<p><strong>ಬಂಗಾರಪೇಟೆ:</strong> ಕಾಳ್ಗಿಚ್ಚು ತಡೆ ಹಾಗೂ ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸುವಂತೆ ಒತ್ತಾಯಿಸಿ ರೈತ ಸಂಘದ ವತಿಯಿಂದ ವಲಯ ಅರಣ್ಯಾಧಿಕಾರಿ ಶ್ರೀ ಲಕ್ಷ್ಮಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಈ ವೇಳೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಗ್ರಾಮೀಣ ಮತ್ತು ಅರಣ್ಯ ಅಂಚಿನ ಪ್ರದೇಶಗಳಲ್ಲಿ ಕರಪತ್ರ ವಿತರಣೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಕಾಳ್ಗಿಚ್ಚಿನಿಂದಾಗುವ ಪರಿಸರ ನಾಶ, ಪ್ರಾಣಿ-ಪಕ್ಷಿಗಳ ಸಾವು ನೋವಿನ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕೆಂದು ಒತ್ತಾಯಿಸಿದರು.</p>.<p>ಅರಣ್ಯದ ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಕಣ್ಗಾವಲಿಗಾಗಿ ಗುಣಮಟ್ಟದ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಕಾಡಿನ ಹಾದಿಯಲ್ಲಿ ಸಂಚರಿಸುವವರು ಸಿಗರೇಟ್, ಬೆಂಕಿಪಟ್ಟಿಗೆ ಅಥವಾ ಲೈಟರ್ ಉರಿಸಿ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರೈತರು ತಮ್ಮ ಜಮೀನಿನ ಕೃಷಿ ತ್ಯಾಜ್ಯವನ್ನು ಸುಡುವಾಗ ಅದು ಕಾಡಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮಾರ್ಗದರ್ಶನ ನೀಡಬೇಕು. ಕಾಳ್ಗಿಚ್ಚು ಕಾಣಿಸಿಕೊಂಡಾಗ ತಕ್ಷಣ ಮಾಹಿತಿ ನೀಡಲು ಸಹಾಯವಾಣಿಯನ್ನು ತೆರೆಯಬೇಕು. ಮಾಹಿತಿ ನೀಡಿದ ತಕ್ಷಣ ಪ್ರತಿಕ್ರಿಯೆಗೆ ತಂಡ ಸಜ್ಜಾಗಿರಬೇಕು ಎಂದು ಆಗ್ರಹಿಸಿದರು.</p>.<p>ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್ ಮಾತನಾಡಿ, ಲಕ್ಷಾಂತರ ಸಾಲ ಮಾಡಿ ಬೆಳೆದ ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದ್ದು, ರೈತರ ಬದುಕು ಬೀದಿಪಾಲಾಗುತ್ತಿದೆ. ಹಾಗಾಗಿ ರೈತರಿಗೆ ಕನಿಷ್ಠ ₹5 ಲಕ್ಷ ಪರಿಹಾರ ನೀಡಬೇಕು. ಕಾಡು ಪ್ರಾಣಿಗಳನ್ನು ತಡೆಯಲು ಸೋಲಾರ್ ಬೇಲಿ ಅಳವಡಿಸಿ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು.</p>.<p>ಮನವಿ ಸ್ವೀಕರಿಸಿದ ವಲಯ ಅರಣ್ಯಾಧಿಕಾರಿ ಶ್ರೀ ಲಕ್ಷ್ಮಿ ಮಾತನಾಡಿ, ಬೇಸಿಗೆಯಲ್ಲಿ ಕಾಳ್ಗಿಚ್ಚಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಜೊತೆಗೆ ವನ್ಯಜೀವಿಗಳಿಗೆ ಆಹಾರ-ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಗೋವಿಂದಪ್ಪ, ಲಕ್ಷ್ಮಣ್, ಸಂತೋಷ್, ಗಿರೀಶ್, ತಿಮ್ಮಣ್ಣ, ಶೈಲಜಾ, ರತ್ನಮ್ಮ, ನಯನ, ಪವಿತ್ರ, ವೆಂಕಟಮ್ಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಕಾಳ್ಗಿಚ್ಚು ತಡೆ ಹಾಗೂ ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸುವಂತೆ ಒತ್ತಾಯಿಸಿ ರೈತ ಸಂಘದ ವತಿಯಿಂದ ವಲಯ ಅರಣ್ಯಾಧಿಕಾರಿ ಶ್ರೀ ಲಕ್ಷ್ಮಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಈ ವೇಳೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಗ್ರಾಮೀಣ ಮತ್ತು ಅರಣ್ಯ ಅಂಚಿನ ಪ್ರದೇಶಗಳಲ್ಲಿ ಕರಪತ್ರ ವಿತರಣೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಕಾಳ್ಗಿಚ್ಚಿನಿಂದಾಗುವ ಪರಿಸರ ನಾಶ, ಪ್ರಾಣಿ-ಪಕ್ಷಿಗಳ ಸಾವು ನೋವಿನ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕೆಂದು ಒತ್ತಾಯಿಸಿದರು.</p>.<p>ಅರಣ್ಯದ ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಕಣ್ಗಾವಲಿಗಾಗಿ ಗುಣಮಟ್ಟದ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಕಾಡಿನ ಹಾದಿಯಲ್ಲಿ ಸಂಚರಿಸುವವರು ಸಿಗರೇಟ್, ಬೆಂಕಿಪಟ್ಟಿಗೆ ಅಥವಾ ಲೈಟರ್ ಉರಿಸಿ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರೈತರು ತಮ್ಮ ಜಮೀನಿನ ಕೃಷಿ ತ್ಯಾಜ್ಯವನ್ನು ಸುಡುವಾಗ ಅದು ಕಾಡಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮಾರ್ಗದರ್ಶನ ನೀಡಬೇಕು. ಕಾಳ್ಗಿಚ್ಚು ಕಾಣಿಸಿಕೊಂಡಾಗ ತಕ್ಷಣ ಮಾಹಿತಿ ನೀಡಲು ಸಹಾಯವಾಣಿಯನ್ನು ತೆರೆಯಬೇಕು. ಮಾಹಿತಿ ನೀಡಿದ ತಕ್ಷಣ ಪ್ರತಿಕ್ರಿಯೆಗೆ ತಂಡ ಸಜ್ಜಾಗಿರಬೇಕು ಎಂದು ಆಗ್ರಹಿಸಿದರು.</p>.<p>ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್ ಮಾತನಾಡಿ, ಲಕ್ಷಾಂತರ ಸಾಲ ಮಾಡಿ ಬೆಳೆದ ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದ್ದು, ರೈತರ ಬದುಕು ಬೀದಿಪಾಲಾಗುತ್ತಿದೆ. ಹಾಗಾಗಿ ರೈತರಿಗೆ ಕನಿಷ್ಠ ₹5 ಲಕ್ಷ ಪರಿಹಾರ ನೀಡಬೇಕು. ಕಾಡು ಪ್ರಾಣಿಗಳನ್ನು ತಡೆಯಲು ಸೋಲಾರ್ ಬೇಲಿ ಅಳವಡಿಸಿ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು.</p>.<p>ಮನವಿ ಸ್ವೀಕರಿಸಿದ ವಲಯ ಅರಣ್ಯಾಧಿಕಾರಿ ಶ್ರೀ ಲಕ್ಷ್ಮಿ ಮಾತನಾಡಿ, ಬೇಸಿಗೆಯಲ್ಲಿ ಕಾಳ್ಗಿಚ್ಚಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಜೊತೆಗೆ ವನ್ಯಜೀವಿಗಳಿಗೆ ಆಹಾರ-ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಗೋವಿಂದಪ್ಪ, ಲಕ್ಷ್ಮಣ್, ಸಂತೋಷ್, ಗಿರೀಶ್, ತಿಮ್ಮಣ್ಣ, ಶೈಲಜಾ, ರತ್ನಮ್ಮ, ನಯನ, ಪವಿತ್ರ, ವೆಂಕಟಮ್ಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>