<p><strong>ಬಂಗಾರಪೇಟೆ</strong>: ಪಟ್ಟಣದಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್, ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೊ ಮತ್ತು ಕೃಷಿ ವಿಜ್ಞಾನ ಕೇಂದ್ರ ಕೋಲಾರ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆ ಅಡಿಯಲ್ಲಿ ಜೈವಿಕ ಕೀಟ ನಿಯಂತ್ರಣ ಕ್ಷೇತ್ರೋತ್ಸವ ಕಾರ್ಯಕ್ರಮ ಬುಧವಾರ ನಡೆಯಿತು.</p>.<p>ಜೈವಿಕ ಕೀಟ ನಿಯಂತ್ರಣ ಕ್ಷೇತ್ರೋತ್ಸವವು ರೈತರಿಗೆ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಮತ್ತು ಪರಿಸರ ಸಂರಕ್ಷಿಸಲು ಸಹಾಯ ಮಾಡುತ್ತದೆ. ರಾಸಾಯನಿಕ ಕೀಟನಾಶಕಗಳ ಬದಲಾಗಿ, ಜೈವಿಕ ನಿಯಂತ್ರಣವು ಪರಿಸರ ಸ್ನೇಹಿ ಮತ್ತು ಮಾನವನ ಆರೋಗ್ಯಕ್ಕೆ ಸುರಕ್ಷಿತ ಎಂದು ಮಾಜಿ ಸಂಸದ ಎಸ್. ಮುನಿಸ್ವಾಮಿ ತಿಳಿಸಿದರು.</p>.<p>ರೈತ ಉತ್ಪಾದಕ ಕಂಪನಿಗಳು ರೈತರ ಉತ್ಪನ್ನಗಳನ್ನು ಮಾರಾಟ ಮಾಡಲು, ಉತ್ತಮ ಬೆಲೆ ಪಡೆಯಲು ಮತ್ತು ಕೃಷಿ ವೆಚ್ಚ ಕಡಿಮೆ ಮಾಡಲು ಸಹಾಯ ಮಾಡುತ್ತವೆ ಎಂದರು.</p>.<p>ಸುಶೀಲ್, ಕಪಾಲಿ ಶಂಕರ್, ಹೊಸ ರಾಯಪ್ಪ, ನಾರಾಯಣ ಸ್ವಾಮಿ, ಬೋಪ್ಪನಹಳ್ಳಿ ನಾರಾಯಣಪ್ಪ, ರಾಜಪ್ಪ, ಜೆ.ಶ್ರೀನಿವಾಸ್, ಸಾಗರ್ ಪ್ರಭು ಗುಂಡಪ್ಪ, ಬಿ.ನಾರಾಯಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಪಟ್ಟಣದಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್, ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೊ ಮತ್ತು ಕೃಷಿ ವಿಜ್ಞಾನ ಕೇಂದ್ರ ಕೋಲಾರ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆ ಅಡಿಯಲ್ಲಿ ಜೈವಿಕ ಕೀಟ ನಿಯಂತ್ರಣ ಕ್ಷೇತ್ರೋತ್ಸವ ಕಾರ್ಯಕ್ರಮ ಬುಧವಾರ ನಡೆಯಿತು.</p>.<p>ಜೈವಿಕ ಕೀಟ ನಿಯಂತ್ರಣ ಕ್ಷೇತ್ರೋತ್ಸವವು ರೈತರಿಗೆ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಮತ್ತು ಪರಿಸರ ಸಂರಕ್ಷಿಸಲು ಸಹಾಯ ಮಾಡುತ್ತದೆ. ರಾಸಾಯನಿಕ ಕೀಟನಾಶಕಗಳ ಬದಲಾಗಿ, ಜೈವಿಕ ನಿಯಂತ್ರಣವು ಪರಿಸರ ಸ್ನೇಹಿ ಮತ್ತು ಮಾನವನ ಆರೋಗ್ಯಕ್ಕೆ ಸುರಕ್ಷಿತ ಎಂದು ಮಾಜಿ ಸಂಸದ ಎಸ್. ಮುನಿಸ್ವಾಮಿ ತಿಳಿಸಿದರು.</p>.<p>ರೈತ ಉತ್ಪಾದಕ ಕಂಪನಿಗಳು ರೈತರ ಉತ್ಪನ್ನಗಳನ್ನು ಮಾರಾಟ ಮಾಡಲು, ಉತ್ತಮ ಬೆಲೆ ಪಡೆಯಲು ಮತ್ತು ಕೃಷಿ ವೆಚ್ಚ ಕಡಿಮೆ ಮಾಡಲು ಸಹಾಯ ಮಾಡುತ್ತವೆ ಎಂದರು.</p>.<p>ಸುಶೀಲ್, ಕಪಾಲಿ ಶಂಕರ್, ಹೊಸ ರಾಯಪ್ಪ, ನಾರಾಯಣ ಸ್ವಾಮಿ, ಬೋಪ್ಪನಹಳ್ಳಿ ನಾರಾಯಣಪ್ಪ, ರಾಜಪ್ಪ, ಜೆ.ಶ್ರೀನಿವಾಸ್, ಸಾಗರ್ ಪ್ರಭು ಗುಂಡಪ್ಪ, ಬಿ.ನಾರಾಯಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>