ನಗರದ ವಾಲ್ಮೀಕಿ ಭವನದಿಂದ ಆರಂಭವಾದ ಪಲ್ಲಕ್ಕಿ ಮೆರವಣಿಗೆ ಎಂಬಿ ರಸ್ತೆ, ಎಂಜಿ ರಸ್ತೆ, ಬಸ್ ನಿಲ್ದಾಣದ ವೃತ್ತ, ಕಾಳಮ್ಮಗುಡಿ ರಸ್ತೆಯಲ್ಲಿ ಸಾಗಿ ರಂಗಮಂದಿರದವರೆಗೆ ನಡೆಯಿತು. ಕೆಎಸ್ಆರ್ಟಿಸಿ, ರೇಷ್ಮೆ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ತೋಟಗಾರಿಕೆ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪಲ್ಲಕ್ಕಿ ಮೆರವಣಿಗೆ ನಡೆಸಿದರು. ವಾಲ್ಮೀಕಿ ವೇಷಧಾರಿಗಳು ಗಮನ ಸೆಳೆದರು.