್ದಾರೆ. ಸಂಜೆಯೊಳಗೆ ಇಒ ಸರ್ವೇಶ್ ವರ್ಗಾವಣೆ ಆಗದಿದ್ದರೆ ಪಿಡಿಒಗಳೊಂದಿಗೆ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>