ಶ್ರೀನಿವಾಸಪುರ: ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.
ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನೂತನ ವಕೀಲರ ಸಂಘದ ಕಚೇರಿಯನ್ನು ಉದ್ಘಾಟಿಸಲಾಯಿತು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್, ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ, ಗಂಗಿರೆಡ್ಡಿ, ಖಜಾಂಜಿ ಟಿ.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಟಿ.ವೆಂಕಟೇಶ್, ಕಾರ್ಯದರ್ಶಿ ರೂಪಾ, ವಕೀಲ ಶ್ರೀನಿವಾಸಗೌಡ, ಅರ್ಚನಾ, ಮುಳೀಧರ್, ಕೆ.ವಿನಯ್ ಕುಮಾರ್, ಎಂ.ಸಿ.ಶಿವಶಂಕರ್, ಮುರಳಿ, ರಾಧಾಕೃಷ್ಣ ಇದ್ದರು.