<p><strong>ಕೋಲಾರ:</strong> ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ವರ್ಗಾ ಆಟ್ಯಾಚ್ಮೆಂಟ್ ಕಾರ್ಖಾನೆಯಲ್ಲಿ ಸುಳ್ಳು ದಾಖಲೆ ಮೂಲಕ ನಷ್ಟ ತೋರಿಸಿ ಕಾರ್ಖಾನೆ ಮುಚ್ವಲು ಹೊರಟಿದ್ದಾರೆ. ಕಾರ್ಖಾನೆ ಮುಚ್ಚದಂತೆ ಕೂಡಲೇ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕ್ರಮ ವಹಿಸಬೇಕು’ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಎಚ್.ಎನ್.ಗೋಪಾಲಗೌಡ ಒತ್ತಾಯಿಸಿದರು</p>.<p>ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸುಮಾರು 20 ವರ್ಷದಿಂದ ಕಾರ್ಮಿಕರಾಗಿ ವರ್ಗಾ ಕಾರ್ಖಾನೆಯಲ್ಲಿ ಕಾರ್ಮಿಕರು ದುಡಿಯುತ್ತಿದ್ದಾರೆ. ಆದರೆ, ಮಾಲೀಕ ವರ್ಗವು ನಷ್ಟದ ನೆಪದಲ್ಲಿ ಏಕಾಏಕಿ ಕೈಗಾರಿಕೆ ಮುಚ್ಚಲು ಹೊರಟಿದೆ. 81 ಕಾಯಂ ಕಾರ್ಮಿಕರನ್ನು ಕೆಲಸದಿಂದ ಹೊರಹಾಕಲು ಮುಂದಾಗಿದ್ದು, ಇದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕಾರ್ಖಾನೆ ಮುಚ್ಚುವ ಆದೇಶವನ್ನು ವಾಪಸು ಪಡೆದು ಕಾರ್ಮಿಕರ ಹಿತ ಕಾಪಾಡಲು ಸಂಬಂಧಿಸಿದವರು ಮಾಲೀಕರನ್ನು ಒತ್ತಾಯಿಸಬೇಕಿದೆ’ ಎಂದರು.</p>.<p>‘ಈ ಕೈಗಾರಿಕೆಯಲ್ಲಿ ಬುಲ್ಡೋಜರ್ಗೆ ಬೇಕಾಗುವ ವಿವಿಧ ಸಾಮಗ್ರಿಗಳನ್ನು ತಯಾರಿಸಿ ವಿದೇಶಕ್ಕೆ ರವಾನಿಸಲಾಗುತ್ತದೆ. ಇದರಿಂದಾಗಿ ಲಾಭದಾಯಕವಾಗಿ ಕಂಪನಿ ನಡೆಯುತ್ತಿದೆ. ಕಂಪನಿಯನ್ನು ಮೂರು ಹೆಸರಿನಲ್ಲಿ ನಾಮಕಾರಣ ಮಾಡಿಕೊಂಡು ಕಾಯಂ ಕಾರ್ಮಿಕರನ್ನು ಕೆಲಸಕ್ಕೆ ರಾಜೀನಾಮೆ ಕೊಡಿಸಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಹುನ್ನಾರವಿದೆ. ಈ ಮೂರು ಕೈಗಾರಿಕೆಗಳ ಮಾಲೀಕರು ಒಂದೇ ಕುಟುಂಬದವರು, ಪಾಲುದಾರಿಕೆಯಲ್ಲಿ ನಡೆಯುತ್ತಿದೆ’ ಎಂದು ಆರೋಪಿಸಿದರು</p>.<p>‘ಕಂಪನಿಯನ್ನು ಮುಚ್ಚದಂತೆ ಕ್ರಮ ವಹಿಸಿ ಕಾರ್ಮಿಕರ ರಕ್ಷಣೆ ಮಾಡಲು ಈಗಾಗಲೇ ಹೋರಾಟ ನಡೆಸಲಾಗಿದೆ. ಕೂಡಲೇ ಜಿಲ್ಲಾಧಿಕಾರಿಯು ಮಾಲೀಕ ವರ್ಗವನ್ನು ಕರೆಸಿ ವರ್ಗಾ ಕಾರ್ಖಾನೆಯಲ್ಲಿ ದುಡಿಯುತ್ತಿರುವ ಕಾಯಂ ಕಾರ್ಮಿಕರಿಗೆ ಕೈಗಾರಿಕೆಯಲ್ಲಿ ಕೆಲಸದಲ್ಲಿ ಮುಂದುವರಿಸಲು ಕ್ರಮ ವಹಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಕಾರ್ಖಾನೆಯ ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಪ್ರಭಾಕರ್, ಶ್ರೀಧರ್ ರಾವ್, ಅಂಜನಪ್ಪ, ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ವರ್ಗಾ ಆಟ್ಯಾಚ್ಮೆಂಟ್ ಕಾರ್ಖಾನೆಯಲ್ಲಿ ಸುಳ್ಳು ದಾಖಲೆ ಮೂಲಕ ನಷ್ಟ ತೋರಿಸಿ ಕಾರ್ಖಾನೆ ಮುಚ್ವಲು ಹೊರಟಿದ್ದಾರೆ. ಕಾರ್ಖಾನೆ ಮುಚ್ಚದಂತೆ ಕೂಡಲೇ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕ್ರಮ ವಹಿಸಬೇಕು’ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಎಚ್.ಎನ್.ಗೋಪಾಲಗೌಡ ಒತ್ತಾಯಿಸಿದರು</p>.<p>ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸುಮಾರು 20 ವರ್ಷದಿಂದ ಕಾರ್ಮಿಕರಾಗಿ ವರ್ಗಾ ಕಾರ್ಖಾನೆಯಲ್ಲಿ ಕಾರ್ಮಿಕರು ದುಡಿಯುತ್ತಿದ್ದಾರೆ. ಆದರೆ, ಮಾಲೀಕ ವರ್ಗವು ನಷ್ಟದ ನೆಪದಲ್ಲಿ ಏಕಾಏಕಿ ಕೈಗಾರಿಕೆ ಮುಚ್ಚಲು ಹೊರಟಿದೆ. 81 ಕಾಯಂ ಕಾರ್ಮಿಕರನ್ನು ಕೆಲಸದಿಂದ ಹೊರಹಾಕಲು ಮುಂದಾಗಿದ್ದು, ಇದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕಾರ್ಖಾನೆ ಮುಚ್ಚುವ ಆದೇಶವನ್ನು ವಾಪಸು ಪಡೆದು ಕಾರ್ಮಿಕರ ಹಿತ ಕಾಪಾಡಲು ಸಂಬಂಧಿಸಿದವರು ಮಾಲೀಕರನ್ನು ಒತ್ತಾಯಿಸಬೇಕಿದೆ’ ಎಂದರು.</p>.<p>‘ಈ ಕೈಗಾರಿಕೆಯಲ್ಲಿ ಬುಲ್ಡೋಜರ್ಗೆ ಬೇಕಾಗುವ ವಿವಿಧ ಸಾಮಗ್ರಿಗಳನ್ನು ತಯಾರಿಸಿ ವಿದೇಶಕ್ಕೆ ರವಾನಿಸಲಾಗುತ್ತದೆ. ಇದರಿಂದಾಗಿ ಲಾಭದಾಯಕವಾಗಿ ಕಂಪನಿ ನಡೆಯುತ್ತಿದೆ. ಕಂಪನಿಯನ್ನು ಮೂರು ಹೆಸರಿನಲ್ಲಿ ನಾಮಕಾರಣ ಮಾಡಿಕೊಂಡು ಕಾಯಂ ಕಾರ್ಮಿಕರನ್ನು ಕೆಲಸಕ್ಕೆ ರಾಜೀನಾಮೆ ಕೊಡಿಸಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಹುನ್ನಾರವಿದೆ. ಈ ಮೂರು ಕೈಗಾರಿಕೆಗಳ ಮಾಲೀಕರು ಒಂದೇ ಕುಟುಂಬದವರು, ಪಾಲುದಾರಿಕೆಯಲ್ಲಿ ನಡೆಯುತ್ತಿದೆ’ ಎಂದು ಆರೋಪಿಸಿದರು</p>.<p>‘ಕಂಪನಿಯನ್ನು ಮುಚ್ಚದಂತೆ ಕ್ರಮ ವಹಿಸಿ ಕಾರ್ಮಿಕರ ರಕ್ಷಣೆ ಮಾಡಲು ಈಗಾಗಲೇ ಹೋರಾಟ ನಡೆಸಲಾಗಿದೆ. ಕೂಡಲೇ ಜಿಲ್ಲಾಧಿಕಾರಿಯು ಮಾಲೀಕ ವರ್ಗವನ್ನು ಕರೆಸಿ ವರ್ಗಾ ಕಾರ್ಖಾನೆಯಲ್ಲಿ ದುಡಿಯುತ್ತಿರುವ ಕಾಯಂ ಕಾರ್ಮಿಕರಿಗೆ ಕೈಗಾರಿಕೆಯಲ್ಲಿ ಕೆಲಸದಲ್ಲಿ ಮುಂದುವರಿಸಲು ಕ್ರಮ ವಹಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಕಾರ್ಖಾನೆಯ ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಪ್ರಭಾಕರ್, ಶ್ರೀಧರ್ ರಾವ್, ಅಂಜನಪ್ಪ, ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>