<p>ಪ್ರಜಾವಾಣಿ ವಾರ್ತೆ</p>.<p><strong>ಮಾಲೂರು</strong>: ಸಾಮಾಜಿಕ ಜಾಲತಾಣಗಳಲ್ಲಿ ಮಹನಿಯರನ್ನು ಅವಮಾನಿಸುತ್ತಿರುವ ಹಾಗೂ ಸಮುದಾಯಗಳ ನಡುವೆ ವಿಷಬೀಜ ಬಿತ್ತುತ್ತಿರುವ ‘ಗುಲಾಮರ ಅಪ್ಪ’ ಎಂಬ ಫೇಸ್ಬುಕ್ ಪೇಜನ್ನು ತಕ್ಷಣ ನಿಷೇಧಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆ ಒತ್ತಾಯಿಸಿದರು.</p>.<p>ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಶೀರಸ್ತೆದಾರ್ ಮೂಲಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಈ ವೇಳೆ ಸಂಘಟನೆಯ ಜಿಲ್ಲಾ ಸಂಚಾಲಕ ಲಕ್ಕೂರು ವೆಂಕಟೇಶ್ ಮಾತನಾಡಿ, ಗುಲಾಮರ ಅಪ್ಪ ಫೇಸ್ಬುಕ್ ಖಾತೆಯಲ್ಲಿ ನಿರಂತರವಾಗಿ ಕೆಳವರ್ಗದ ಸಮುದಾಯದವರನ್ನು ಕೀಳುಮಟ್ಟದಲ್ಲಿ ಭಾಷೆಯನ್ನು ನಿಂದಿಸಲಾಗುತ್ತಿದೆ. ಹಾಗಾಗಿ ಇದರ ಹಿಂದೆ ಇರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಎಕೆ ವೆಂಕಟೇಶ್ ಮಾತನಾಡಿ, ಇನ್ನು ಮುಂದೆ ಸಮಾಜದ ಸ್ವಾಸ್ಥ್ಯ ಕೆಡಸುವಂತಹ ಖಾತೆಗಳು ತೆರೆಯದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. </p>.<p>ಕಲ್ಕೆರೆ ಮುನಿರಾಜು, ಅಗ್ರಹಾರ ಬಾಬು, ಟೇಕಲ್ ಶಫಿ, ಮಡಿವಾಳ ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಮಾಲೂರು</strong>: ಸಾಮಾಜಿಕ ಜಾಲತಾಣಗಳಲ್ಲಿ ಮಹನಿಯರನ್ನು ಅವಮಾನಿಸುತ್ತಿರುವ ಹಾಗೂ ಸಮುದಾಯಗಳ ನಡುವೆ ವಿಷಬೀಜ ಬಿತ್ತುತ್ತಿರುವ ‘ಗುಲಾಮರ ಅಪ್ಪ’ ಎಂಬ ಫೇಸ್ಬುಕ್ ಪೇಜನ್ನು ತಕ್ಷಣ ನಿಷೇಧಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆ ಒತ್ತಾಯಿಸಿದರು.</p>.<p>ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಶೀರಸ್ತೆದಾರ್ ಮೂಲಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಈ ವೇಳೆ ಸಂಘಟನೆಯ ಜಿಲ್ಲಾ ಸಂಚಾಲಕ ಲಕ್ಕೂರು ವೆಂಕಟೇಶ್ ಮಾತನಾಡಿ, ಗುಲಾಮರ ಅಪ್ಪ ಫೇಸ್ಬುಕ್ ಖಾತೆಯಲ್ಲಿ ನಿರಂತರವಾಗಿ ಕೆಳವರ್ಗದ ಸಮುದಾಯದವರನ್ನು ಕೀಳುಮಟ್ಟದಲ್ಲಿ ಭಾಷೆಯನ್ನು ನಿಂದಿಸಲಾಗುತ್ತಿದೆ. ಹಾಗಾಗಿ ಇದರ ಹಿಂದೆ ಇರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಎಕೆ ವೆಂಕಟೇಶ್ ಮಾತನಾಡಿ, ಇನ್ನು ಮುಂದೆ ಸಮಾಜದ ಸ್ವಾಸ್ಥ್ಯ ಕೆಡಸುವಂತಹ ಖಾತೆಗಳು ತೆರೆಯದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. </p>.<p>ಕಲ್ಕೆರೆ ಮುನಿರಾಜು, ಅಗ್ರಹಾರ ಬಾಬು, ಟೇಕಲ್ ಶಫಿ, ಮಡಿವಾಳ ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>