<p><strong>ಮುಳಬಾಗಿಲು</strong>: ತಾಲ್ಲೂಕಿನ ಕಿರುಮಣಿ ಗ್ರಾಮದ ಬಳಿ ಪತಿಯನ್ನು ಪತ್ನಿ ಕತ್ತುಹಿಸುಕಿ ಕೊಂದು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. </p>.<p>ರಾಜು ಸೊರೇನ್ (24) ಮೃತ ವ್ಯಕ್ತಿ ಮೂಲತಃ ಛತ್ತೀಸಗಢ ಮೂಲದ ರಾಜು ಸೊರೇನ್ ಹಾಗೂ ಪತ್ನಿ ಚಾಮಲಿ ಸೊರೇನ್ ತಾಲ್ಲೂಕಿನ ಕಿರುಮಣಿ ಗ್ರಾಮದ ಹೊರ ವಲಯದಲ್ಲಿರುವ ಕಾಡೇನಹಳ್ಳಿ ಗ್ರಾಮದಲ್ಲಿರುವ ಕೋಳಿ ಫಾರಂನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಆದರೆ, ಈ ದಂಪತಿಗೆ ಮಕ್ಕಳಾಗಿರಲಿಲ್ಲ. ಸಾಂಸಾರಿಕ ಜಗಳದ ಕಾರಣದಿಂದಾಗಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. </p>.<p>ಶನಿವಾರ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು. ನಂತರ ರಾತ್ರಿ ಎಂದಿನಂತೆ ಮಲಗಿದ್ದರು. ಆದರೆ, ರಾತ್ರಿ ಎದ್ದ ಚಾಮಲಿ, ಪತಿ ರಾಜು ಸೊರೇನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಡಿವೈಎಸ್ಪಿ ಡಿ.ಸಿ.ನಂದಕುಮಾರ್, ಸರ್ಕಲ್ ಇನ್ಸ್ಪೆಕ್ಟರ್ ಸತೀಶ್, ನಂಗಲಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಎಲ್.ಮಮತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ತಾಲ್ಲೂಕಿನ ಕಿರುಮಣಿ ಗ್ರಾಮದ ಬಳಿ ಪತಿಯನ್ನು ಪತ್ನಿ ಕತ್ತುಹಿಸುಕಿ ಕೊಂದು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. </p>.<p>ರಾಜು ಸೊರೇನ್ (24) ಮೃತ ವ್ಯಕ್ತಿ ಮೂಲತಃ ಛತ್ತೀಸಗಢ ಮೂಲದ ರಾಜು ಸೊರೇನ್ ಹಾಗೂ ಪತ್ನಿ ಚಾಮಲಿ ಸೊರೇನ್ ತಾಲ್ಲೂಕಿನ ಕಿರುಮಣಿ ಗ್ರಾಮದ ಹೊರ ವಲಯದಲ್ಲಿರುವ ಕಾಡೇನಹಳ್ಳಿ ಗ್ರಾಮದಲ್ಲಿರುವ ಕೋಳಿ ಫಾರಂನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಆದರೆ, ಈ ದಂಪತಿಗೆ ಮಕ್ಕಳಾಗಿರಲಿಲ್ಲ. ಸಾಂಸಾರಿಕ ಜಗಳದ ಕಾರಣದಿಂದಾಗಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. </p>.<p>ಶನಿವಾರ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು. ನಂತರ ರಾತ್ರಿ ಎಂದಿನಂತೆ ಮಲಗಿದ್ದರು. ಆದರೆ, ರಾತ್ರಿ ಎದ್ದ ಚಾಮಲಿ, ಪತಿ ರಾಜು ಸೊರೇನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಡಿವೈಎಸ್ಪಿ ಡಿ.ಸಿ.ನಂದಕುಮಾರ್, ಸರ್ಕಲ್ ಇನ್ಸ್ಪೆಕ್ಟರ್ ಸತೀಶ್, ನಂಗಲಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಎಲ್.ಮಮತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>