‘ಈ ಸಾಧನೆಯನ್ನು ಪೋಷಕರಿಗೆ ಅರ್ಪಿಸುತ್ತೇನೆ. ಏಕೆಂದರೆ ಅವರು ನನ್ನಲ್ಲಿ ಸ್ಫೂರ್ತಿ ತುಂಬಿದರು. ಯಶಸ್ಸು ಸಾಧಿಸಬಹುದು ಎಂದು ಹೇಳಿ ಹುರಿದುಂಬಿಸಿದರು. ಪರೀಕ್ಷೆ ಸಮಯದಲ್ಲಿ ಮಾತ್ರ ನಾನು ಹೆಚ್ಚು ಓದುತ್ತಿದ್ದೆ. ಸಾಮಾನ್ಯ ಜ್ಞಾನ ವಿಷಯಕ್ಕೆ ಆದ್ಯತೆ ನೀಡಿದ್ದೆ. ಆದರೆ, ನನಗೆ ಈ ಸಾಧನೆ ಪೂರ್ಣವಾಗಿ ತೃಪ್ತಿ ತಂದಿಲ್ಲ. ಇನ್ನೂ ಹೆಚ್ಚಿನ ರ್ಯಾಂಕ್ ಪಡೆಯಲು ಮತ್ತೊಮ್ಮೆ ಪರೀಕ್ಷೆ ಎದುರಿಸುತ್ತೇನೆ’ ಎಂದು ಪೃಥ್ವಿಕ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.