<p><strong>ಕೋಲಾರ</strong>: ‘ಜಿಲ್ಲಾ ಕೇಂದ್ರದ ಎಸ್ಎನ್ಆರ್ ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.</p>.<p>ಇಲ್ಲಿ ಸೋಮವಾರ ಎಸ್ಎನ್ಆರ್ ಆಸ್ಪತ್ರೆಗೆ ಭೇಡಿ ಪರಿಶೀಲನೆ ನಡೆಸಿ ಮಾತನಾಡಿ, ‘ನಾನು ಸಚಿವನಾಗಿದ್ದಾಗ ಈ ಆಸ್ಪತ್ರೆಯನ್ನು 250 ಹಾಸಿಗೆ ಸಾಮರ್ಥ್ಯದಿಂದ 450 ಹಾಸಿಗೆಗೆ ಏರಿಸಲಾಯಿತು. ಜನರು ಎಸ್ಎನ್ಆರ್ ಆಸ್ಪತ್ರೆಯನ್ನು ಧರ್ಮಾಸ್ಪತ್ರೆ ಎಂದು ಕರೆಯುತ್ತಾರೆ’ ಎಂದರು.</p>.<p>‘ಕೊರೊನಾ ಸೋಂಕಿನ ತಡೆಗೆ ಸರ್ಕಾರ ಸರ್ವ ಪ್ರಯತ್ನ ನಡೆಸಿದೆ. ಆದರೂ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ವೈದ್ಯರು ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಸೋಂಕಿನ ತಡೆಗೆ ಸಾರ್ವಜನಿಕರು ಆರೋಗ್ಯ ಇಲಾಖೆ ಜತೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಿದೆ. ಸೋಂಕಿತರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುತ್ತಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಜಿಲ್ಲೆಯ ಜನಸಂಖ್ಯೆಗೆ ಹೋಲಿಸಿದರೆ ಜಿಲ್ಲಾಸ್ಪತ್ರೆ ಸಾಕಾಗುತ್ತಿಲ್ಲ. ಸರ್ಕಾರದ ಜತೆ ಚರ್ಚಿಸಿ ಆಸ್ಪತ್ರೆಯನ್ನು ಮೇಲ್ಡರ್ಜೆಗೆ ಏರಿಸುವ ಪ್ರಯತ್ನ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚುವ ಸಂಭವವಿದ್ದು, ಸೋಂಕಿನ ನಿಯಂತ್ರಣಕ್ಕೆ ಆಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮೃತಪಟ್ಟಿಲ್ಲ: ‘ಜಿಲ್ಲಾಸ್ಪತ್ರೆಗೆ ದಾಖಲಾದ ಕೊರೊನಾ ಸೋಂಕಿತರು ಪೈಕಿ ಯಾರೊಬ್ಬರೂ ಮೃತಪಟ್ಟಿಲ್ಲ. ಜಿಲ್ಲೆಯ ಕೆಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸಿ ಸೋಂಕಿತರಿಗೆ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ’ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್.ವಿಜಯ್ಕುಮಾರ್ ವಿವರಿಸಿದರು.</p>.<p>‘ಸೋಂಕಿತರ ಚಿಕಿತ್ಸೆಗಾಗಿ ಎಸ್ಎನ್ಆರ್ ಆಸ್ಪತ್ರೆ, ಕೆಜಿಎಫ್ನ ಸಂಭ್ರಮ್ ಆಸ್ಪತ್ರೆ ಹಾಗೂ ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಹಾಸಿಗೆ ಮೀಸಲಿಡಲಾಗಿದೆ. ಜಿಲ್ಲೆಯ ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆ ಕಾಯ್ದಿರಿಸಿ, ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ನಗರಸಭೆ ಸದಸ್ಯ ರಾಕೇಶ್, ವೈದ್ಯ ನಾರಾಯಣಸ್ವಾಮಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಜಿಲ್ಲಾ ಕೇಂದ್ರದ ಎಸ್ಎನ್ಆರ್ ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.</p>.<p>ಇಲ್ಲಿ ಸೋಮವಾರ ಎಸ್ಎನ್ಆರ್ ಆಸ್ಪತ್ರೆಗೆ ಭೇಡಿ ಪರಿಶೀಲನೆ ನಡೆಸಿ ಮಾತನಾಡಿ, ‘ನಾನು ಸಚಿವನಾಗಿದ್ದಾಗ ಈ ಆಸ್ಪತ್ರೆಯನ್ನು 250 ಹಾಸಿಗೆ ಸಾಮರ್ಥ್ಯದಿಂದ 450 ಹಾಸಿಗೆಗೆ ಏರಿಸಲಾಯಿತು. ಜನರು ಎಸ್ಎನ್ಆರ್ ಆಸ್ಪತ್ರೆಯನ್ನು ಧರ್ಮಾಸ್ಪತ್ರೆ ಎಂದು ಕರೆಯುತ್ತಾರೆ’ ಎಂದರು.</p>.<p>‘ಕೊರೊನಾ ಸೋಂಕಿನ ತಡೆಗೆ ಸರ್ಕಾರ ಸರ್ವ ಪ್ರಯತ್ನ ನಡೆಸಿದೆ. ಆದರೂ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ವೈದ್ಯರು ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಸೋಂಕಿನ ತಡೆಗೆ ಸಾರ್ವಜನಿಕರು ಆರೋಗ್ಯ ಇಲಾಖೆ ಜತೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಿದೆ. ಸೋಂಕಿತರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುತ್ತಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಜಿಲ್ಲೆಯ ಜನಸಂಖ್ಯೆಗೆ ಹೋಲಿಸಿದರೆ ಜಿಲ್ಲಾಸ್ಪತ್ರೆ ಸಾಕಾಗುತ್ತಿಲ್ಲ. ಸರ್ಕಾರದ ಜತೆ ಚರ್ಚಿಸಿ ಆಸ್ಪತ್ರೆಯನ್ನು ಮೇಲ್ಡರ್ಜೆಗೆ ಏರಿಸುವ ಪ್ರಯತ್ನ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚುವ ಸಂಭವವಿದ್ದು, ಸೋಂಕಿನ ನಿಯಂತ್ರಣಕ್ಕೆ ಆಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮೃತಪಟ್ಟಿಲ್ಲ: ‘ಜಿಲ್ಲಾಸ್ಪತ್ರೆಗೆ ದಾಖಲಾದ ಕೊರೊನಾ ಸೋಂಕಿತರು ಪೈಕಿ ಯಾರೊಬ್ಬರೂ ಮೃತಪಟ್ಟಿಲ್ಲ. ಜಿಲ್ಲೆಯ ಕೆಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸಿ ಸೋಂಕಿತರಿಗೆ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ’ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್.ವಿಜಯ್ಕುಮಾರ್ ವಿವರಿಸಿದರು.</p>.<p>‘ಸೋಂಕಿತರ ಚಿಕಿತ್ಸೆಗಾಗಿ ಎಸ್ಎನ್ಆರ್ ಆಸ್ಪತ್ರೆ, ಕೆಜಿಎಫ್ನ ಸಂಭ್ರಮ್ ಆಸ್ಪತ್ರೆ ಹಾಗೂ ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಹಾಸಿಗೆ ಮೀಸಲಿಡಲಾಗಿದೆ. ಜಿಲ್ಲೆಯ ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆ ಕಾಯ್ದಿರಿಸಿ, ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ನಗರಸಭೆ ಸದಸ್ಯ ರಾಕೇಶ್, ವೈದ್ಯ ನಾರಾಯಣಸ್ವಾಮಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>