<p><strong>ಕೋಲಾರ: </strong>‘ಮಹಿಳೆಯರು ಕುಟುಂಬ ನಿರ್ವಹಣೆಗೆ ಮಾತ್ರ ಸೀಮಿತವಾಗದೆ, ಆರ್ಥಿಕವಾಗಿ ಸಬಲರಾಗಬೇಕು’ ಎಂದು ಎಸ್ಡಿಸಿ ವಿದ್ಯಾಸಂಸ್ಥೆಯ ಅಧ್ಯಕ್ಷೆ ಉಷಾ ಗಂಗಾಧರ್ ಸಲಹೆ ನೀಡಿದರು.</p>.<p>ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಪ್ರಾದೇಶಿಕ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದಾರೆ. ಗ್ರಾಮೀಣ ಪ್ರದೇಶದ ಮಹಿಳೆಯರು ಕೀಳರಿಮೆ ಬಿಟ್ಟು ಎಲ್ಲ ಕ್ಷೇತ್ರಗಳಲ್ಲೂ ಬೆಳೆಯಬೇಕು’ ಎಂದು ಹೇಳಿದರು.</p>.<p>‘ಹೆಣ್ಣು ಸಮಾಜದಲ್ಲಿ ಗುರುತಿಸಿಕೊಳ್ಳಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಮಹಿಳೆಯರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು. ಸಮಾಜವು ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು’ ಎಂದರು.</p>.<p>ವಿಜ್ಞಾನ ಪರಿಷತ್ ರಾಜ್ಯ ಘಟಕದ ಕಾರ್ಯದರ್ಶಿ ಮಂಜುಳಾ ಭೀಮರಾವ್ ಮಾತನಾಡಿ, ‘ಹೆಣ್ಣು ಮಕ್ಕಳು ವಿದ್ಯಾವಂತರಾದರೆ , ಲಿಂಗತಾರತಮ್ಯ ನಿವಾರಣೆ ಸಾಧ್ಯ’ ಎಂದು ತಿಳಿಸಿದರು.</p>.<p>‘ಪ್ರತಿ ಕ್ಷೇತ್ರದಲ್ಲೂ ಸಾಧಕ ಮಹಿಳೆಯರು ಇದ್ದಾರೆ, ಅವರನ್ನು ಸ್ಪೂರ್ತಿಯಾಗಿಸಿಕೊಂಡು ಗುರಿ ಸಾಧನೆಗೆ ನೀವು ಮುಂದಾಗಬೇಕು. ಬ್ಯಾಂಕಿನಲ್ಲಿ ಪಡೆದುಕೊಂಡ ಸಾಲವನ್ನು ಸದುದ್ದೇಶಕ್ಕೆ ಬಳಕೆ ಮಾಡಿಕೊಂಡರೆ ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗುತ್ತದೆ, ಜತೆಗೆ ಸಾಲ ಮರುಪಾವತಿ ಮಾಡಬಹುದು’ ಎಂದು ಹೇಳಿದರು.</p>.<p>ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ವಿ.ನಾಗರಾಜ್ ಮಾತನಾಡಿ, ‘ಗ್ರಾಮೀಣ ಭಾಗದ ಮಹಿಳೆಯರ ಸಬಲಿಕರಣಕ್ಕೆ ಬ್ಯಾಂಕ್ ಒತ್ತು ನೀಡಿದ್ದು, ದೊರೆಯುವ ಸೌಕರ್ಯಗಳ ಪ್ರಯೋಜನೆ ಪಡೆದುಕೊಳ್ಳಲು ಮುಂದಾಗಬೇಕು’ ಎಂದು ಕೋರಿದರು.</p>.<p>‘ಬ್ಯಾಂಕ್ಗಳು ಆರ್ಥಿಕ ಲಾಭಗಳಿಸಲು ಮಹಿಳೆಯರ ಪಾತ್ರವಹಿಸಿದ್ದಾರೆ. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಲು ಅರ್ಹರಿಗೆ ಸಾಲ ವಿವರಿಸಲಾಗುತ್ತಿದ್ದು, ಆದಾಯೋತ್ಪನ್ನ ಚಟುವಟಿಕೆ ಕೈಗೊಂಡು ಇತರರಿಗೂ ಉದ್ಯೋಗ ಕಲ್ಪಿಸಬೇಕು’ ಎಂದು ಸಲಹೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳಿಗೆ ಸಾಲ ಹಾಗೂ ಜಂಟಿ ಹೊಣೆಗಾರಿಕೆ ಸಾಲ ವಿತರಿಸಲಾಯಿತು. ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದ ಮಹಿಳೆಯನ್ನು ಅಭಿನಂದಿಸಲಾಯಿತು.</p>.<p>ಹಿರಿಯ ವ್ಯಸ್ಥಾಪಕ ಸುರೇಶ್, ವ್ಯವಸ್ಥಾಪಕ ಶ್ರೀನಿವಾಸಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಮಹಿಳೆಯರು ಕುಟುಂಬ ನಿರ್ವಹಣೆಗೆ ಮಾತ್ರ ಸೀಮಿತವಾಗದೆ, ಆರ್ಥಿಕವಾಗಿ ಸಬಲರಾಗಬೇಕು’ ಎಂದು ಎಸ್ಡಿಸಿ ವಿದ್ಯಾಸಂಸ್ಥೆಯ ಅಧ್ಯಕ್ಷೆ ಉಷಾ ಗಂಗಾಧರ್ ಸಲಹೆ ನೀಡಿದರು.</p>.<p>ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಪ್ರಾದೇಶಿಕ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದಾರೆ. ಗ್ರಾಮೀಣ ಪ್ರದೇಶದ ಮಹಿಳೆಯರು ಕೀಳರಿಮೆ ಬಿಟ್ಟು ಎಲ್ಲ ಕ್ಷೇತ್ರಗಳಲ್ಲೂ ಬೆಳೆಯಬೇಕು’ ಎಂದು ಹೇಳಿದರು.</p>.<p>‘ಹೆಣ್ಣು ಸಮಾಜದಲ್ಲಿ ಗುರುತಿಸಿಕೊಳ್ಳಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಮಹಿಳೆಯರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು. ಸಮಾಜವು ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು’ ಎಂದರು.</p>.<p>ವಿಜ್ಞಾನ ಪರಿಷತ್ ರಾಜ್ಯ ಘಟಕದ ಕಾರ್ಯದರ್ಶಿ ಮಂಜುಳಾ ಭೀಮರಾವ್ ಮಾತನಾಡಿ, ‘ಹೆಣ್ಣು ಮಕ್ಕಳು ವಿದ್ಯಾವಂತರಾದರೆ , ಲಿಂಗತಾರತಮ್ಯ ನಿವಾರಣೆ ಸಾಧ್ಯ’ ಎಂದು ತಿಳಿಸಿದರು.</p>.<p>‘ಪ್ರತಿ ಕ್ಷೇತ್ರದಲ್ಲೂ ಸಾಧಕ ಮಹಿಳೆಯರು ಇದ್ದಾರೆ, ಅವರನ್ನು ಸ್ಪೂರ್ತಿಯಾಗಿಸಿಕೊಂಡು ಗುರಿ ಸಾಧನೆಗೆ ನೀವು ಮುಂದಾಗಬೇಕು. ಬ್ಯಾಂಕಿನಲ್ಲಿ ಪಡೆದುಕೊಂಡ ಸಾಲವನ್ನು ಸದುದ್ದೇಶಕ್ಕೆ ಬಳಕೆ ಮಾಡಿಕೊಂಡರೆ ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗುತ್ತದೆ, ಜತೆಗೆ ಸಾಲ ಮರುಪಾವತಿ ಮಾಡಬಹುದು’ ಎಂದು ಹೇಳಿದರು.</p>.<p>ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ವಿ.ನಾಗರಾಜ್ ಮಾತನಾಡಿ, ‘ಗ್ರಾಮೀಣ ಭಾಗದ ಮಹಿಳೆಯರ ಸಬಲಿಕರಣಕ್ಕೆ ಬ್ಯಾಂಕ್ ಒತ್ತು ನೀಡಿದ್ದು, ದೊರೆಯುವ ಸೌಕರ್ಯಗಳ ಪ್ರಯೋಜನೆ ಪಡೆದುಕೊಳ್ಳಲು ಮುಂದಾಗಬೇಕು’ ಎಂದು ಕೋರಿದರು.</p>.<p>‘ಬ್ಯಾಂಕ್ಗಳು ಆರ್ಥಿಕ ಲಾಭಗಳಿಸಲು ಮಹಿಳೆಯರ ಪಾತ್ರವಹಿಸಿದ್ದಾರೆ. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಲು ಅರ್ಹರಿಗೆ ಸಾಲ ವಿವರಿಸಲಾಗುತ್ತಿದ್ದು, ಆದಾಯೋತ್ಪನ್ನ ಚಟುವಟಿಕೆ ಕೈಗೊಂಡು ಇತರರಿಗೂ ಉದ್ಯೋಗ ಕಲ್ಪಿಸಬೇಕು’ ಎಂದು ಸಲಹೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳಿಗೆ ಸಾಲ ಹಾಗೂ ಜಂಟಿ ಹೊಣೆಗಾರಿಕೆ ಸಾಲ ವಿತರಿಸಲಾಯಿತು. ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದ ಮಹಿಳೆಯನ್ನು ಅಭಿನಂದಿಸಲಾಯಿತು.</p>.<p>ಹಿರಿಯ ವ್ಯಸ್ಥಾಪಕ ಸುರೇಶ್, ವ್ಯವಸ್ಥಾಪಕ ಶ್ರೀನಿವಾಸಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>