<p><strong>ಮುಳಬಾಗಿಲು</strong>: ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ-75ರ ಅವ್ಯವಸ್ಥೆ ಸರಿಪಡಿಸುವವರೆಗೂ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಶುಕ್ರವಾರ ರೈತ ಸಂಘದಿಂದ ಲ್ಯಾಂಕೋ ಸಿಬ್ಬಂದಿಗೆ ಮನವಿ ನೀಡಿದರು.</p>.<p>ಹೆದ್ದಾರಿ ಹದಗೆಟ್ಟಿರುವುದರಿಂದ ಇಲ್ಲಿನ ಸಂಚಾರ ಸಂಚಾಕಾರ ತರುತ್ತಿದೆ. ಇಲ್ಲಿ ವಾಹನ ಸವಾರರು ಅಪಘಾತವಾಗಿ ಕೈಕಾಲು ಮುರಿದುಕೊಂಡಿದ್ದಾರೆ. ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಹೆದ್ದಾರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ವಿಫಲವಾಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆರೋಪಿಸಿದರು.</p>.<p>ಒಂದು ವಾರದೊಳಗೆ ಸಮಸ್ಯೆಯನ್ನು ಬಗೆಹರಿಸದಿದ್ದರೆ ಸೆ.17ರಂದು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಬೂತ್ಗಳಲ್ಲಿ ಕೋಳಿ ಕಟ್ಟಿಹಾಕುವ ಮೂಲಕ ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.</p>.<p>ರಾಮಸಂದ್ರ ಗಡಿಭಾಗದಿಂದ ಮುಳಬಾಗಿಲು ಬೈಪಾಸ್ ವರೆಗಿನ ಹೆದ್ದಾರಿ ಮಳೆ ಬಂದರೆ ಕೆರೆ ಕುಂಟೆಗಳಾಗಿ ಮಾರ್ಪಡುತ್ತದೆ. ಬೇಸಿಗೆಯಲ್ಲಿ ಗುಂಡಿಯಿಂದ ಕೂಡಿರುವ ರಸ್ತೆಯಲ್ಲಿರುವ ಸಂಚರಿಸುವುದೇ ವಾಹನ ಸವಾರರಿಗೆ ಸವಾಲಾಗಿದೆ. ಹೀಗಾಗಿ ಕೂಡಲೇ ಸಮಸ್ಯೆ ಬಗೆಹರಿಸಲು ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.</p>.<p>ಬಂಗವಾದಿ ನಾಗರಾಜಗೌಡ, ಮರಗಲ್ ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ಯಲುವಳ್ಳಿಪ್ರಬಾಕರ್, ಪಾರುಕ್ಪಾಷ್, ರಾಜೇಶ್, ವಿಜಯ್ಪಾಲ್, ಬಂಗಾರಿ ಮಂಜು, ಸುಪ್ರಿಂ ಚಲ, ಶಶಿ, ಮುನಿರಾಜು, ಗಿರೀಶ್, ತಿಮ್ಮಣ್ಣ, ಗೌರಮ್ಮ, ಶೈಲಜ, ರತ್ನಮ್ಮ, ಶೃತಿ, ವೆಂಕಟಮ್ಮ, ರತ್ನಮ್ಮ, ಮುನಿರತ್ನಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ-75ರ ಅವ್ಯವಸ್ಥೆ ಸರಿಪಡಿಸುವವರೆಗೂ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಶುಕ್ರವಾರ ರೈತ ಸಂಘದಿಂದ ಲ್ಯಾಂಕೋ ಸಿಬ್ಬಂದಿಗೆ ಮನವಿ ನೀಡಿದರು.</p>.<p>ಹೆದ್ದಾರಿ ಹದಗೆಟ್ಟಿರುವುದರಿಂದ ಇಲ್ಲಿನ ಸಂಚಾರ ಸಂಚಾಕಾರ ತರುತ್ತಿದೆ. ಇಲ್ಲಿ ವಾಹನ ಸವಾರರು ಅಪಘಾತವಾಗಿ ಕೈಕಾಲು ಮುರಿದುಕೊಂಡಿದ್ದಾರೆ. ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಹೆದ್ದಾರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ವಿಫಲವಾಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆರೋಪಿಸಿದರು.</p>.<p>ಒಂದು ವಾರದೊಳಗೆ ಸಮಸ್ಯೆಯನ್ನು ಬಗೆಹರಿಸದಿದ್ದರೆ ಸೆ.17ರಂದು ಹೆದ್ದಾರಿಯಲ್ಲಿನ ಎಲ್ಲಾ ಟೋಲ್ ಬೂತ್ಗಳಲ್ಲಿ ಕೋಳಿ ಕಟ್ಟಿಹಾಕುವ ಮೂಲಕ ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.</p>.<p>ರಾಮಸಂದ್ರ ಗಡಿಭಾಗದಿಂದ ಮುಳಬಾಗಿಲು ಬೈಪಾಸ್ ವರೆಗಿನ ಹೆದ್ದಾರಿ ಮಳೆ ಬಂದರೆ ಕೆರೆ ಕುಂಟೆಗಳಾಗಿ ಮಾರ್ಪಡುತ್ತದೆ. ಬೇಸಿಗೆಯಲ್ಲಿ ಗುಂಡಿಯಿಂದ ಕೂಡಿರುವ ರಸ್ತೆಯಲ್ಲಿರುವ ಸಂಚರಿಸುವುದೇ ವಾಹನ ಸವಾರರಿಗೆ ಸವಾಲಾಗಿದೆ. ಹೀಗಾಗಿ ಕೂಡಲೇ ಸಮಸ್ಯೆ ಬಗೆಹರಿಸಲು ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.</p>.<p>ಬಂಗವಾದಿ ನಾಗರಾಜಗೌಡ, ಮರಗಲ್ ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ಯಲುವಳ್ಳಿಪ್ರಬಾಕರ್, ಪಾರುಕ್ಪಾಷ್, ರಾಜೇಶ್, ವಿಜಯ್ಪಾಲ್, ಬಂಗಾರಿ ಮಂಜು, ಸುಪ್ರಿಂ ಚಲ, ಶಶಿ, ಮುನಿರಾಜು, ಗಿರೀಶ್, ತಿಮ್ಮಣ್ಣ, ಗೌರಮ್ಮ, ಶೈಲಜ, ರತ್ನಮ್ಮ, ಶೃತಿ, ವೆಂಕಟಮ್ಮ, ರತ್ನಮ್ಮ, ಮುನಿರತ್ನಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>